Homeಮುಖಪುಟರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ಕಾಂಗ್ರೆಸ್‌ನ ಎಲ್ಲಾ ಬಂಡಾಯಗಾರರು ಸೇರಿ 107 ಸದಸ್ಯರು, 13 ಪಕ್ಷೇತರ ಶಾಸಕರು, ಸಿಪಿಎಂ ಇಬ್ಬರು ಸದಸ್ಯರು ಸೇರಿದಂತೆ ಒಟ್ಟು 125 ಮತಗಳು ಅಶೋಕ್ ಗೆಹ್ಲೋಟ್ ಪರವಾಗಿ ಬಂದವು.

- Advertisement -
- Advertisement -

ರಾಜಕೀಯ ಬಿಕ್ಕಟ್ಟು ಉಲ್ಬಣಿಸಿದ್ದ ರಾಜಸ್ಥಾನದ ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಗೆಹ್ಲೋಟ್ ಮಂಡಿಸಿದ ವಿಶ್ವಾಸ ಮತ ಗೊತ್ತುವಳಿ ಪರ 125 ಮತಗಳು ಪಡೆದು ಗೆಲುವು ಸಾಧಿಸಿದ್ದಾರೆ. ವಿರುದ್ಧವಾಗಿ 75 ಮತಗಳು ಮಾತ್ರ ಚಲಾವಣೆಗೊಂಡವು.

ಕಾಂಗ್ರೆಸ್ ನ ಎಲ್ಲಾ ಬಂಡಾಯಗಾರರು ಸೇರಿ 107 ಸದಸ್ಯರು, 13 ಪಕ್ಷೇತರ ಶಾಸಕರು, ಸಿಪಿಎಂ ಇಬ್ಬರು ಸದಸ್ಯರು,ಸೇರಿ ಒಟ್ಟು 125 ಮತಗಳು ಅಶೋಕ್ ಗೆಹ್ಲೋಟ್ ಪರವಾಗಿ ಮತ ಚಲಾಯಿಸಿದರು. ಹೀಗಾಗಿ ಒಂದು ತಿಂಗಳ ಕಾಲ ಅನಿಶ್ಚಿತತೆಯಲ್ಲಿದ್ದ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ರಾಜಸ್ಥಾನ ಸರ್ಕಾರ ಉರುಳಿಹೋಗುವ ಎಲ್ಲಾ ಲಕ್ಷಣಗಳಿದ್ದರೂ ಒಂದು ತಿಂಗಳಾಂತ್ಯದಲ್ಲಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಸರ್ಕಾರ ಸೇಫಾಗಿದೆ. ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿದ್ದ ಸಚಿನ್ ಪೈಲಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಬಂಡಾಯ ತಣ್ಣಗಾಗಿತ್ತು. ಇದು ಗೆಹ್ಲೋಟ್ ಗೆಲುವಿನ ಹಾದಿಯನ್ನು ಸುಗಮಗೊಳಿಸಿತ್ತು.

ಬಹುಜನ ಸಮಾಜ ಪಕ್ಷದ ಆರು ಸದಸ್ಯರನ್ನು ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿಗೆ ನೀಡುವ ಸ್ಪೀಕರ್ ನಿರ್ಧಾರಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ರಾಜಸ್ಥಾನ ಹೈಕೋರ್ಟ್ ಕೂಡ ಅದೇ ಮಾರ್ಗವನ್ನು ಅನುಸರಿಸಿತ್ತು. ಆದರೆ ಇಂದು ವಿಶ್ವಾಸ ಮತ ಯಾಚಿಸಿದ ಗೆಹ್ಲೋಟ್ ಗೆಲುವು ಕಂಡರು. ಹಾಗಾಗಿ ಗೆಹ್ಲೋಟ್ ಸರ್ಕಾರ ಮುಂದಿನ ಅವಧಿ ಪೂರೈಸುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿ 19 ಶಾಸಕರು ಬಂಡಾಯದ ಬಾವುಟ ಹಾರಿಸಿದ ಸಂದರ್ಭವನ್ನು ಬಳಸಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.

ಕರ್ನಾಟಕ, ಮಧ್ಯಪ್ರದೇಶದಲ್ಲಿ ರಾಜಕೀಯ ಪಲ್ಲಟಗಳು ನಡೆದಂತೆ ರಾಜಸ್ಥಾನದಲ್ಲೂ ನಡೆಸಬಹುದು ಎಂಬ ಬಿಜೆಪಿ ತಂತ್ರಗಳಿಗೆ ಹಿನ್ನಡೆಯಾಗಿದೆ. ಶಾಸಕರ ಕುದುರೆ ವ್ಯಾಪಾರಕ್ಕೂ ಸೋಲುಂಟಾಗಿದೆ. ಇದರಿಂದ ರಾಜಸ್ಥಾನದಲ್ಲಿ ಉದ್ಭವಿಸಿದ್ದ ಅನಿಶ್ಚಿತತೆ ಮತ್ತು ರಾಜಕೀಯ ಬಿಕ್ಕಟ್ಟು ಕೊನೆಗೊಂಡಂತಾಗಿದೆ.


ಇದನ್ನೂ ಓದಿ: ಬಿಜೆಪಿ ವಿಲೀನ ಮಾಡಿದ್ರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...