Homeಕರೋನಾ ತಲ್ಲಣಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ - ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

ಕೊರೊನಾ ನಡುವೆಯೂ ಗ್ರಾಮೀಣ ಶಾಲೆಗಳಲ್ಲಿ ತರಗತಿ ಆರಂಭ – ಶಿಕ್ಷಣ ಸಚಿವರ ದ್ವಂದ್ವಕ್ಕೆ ಆಕ್ರೋಶ

- Advertisement -
- Advertisement -

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳು ಆರಂಭವಾಗಿವೆ. ವಾರದಲ್ಲಿ ಮೂರು ದಿನ ಶಾಲೆಯ ಆವರಣದಲ್ಲಿ ತರಗತಿಗಳು ನಡೆಸುತ್ತಿವೆ.

ದೈಹಿಕ ಅಂತರ ಕಾಪಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ. ತರಗತಿ ನಡೆಸದಂತೆ ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದರೂ ಶಿಕ್ಷಕರು ಇದಕ್ಕಿ ಕಿವಿಗೊಡುತ್ತಿಲ್ಲ. ‘ಬಿಇಒ ಹೇಳಿದ್ದಾರೆ. ಅವರ ಆದೇಶ ಪಾಲಿಸುವುದಷ್ಟೇ ನಮ್ಮ ಕೆಲಸ’ ಎಂದು ಶಿಕ್ಷಕರು ಪೋಷಕರಿಗೆ ಹೇಳಿಕಳಿಸುತ್ತಿರುವ ಉದಾಹರಣೆ ಗಳು ಕಂಡುಬಂದಿವೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೆಪ್ಟೆಂಬರ್ ತಿಂಗಳಲ್ಲೂ ಶಾಲಾ-ಕಾಲೇಜು ಆರಂಭವಾಗುವುದಿಲ್ಲ. ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ ಗ್ರಾಮೀಣ ಭಾಗದ ಒಂದೊಂದು ಗ್ರಾಮದ ಶಾಲೆಗಳು ಪ್ರಾರಂಭವಾಗಿದ್ದು ಸಚಿವರು ಹೇಳುತ್ತಿರುವುದು ಸುಳ್ಳು ಎಂಬುದು ಸಾಬೀತಾಗಿದೆ.

ಪಿಯು ಕಾಲೇಜುಗಳು ಆರಂಭವಾಗಿಲ್ಲ. ಆದರೆ ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಗಳಲ್ಲಿ ಪಾಠ ಭೋಧನೆ ಮಾಡಲಾಗುತ್ತಿದೆ. ಏಕೋಪಾಧ್ಯಾಯ ಶಾಲೆಗಳಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಹೇಳಿಕೊಡುತ್ತಿದ್ದಾರೆ. ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಗುರುವಾರ ಮತ್ತು ಶನಿವಾರ ಮಾತ್ರ ಶಾಲೆಯ ಹೊರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ.

ಮೂರು-ನಾಲ್ಕು ಶಿಕ್ಷಕರು ಇರುವ ಶಾಲೆಗಳಲ್ಲಿ 1-7 ನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆಯ ಆವರಣದ ಜೊತೆಗೆ ದೇವಾಲಯ, ಸಮುದಾಯ ಭವನಗಳಲ್ಲೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವ ನಿದರ್ಶನಗಳು ಇದೆ. ವಿದ್ಯಾರ್ಥಿಗಳು ಹೆಚ್ಚು ವಾಸಿಸುವ ಕಡೆಗಳಲ್ಲಿ ದೊಡ್ಡ ಮನೆಯ ಅಂಗಳದಲ್ಲಿ ಮಕ್ಕಳನ್ನು ದೈಹಿಕ ಅಂತರದಲ್ಲಿ ಕೂರಿಸಿ ಬೋಧನೆ ಮಾಡಲಾಗುತ್ತಿದೆ.

ಕಳೆದ ಓಂದು ವಾರದಿಂದಲೂ ತರಗತಿಗಳು ಆರಂಭವಾಗಿವೆ. ಗ್ರಾಮಾಂತರ ಪ್ರದೇಶದಲ್ಲಿ ಶಾಲೆಯ ಆವರಣ ದೇವಾಲಯದ ಆವರಣ, ಸಮುದಾಯ ಭವನ, ಮನೆಯ ಅಂಗಳದಲ್ಲಿ ಪಾಠ ಹೇಳಿಕೊಡಲಾಗುತ್ತಿದೆ. ಕೆಲವು ಕಡೆ ವಾರದಲ್ಲಿ ಮೂರು ದಿನ ನಡೆದರೆ, ಮತ್ತೆ ಕೆಲವು ಕಡೆ ವಾರದ ಏಳು ದಿನಗಳು ತರಗತಿ ನಡೆಯುತ್ತಿದೆ ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಶಿಕ್ಷಕರು ಪ್ರತಿನಿತ್ಯ ಶಾಲೆಗೆ ಹಾಜರಾಗಬೇಕು. ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಬೇಕು. ಪೋಷಕರ ಸಭೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಆಯಾ ತಾಲೂಕು ಕೇಂದ್ರದ ಬಿಇಒಗಳು ಇಂತಹ ಸೂಚನೆ ನೀಡಿದ್ದು ಶಿಕ್ಷಕರು ವಾಹನ ವ್ಯವಸ್ಥೆ ಮಾಡಿಕೊಂಡು ತಾವು ಕೆಲಸ ಮಾಡುವ ಜಾಗಗಳಿಗೆ ತೆರಳಬೇಕಾದಂಥ ಅನಿವಾರ್ಯತೆ ಇದೆ. ಶಾಲೆಗೆ, ದೇವಸ್ಥಾನಕ್ಕೆ ಬರುವಷ್ಟು ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸ್ಥಿತಿ ಬಂದಿದೆ. ಎಲ್ಲಾ ಮಕ್ಕಳು ಶಾಲೆಗೆ ಬರುವುದು ಕಡ್ಡಾಯವಲ್ಲವಾದರೂ ಗೈರು ಆಗುವ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.

ಸಚಿವ ಸುರೇಶ್ ಕುಮಾರ್ ಶಾಲೆಗಳು ಪ್ರಾರಂಭವಾಗಿಲ್ಲವೆಂದು ಮೇಲ್ನೋಟಕ್ಕೆ ಹೇಳುತ್ತಿದ್ದರೂ ಅದಕ್ಕೆ ವಿರುದ್ದ ದಿಕ್ಕಿನಲ್ಲಿ ಹಳ್ಳಿಗಳಲ್ಲಿ ತರಗತಿಗಳು ನಡೆಯುವಂತೆ ನೋಡಿಕೊಳ್ಳಲಾಗಿದೆ. ಇದು ಸಚಿವರ ದ್ವಂದ್ವ ನಡೆಗೆ ಹಿಡಿದ ಕನ್ನಡಿಯಾಗಿದೆ ಎಂದು ದೂರಲಾಗಿದೆ.

ಶಾಲೆಗೆ ಹೋಗದೆ ಇರುವ ಮಕ್ಕಳು ಪಾಠ ಕೇಳಲು ಸಾಧ್ಯವಾಗದೆ ಶಿಕ್ಷಣದಲ್ಲಿ ಹಿಂದೆ ಬೀಳುವ ಸಾಧ್ಯತೆ ಹೆಚ್ಚಾಗಿದೆ. ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆಯೇ ಎಂಬ ಬಗ್ಗೆ ಸಚಿವರು ಮತ್ತು ಸರ್ಕಾರದಿಂದ ಯಾವುದೇ ಸ್ಪಷ್ಟೀಕರಣ ಬಂದಿಲ್ಲ.

ನಗರದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಆರಂಭವಾಗಿಲ್ಲ. ಆದರೆ ಖಾಸಗಿ ಶಾಲೆಗಳಲ್ಲಿ ಅನ್‌ಲೈನ್ ತರಗತಿಗಳು ನಡೆಯುತ್ತಿವೆ. ಕೆಲವು ಶಾಲೆಗಳು ಆನ್‌ಲೈನ್ ತರಗತಿಗಳನ್ನು ತೆಗೆದುಕೊಂಡರೆ ಮತ್ತೆ ಕೆಲವು ಶಾಲೆಗಳಲ್ಲಿ ಆನ್ಲೈನ್‌ನಲ್ಲಿ ವಿಡಿಯೋ ಮಾಢಿ ಪೋಷಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಹೋಂ ವರ್ಕ್ ಕೂಡ ಮೊಬೈಲ್‌ನಲ್ಲೇ ಫೋಟೋ ತೆಗೆದು ಸಂಬಂಧಪಟ್ಟ ಶಾಲೆಗಳಿಗೆ ಕಳಿಸುವಂತಹ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಕೊರೊನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಗ್ರಾಮೀಣ ಪ್ರದೇಶದಲ್ಲೂ ಹರಡುತ್ತಿದೆ. ಆದರೆ ಮಕ್ಕಳ ಜೀವ ರಕ್ಷಣೆ ಕಡೆ ಸರ್ಕಾರ ಗಮನಹರಿದಂತೆ ಕಾಣುತ್ತಿಲ್ಲ. ಆನ್‌ಲೈನ್ ಶಿಕ್ಷಣ ಇಲ್ಲ, ಆಫ್‌ಲೈನ್ ಶಿಕ್ಷಣವೂ ಇಲ್ಲ. ಕೋವಿಡ್-19 ರಿಂದ ಜೀವಗಳನ್ನು ರಕ್ಷಿಸುವುದು ಮುಖ್ಯ ಎಂದು ಹೇಳಿದ ಸರ್ಕಾರ ತನ್ನ ಮಾತಿನಂತೆ ತಾನೆ ನಡೆದುಕೊಳ್ಳದಿರುವುದು ಸೋಜಿಗದ ಸಂಗತಿಯಾಗಿದೆ.

ವಿದ್ಯಾಗಮದಡಿ ಎಲ್ಲಾ ಕಡೆ ಶಾಲೆ

ಶಿಕ್ಷಕರು ಪ್ರತಿಯೊಂದು ಹಳ್ಳಿಗಳಿಗೂ ಹೋಗಿ ಮಕ್ಕಳನ್ನು ಒಂದೆಡೆ ಸೇರಿಸಿ ಪಾಠ ಹೇಳುತ್ತಾರೆ. ಯಾವ ಮಕ್ಕಳನ್ನು ಕೈಬಿಡುವುದಿಲ್ಲ. ಖಾಸಗಿ ಶಾಲೆಗೆ ಹೋಗುತ್ತಿದ್ದರೂ ಆ ಮಕ್ಕಳನ್ನು ಸೇರಿಸಿಕೊಂಡೇ ಪಾಠ ಹೇಳಿಕೊಡಲಾಗುತ್ತಿದೆ. ಉದಾಹರಣೆಗೆ ಒಂದು ಶಾಲೆಗೆ ಮೂರು ಹಳ್ಳಿಗಳಿಂದ ಮಕ್ಕಳು ಬರುತ್ತಿದ್ದರೆ ಆ ಮೂರು ಹಳ್ಳಿಗಳಿಗೇ ಹೋಗಿ ಸೂಕ್ತ ಜಾಗವನ್ನು ನೋಡಿ ಅಲ್ಲಿ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಹೆಸರು ಹೇಳಲಿಚ್ಚಿಸದ ಸಿಆರ್‌ಪಿ ಒಬ್ಬರು ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.


ಓದಿ: ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...