Homeಚಳವಳಿ#prashantbhushan ಟ್ರೆಂಡಿಂಗ್: ಸುಪ್ರೀಂ ಕುರಿತು ಟ್ವಿಟರ್‌ನಲ್ಲಿ ಪರ-ವಿರೋಧ ಚರ್ಚೆ

#prashantbhushan ಟ್ರೆಂಡಿಂಗ್: ಸುಪ್ರೀಂ ಕುರಿತು ಟ್ವಿಟರ್‌ನಲ್ಲಿ ಪರ-ವಿರೋಧ ಚರ್ಚೆ

- Advertisement -
- Advertisement -

ಪ್ರಸ್ತುತ ಟ್ವಿಟರ್‌ನಲ್ಲಿ #prashantbhushan ಟ್ರೆಂಡ್ ಆಗುತ್ತಿದ್ದು, ಇವರ ಕುರಿತ ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಹೇಳಿಕೆಯು ಟ್ವಿಟರ್ ನಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ವಕೀಲ ಪ್ರಶಾಂತ್ ಭೂಷಣ್ ಮಾಡಿದ ಎರಡು ಟ್ವೀಟ್‌ಗಳ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅವರನ್ನು ತಪ್ಪಿತಸ್ತ ಎಂದು ಸುಪ್ರೀಂ ಕೊರ್ಟ್ ಹೇಳಿದೆ.

ತೀರ್ಪನ್ನು ಓದಿದ ನ್ಯಾಯಮೂರ್ತಿ ಬಿ ಆರ್ ಗವಾಯಿ, “ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಮಾಡಿದ್ದಾರೆ” ಎಂದು ಹೇಳಿದರು.

ಇದರ ಕುರಿತು, ಆರ್ಟಿಕಲ್-14 ಎಂಬ ಸುದ್ದಿತಾಣದ ಟ್ವಿಟ್ಟರ್ ಹ್ಯಾಂಡಲ್, ‘ಒಬ್ಬ ಪುಂಡ ಭಯದ ಮೂಲಕ ಶಾಲಾವರಣವನ್ನು ನಿಯಂತ್ರಿಸುತ್ತಾನೆ ಆದರೆ ಅದನ್ನು ತಪ್ಪಾಗಿ ಗೌರವ ಎಂದು ಭಾವಿಸಿರುತ್ತಾನೆ’ #prashanthbhushan ಎಂದು ಹೇಳಿದೆ. ಇದು 117 ಬಾರಿ ರೀಟ್ವೀಟ್ ಆಗಿದೆ.

ಸ್ವರಾಜ್ ಇಂಡಿಯಾದ ಮುಖಂಡ ಯೋಗೇಂದ್ರ ಯಾದವ್ ‘ನಾನು ಮತ್ತೆ ಹೇಳುತ್ತೇನೆ #prashanthbhushan, ಸತ್ಯದ ಪರ ನಿಲ್ಲುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 20 ರಂದು ನ್ಯಾಯಪೀಠ ಅವರ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ.

ಪ್ರಶಾಂತ್ ನ್ಯಾಯಾಂಗದ ವಿರುದ್ಧ ಯಾವುದೇ ದುರುದ್ದೇಶವಿಲ್ಲದೆ ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅವರ ಪರವಾಗಿ ವಾದಿಸಿದ್ದ ದುಶ್ಯಂತ್ ದವೆ ಹೇಳಿದ್ದರು.

ಪ್ರಶಾಂತ್ ನ್ಯಾಯಾಂಗ ನಿಂದನೆ ನೋಟಿಸ್‌ಗೆ ವಿವರವಾದ ಉತ್ತರದ ಅಫಿಡವಿಟ್ ಸಲ್ಲಿಸಿದ್ದು, ನ್ಯಾಯಾಲಯದ ಬಗ್ಗೆ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತಪಡಿಸುವುದು ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಹೇಳಿದ್ದರು.

ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಇತಿಹಾಸಕಾರ ರಾಮಚಂದ್ರ ಗುಹಾ, “ಭಾರತೀಯ ಪ್ರಜಾಪ್ರಭುತ್ವಕ್ಕೆ ಕರಾಳ ದಿನ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಶಾಂತ್ ಜೂನ್ 27ರಂದು ಸುಪ್ರೀಕೋರ್ಟ್ ಕುರಿತು ಹಾಗೂ ಜೂನ್ 29ರಂದು ಸಿಜೆಐ ಎಸ್‌ಎ ಬೋಬ್ಡೆ ಕುರಿತಂತೆ ಟ್ವೀಟ್‌ ಮಾಡಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ ಜುಲೈ 22ರಂದು ಪ್ರಶಾಂತ್‌ಗೆ ನೋಟಿಸ್ ಜಾರಿ ಮಾಡಿತ್ತು.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು

ಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ, ಅದಕ್ಕಾಗಿ ತನಿಖೆ: ಭೂಷಣ್ ಪರ ನಿಂತ ಸಾಮಾಜಿಕ ಕಾರ್ಯಕರ್ತರು

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...