Homeಚಳವಳಿ#prashantbhushan ಟ್ರೆಂಡಿಂಗ್: ಸುಪ್ರೀಂ ಕುರಿತು ಟ್ವಿಟರ್‌ನಲ್ಲಿ ಪರ-ವಿರೋಧ ಚರ್ಚೆ

#prashantbhushan ಟ್ರೆಂಡಿಂಗ್: ಸುಪ್ರೀಂ ಕುರಿತು ಟ್ವಿಟರ್‌ನಲ್ಲಿ ಪರ-ವಿರೋಧ ಚರ್ಚೆ

- Advertisement -
- Advertisement -

ಪ್ರಸ್ತುತ ಟ್ವಿಟರ್‌ನಲ್ಲಿ #prashantbhushan ಟ್ರೆಂಡ್ ಆಗುತ್ತಿದ್ದು, ಇವರ ಕುರಿತ ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಹೇಳಿಕೆಯು ಟ್ವಿಟರ್ ನಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ವಕೀಲ ಪ್ರಶಾಂತ್ ಭೂಷಣ್ ಮಾಡಿದ ಎರಡು ಟ್ವೀಟ್‌ಗಳ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅವರನ್ನು ತಪ್ಪಿತಸ್ತ ಎಂದು ಸುಪ್ರೀಂ ಕೊರ್ಟ್ ಹೇಳಿದೆ.

ತೀರ್ಪನ್ನು ಓದಿದ ನ್ಯಾಯಮೂರ್ತಿ ಬಿ ಆರ್ ಗವಾಯಿ, “ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಮಾಡಿದ್ದಾರೆ” ಎಂದು ಹೇಳಿದರು.

ಇದರ ಕುರಿತು, ಆರ್ಟಿಕಲ್-14 ಎಂಬ ಸುದ್ದಿತಾಣದ ಟ್ವಿಟ್ಟರ್ ಹ್ಯಾಂಡಲ್, ‘ಒಬ್ಬ ಪುಂಡ ಭಯದ ಮೂಲಕ ಶಾಲಾವರಣವನ್ನು ನಿಯಂತ್ರಿಸುತ್ತಾನೆ ಆದರೆ ಅದನ್ನು ತಪ್ಪಾಗಿ ಗೌರವ ಎಂದು ಭಾವಿಸಿರುತ್ತಾನೆ’ #prashanthbhushan ಎಂದು ಹೇಳಿದೆ. ಇದು 117 ಬಾರಿ ರೀಟ್ವೀಟ್ ಆಗಿದೆ.

ಸ್ವರಾಜ್ ಇಂಡಿಯಾದ ಮುಖಂಡ ಯೋಗೇಂದ್ರ ಯಾದವ್ ‘ನಾನು ಮತ್ತೆ ಹೇಳುತ್ತೇನೆ #prashanthbhushan, ಸತ್ಯದ ಪರ ನಿಲ್ಲುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 20 ರಂದು ನ್ಯಾಯಪೀಠ ಅವರ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ.

ಪ್ರಶಾಂತ್ ನ್ಯಾಯಾಂಗದ ವಿರುದ್ಧ ಯಾವುದೇ ದುರುದ್ದೇಶವಿಲ್ಲದೆ ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅವರ ಪರವಾಗಿ ವಾದಿಸಿದ್ದ ದುಶ್ಯಂತ್ ದವೆ ಹೇಳಿದ್ದರು.

ಪ್ರಶಾಂತ್ ನ್ಯಾಯಾಂಗ ನಿಂದನೆ ನೋಟಿಸ್‌ಗೆ ವಿವರವಾದ ಉತ್ತರದ ಅಫಿಡವಿಟ್ ಸಲ್ಲಿಸಿದ್ದು, ನ್ಯಾಯಾಲಯದ ಬಗ್ಗೆ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತಪಡಿಸುವುದು ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಹೇಳಿದ್ದರು.

ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಇತಿಹಾಸಕಾರ ರಾಮಚಂದ್ರ ಗುಹಾ, “ಭಾರತೀಯ ಪ್ರಜಾಪ್ರಭುತ್ವಕ್ಕೆ ಕರಾಳ ದಿನ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಶಾಂತ್ ಜೂನ್ 27ರಂದು ಸುಪ್ರೀಕೋರ್ಟ್ ಕುರಿತು ಹಾಗೂ ಜೂನ್ 29ರಂದು ಸಿಜೆಐ ಎಸ್‌ಎ ಬೋಬ್ಡೆ ಕುರಿತಂತೆ ಟ್ವೀಟ್‌ ಮಾಡಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ ಜುಲೈ 22ರಂದು ಪ್ರಶಾಂತ್‌ಗೆ ನೋಟಿಸ್ ಜಾರಿ ಮಾಡಿತ್ತು.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು

ಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ, ಅದಕ್ಕಾಗಿ ತನಿಖೆ: ಭೂಷಣ್ ಪರ ನಿಂತ ಸಾಮಾಜಿಕ ಕಾರ್ಯಕರ್ತರು

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...