Homeಕರೋನಾ ತಲ್ಲಣತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ - ಸೋಂಕಿತರ ಆರೋಪ

ತುಮಕೂರಿನ ಕೋವಿಡ್‌ಕೇರ್ ಕೇಂದ್ರದಲ್ಲಿ ಮೂಲಸೌಕರ್ಯದ ಕೊರತೆ – ಸೋಂಕಿತರ ಆರೋಪ

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರಿದ್ದು, ಒಂದೇ ಶೌಚಾಲಯ, ಒಂದೇ ಒಂದು ಸ್ನಾನ ಗೃಹವಿದೆ. ಅವುಗಳು ಕೂಡ ಸ್ವಚ್ಛವಾಗಿಲ್ಲ.

- Advertisement -
- Advertisement -

ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಕೋವಿಡ್‌ಕೇರ್ ಸೆಂಟರ್‌ನಲ್ಲಿ ಸೋಂಕಿತರು ಯಾವುದೇ ಮೂಲಸೌಕರ್ಯ  ಇಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಒಂದು ವಾರ ಕಳೆದರು ಕೇಂದ್ರವನ್ನು ಸ್ವಚ್ಛಗೊಳಿಸುವುದಿಲ್ಲ ಸ್ವಾನಿಟೈಜ್ ಮಾಡುತ್ತಿಲ್ಲ ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಕೋವಿಡ್‌ಕೇರ್ ಕೇಂದ್ರದಲ್ಲಿ 40 ಮಂದಿ ರೋಗಲಕ್ಷಣವಿಲ್ಲದ ಕೊರೊನ ಸೋಂಕಿತರು ಇದ್ದಾರೆ. ಇಷ್ಟು ಜನರಿಗೆ ಒಂದೇ ಶೌಚಾಲಯ ಇದೆ. ಒಂದೇ ಒಂದು ಸ್ನಾನ ಗೃಹ ಇದೆ. ಇವುಗಳು ಕೂಡ ಸ್ವಚ್ಛವಾಗಿಲ್ಲ. ನಮ್ಮನ್ನು ಇಲ್ಲಿಗೆ ತಂದಿಟ್ಟಿದ್ದು ಯಾರೂ ಇತ್ತ ತಿರುಗಿಯೂ ನೋಡುತ್ತಿಲ್ಲ ಎಂದು ದೂರಿದ್ದಾರೆ.

ಶೌಚಾಲಯ ಒಂದೇ ಇದ್ದು ತುಂಬಾ ಸಮಸ್ಯೆಯಾಗುತ್ತಿದೆ. 40 ಜನರು ಒಂದೇ ಕಡೆ ಶೌಚಕ್ಕೆ ಹೋಗುವುದೆಂದರೆ ಎಂತಹ ಸಂಕಟದ ಸನ್ನಿವೇಶ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಮುಂಜಾನೆಯೇ ಎದ್ದು ಸರದಿ ಸಾಲಿನಲ್ಲಿ ನಿಲ್ಲಬೇಕು. ಅದನ್ನು ತಡೆದುಹಿಡಿಯುವುದು ಕಷ್ಟದ, ನೋವಿನ ಕೆಲಸ. ಉಸ್ತುವಾರಿ ವಹಿಸಿರುವವರು ಇದನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ತುಮಕೂರಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಸೋಂಕಿತರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗಿದೆ #NaanuGauri #COVID19

Posted by Naanu Gauri on Friday, August 14, 2020

ಕೇಂದ್ರದ ಉಸ್ತುವಾರಿ ವಹಿಸಿರುವವರಿಗೆ ಸಮಸ್ಯೆಗಳನ್ನು ಹೇಳಿದರೆ ಕೇಳುವುದಿಲ್ಲ. ಎಲ್ಲದಕ್ಕೂ ಪೊಲೀಸರಿಗೆ ಹೇಳುತ್ತೇವೆ ಎಂದು ಭಯ ಹುಟ್ಟಿಸುತ್ತಾರೆ. ನಾವು ಬಂದು ಏಳು ದಿನವಾಯ್ತು. ಐಸೋಲೇನ್ ಅವಧಿ ಏಳು ದಿನ ನಿಗದಿ ಮಾಡಿತ್ತು. ಆದರೂ ನಮ್ಮನ್ನು ಬಿಡುಗಡೆಗೊಳಿಸುತ್ತಿಲ್ಲ. ಈಗ ಹತ್ತು ದಿನ ಇರಬೇಕು ಎಂದು ಹೇಳುತ್ತಿದ್ದಾರೆ. ಯಾವುದೇ ಸೌಲಭ್ಯಗಳು ಇಲ್ಲ. ಇಂತಹ ಕೇಂದ್ರದಲ್ಲಿ ಇರುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲೂ ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಸ್ಯೆ ಇದೆಯೆಂಬ ಬಗ್ಗೆ ವಿಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಅದೂ ಕೂಡ ವೈರಲ್ ಆಗಿತ್ತು. ಈಗ ಕೋವಿಡ್ ಕೇರ್ ಕೇಂದ್ರದಲ್ಲೂ ಅದೇ ಪರಿಸ್ಥಿತಿ ಇದ್ದು ಸಮಸ್ಯೆಗಳಿಗೆ ಕೂಡಲೇ ಅಧಿಕಾರಿಗಳು ಸ್ಪಂಸಿದಬೇಕು ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಕಟ ರಾಷ್ಟ್ರ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಜೇಂದ್ರ ಕುಮಾರ್ ಗೌಡ ಹೇಳಿಕೆ ನೀಡಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಮಾಡದೆ ಇದ್ದ ಮೇಲೆ ಕೊರೊನ ಸೋಂಕಿತರನ್ನು ಸೇರಿಸಿ ಹಿಂಸೆ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ಸೂಕ್ತ ಕ್ರಮ ಕೈಗೊಂಡು ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದರೆ ಮನೆಯಲ್ಲೇ ಚಿಕಿತ್ಸೆ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.


ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...