Homeಮುಖಪುಟತೀವ್ರ ಆರ್ಥಿಕ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ 64% ವಿಶೇಷ ಚೇತನರು : ಸಮೀಕ್ಷೆ

ತೀವ್ರ ಆರ್ಥಿಕ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ 64% ವಿಶೇಷ ಚೇತನರು : ಸಮೀಕ್ಷೆ

ಗರಿಷ್ಠ ಸಂಖ್ಯೆಯ ವಿಶೇಷ ಚೇತನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಅಥವಾ ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಸಮೀಕ್ಷೆಯ ಫಲಿತಾಂಶ ತಿಳಿಸಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ತೀವ್ರಗೊಂಡಂತೆ, ಅಂಗವೈಕಲ್ಯ ಹೊಂದಿರುವ ಸುಮಾರು 64% ರಷ್ಟು ಜನರು ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಸುಮಾರು 60% ಜನರು ಈ ಸಮಯದಲ್ಲಿ ಶೂನ್ಯ ಆದಾಯವನ್ನು ಹೊಂದಿದ್ದಾರೆ ಎಂದು ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

ಗರಿಷ್ಠ ಸಂಖ್ಯೆಯ ವಿಶೇಷ ಚೇತನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಅಥವಾ ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದು ಸಮೀಕ್ಷೆಯ ಫಲಿತಾಂಶ ತಿಳಿಸಿದೆ.

ಇವಾರಾ ಫೌಂಡೇಶನ್, ದಶಮ್ಲಾವ್ ಯೂಟ್ಯೂಬ್ ಚಾನೆಲ್ ಮತ್ತು ವೀಕೇಪಬಲ್ ಡಾಟ್ ಕಾಮ್ ಸೇರಿ, ಜುಲೈ 18-27 2020 ರ ನಡುವೆ ನಡೆಸಿದ 2,000 ಕ್ಕೂ ಹೆಚ್ಚು ವಿಶೇಷ ಚೇತನರ ರಾಷ್ಟ್ರವ್ಯಾಪಿ ಸಮೀಕ್ಷೆಯ ಪ್ರಕಾರ, ಕೊರೊನಾ ಸಾಂಕ್ರಾಮಿಕ ಮತ್ತು ಲಾಕ್ಡೌನ್ ನಿರ್ಬಂಧಗಳು ಅವರ ದೈನಂದಿನ ಜೀವನ ಮತ್ತು ಮಾನಸಿಕ ಸ್ಥಿತಿಯ ಮೇಲೆ ತೀವ್ರವಾಗಿ ಪರಿಣಾಮ ಬೀರಿವೆ ಎಂದು ತಿಳಿದು ಬಂದಿದೆ.

ಆತಂಕದಿಂದ ಖಿನ್ನತೆ ಮತ್ತು ಆತ್ಮಹತ್ಯಾ ಆಲೋಚನೆಗಳವರೆಗಿನ ಎಲ್ಲಾ ಭಾವನಾತ್ಮಕ ಸವಾಲುಗಳನ್ನು ಪ್ರತಿ 75 ಮಂದಿ ಎದುರಿಸುತ್ತಿದ್ದಾರೆ.

ಪ್ರಸ್ತುತ ಸಮೀಕ್ಷೆಯಲ್ಲಿ ಒಟ್ಟು ಪ್ರತಿಕ್ರಿಯಿಸಿದವರಲ್ಲಿ ಸುಮಾರು 43.6 ಪ್ರತಿಶತದಷ್ಟು ಜನರು ತಮ್ಮ ಸಮಸ್ಯೆಗಳನ್ನು ಅಥವಾ ಭಾವನಾತ್ಮಕ ಸ್ಥಿತಿಯನ್ನು ಯಾರೊಂದಿಗೂ ಹಂಚಿಕೊಳ್ಳುತ್ತಿಲ್ಲ ಎಂದು ದತ್ತಾಂಶ ಬಹಿರಂಗಪಡಿಸುತ್ತದೆ.

ವಿಶೇಷ ಚೇತನರ ಉದ್ಯೋಗವು ಭಾರತದಲ್ಲಿ ಯಾವಾಗಲೂ ಪ್ರಮುಖ ವಿಷಯವಾಗಿದೆ. ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಈ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ.

ಪರೀಕ್ಷೆಗಳು/ಸಂದರ್ಶನಗಳ ರದ್ದು ಅಥವಾ ಮುಂದೂಡುವುದರಿಂದ ಹೆಚ್ಚಿನ ಸಂಖ್ಯೆಯ ಉದ್ಯೋಗ ಅರಸುವ ಅಂಗವಿಕಲರು ಜೀವನ ಅತಂತ್ರವಾಗಿದೆ ಎಂದು ಸಮೀಕ್ಷೆಯು ಬಹಿರಂಗಪಡಿಸುತ್ತದೆ.

ಕೆಲವರು ಈ ಸಮಯದಲ್ಲಿ ಆಹಾರ/ಆಶ್ರಯ/ಔಷಧದಂತಹ ಮೂಲಭೂತ ಅವಶ್ಯಕತೆಗಳನ್ನು ಪಡೆಯಲೂ ಸಾದ್ಯವಾಗುತ್ತಿಲ್ಲ ಎಂದು ಅದು ಹೇಳಿದೆ.

ಹಣಕಾಸಿನ ತೊಂದರೆಯನ್ನು ಅನುಭವಿಸುತ್ತಿರುವ 78% ಕ್ಕಿಂತ ಹೆಚ್ಚು ಜನರು ಮಾನಸಿಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಸಹ ಅನುಭವಿಸುತ್ತಿದ್ದಾರೆ.

ಒಟ್ಟು 868 ರಲ್ಲಿ 44% ರಷ್ಟು ಜನರು ಆತಂಕ, ಭಯ ಅಥವಾ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಉಳಿದವಲ್ಲಿ ಹೆಚ್ಚು ಗಂಭೀರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗಮನಿಸಲಾಗಿದೆ.

ಹಾಗಾಗಿ ಪ್ರಸ್ತುತ ಸಮೀಕ್ಷಾ ವರದಿಯು, ರಾಜ್ಯ ಅಂಗವೈಕಲ್ಯ ಆಯುಕ್ತರು ಇದನ್ನು ಗಮನಕ್ಕೆ ತೆಗೆದುಕೊಂಡು, ಆಹಾರ/ಆಶ್ರಯ/ಔಷಧಿಗಳಂತಹ ಮೂಲಭೂತ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವವರನ್ನು ಗುರುತಿಸಲು ಪಂಚಾಯತ್ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂದು ಶಿಫಾರಸು ಮಾಡಿದೆ.


ಇದನ್ನೂ ಓದಿ: ದೇಶದ ಮೊದಲ ದೃಷ್ಟಿಹೀನ ವಿಕಲಚೇತನ ಆಯುಕ್ತ ಪ್ರಸನ್ನ ಕುಮಾರ್ ಪಿಂಚಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...