Homeಮುಖಪುಟರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ಕಾಂಗ್ರೆಸ್‌ನ ಎಲ್ಲಾ ಬಂಡಾಯಗಾರರು ಸೇರಿ 107 ಸದಸ್ಯರು, 13 ಪಕ್ಷೇತರ ಶಾಸಕರು, ಸಿಪಿಎಂ ಇಬ್ಬರು ಸದಸ್ಯರು ಸೇರಿದಂತೆ ಒಟ್ಟು 125 ಮತಗಳು ಅಶೋಕ್ ಗೆಹ್ಲೋಟ್ ಪರವಾಗಿ ಬಂದವು.

- Advertisement -
- Advertisement -

ರಾಜಕೀಯ ಬಿಕ್ಕಟ್ಟು ಉಲ್ಬಣಿಸಿದ್ದ ರಾಜಸ್ಥಾನದ ವಿಧಾನಸಭೆಯಲ್ಲಿಂದು ಮುಖ್ಯಮಂತ್ರಿ ಗೆಹ್ಲೋಟ್ ಮಂಡಿಸಿದ ವಿಶ್ವಾಸ ಮತ ಗೊತ್ತುವಳಿ ಪರ 125 ಮತಗಳು ಪಡೆದು ಗೆಲುವು ಸಾಧಿಸಿದ್ದಾರೆ. ವಿರುದ್ಧವಾಗಿ 75 ಮತಗಳು ಮಾತ್ರ ಚಲಾವಣೆಗೊಂಡವು.

ಕಾಂಗ್ರೆಸ್ ನ ಎಲ್ಲಾ ಬಂಡಾಯಗಾರರು ಸೇರಿ 107 ಸದಸ್ಯರು, 13 ಪಕ್ಷೇತರ ಶಾಸಕರು, ಸಿಪಿಎಂ ಇಬ್ಬರು ಸದಸ್ಯರು,ಸೇರಿ ಒಟ್ಟು 125 ಮತಗಳು ಅಶೋಕ್ ಗೆಹ್ಲೋಟ್ ಪರವಾಗಿ ಮತ ಚಲಾಯಿಸಿದರು. ಹೀಗಾಗಿ ಒಂದು ತಿಂಗಳ ಕಾಲ ಅನಿಶ್ಚಿತತೆಯಲ್ಲಿದ್ದ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ರಾಜಸ್ಥಾನ ಸರ್ಕಾರ ಉರುಳಿಹೋಗುವ ಎಲ್ಲಾ ಲಕ್ಷಣಗಳಿದ್ದರೂ ಒಂದು ತಿಂಗಳಾಂತ್ಯದಲ್ಲಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಸರ್ಕಾರ ಸೇಫಾಗಿದೆ. ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿದ್ದ ಸಚಿನ್ ಪೈಲಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಬಂಡಾಯ ತಣ್ಣಗಾಗಿತ್ತು. ಇದು ಗೆಹ್ಲೋಟ್ ಗೆಲುವಿನ ಹಾದಿಯನ್ನು ಸುಗಮಗೊಳಿಸಿತ್ತು.

ಬಹುಜನ ಸಮಾಜ ಪಕ್ಷದ ಆರು ಸದಸ್ಯರನ್ನು ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿಗೆ ನೀಡುವ ಸ್ಪೀಕರ್ ನಿರ್ಧಾರಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ರಾಜಸ್ಥಾನ ಹೈಕೋರ್ಟ್ ಕೂಡ ಅದೇ ಮಾರ್ಗವನ್ನು ಅನುಸರಿಸಿತ್ತು. ಆದರೆ ಇಂದು ವಿಶ್ವಾಸ ಮತ ಯಾಚಿಸಿದ ಗೆಹ್ಲೋಟ್ ಗೆಲುವು ಕಂಡರು. ಹಾಗಾಗಿ ಗೆಹ್ಲೋಟ್ ಸರ್ಕಾರ ಮುಂದಿನ ಅವಧಿ ಪೂರೈಸುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿ 19 ಶಾಸಕರು ಬಂಡಾಯದ ಬಾವುಟ ಹಾರಿಸಿದ ಸಂದರ್ಭವನ್ನು ಬಳಸಿಕೊಂಡು ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.

ಕರ್ನಾಟಕ, ಮಧ್ಯಪ್ರದೇಶದಲ್ಲಿ ರಾಜಕೀಯ ಪಲ್ಲಟಗಳು ನಡೆದಂತೆ ರಾಜಸ್ಥಾನದಲ್ಲೂ ನಡೆಸಬಹುದು ಎಂಬ ಬಿಜೆಪಿ ತಂತ್ರಗಳಿಗೆ ಹಿನ್ನಡೆಯಾಗಿದೆ. ಶಾಸಕರ ಕುದುರೆ ವ್ಯಾಪಾರಕ್ಕೂ ಸೋಲುಂಟಾಗಿದೆ. ಇದರಿಂದ ರಾಜಸ್ಥಾನದಲ್ಲಿ ಉದ್ಭವಿಸಿದ್ದ ಅನಿಶ್ಚಿತತೆ ಮತ್ತು ರಾಜಕೀಯ ಬಿಕ್ಕಟ್ಟು ಕೊನೆಗೊಂಡಂತಾಗಿದೆ.


ಇದನ್ನೂ ಓದಿ: ಬಿಜೆಪಿ ವಿಲೀನ ಮಾಡಿದ್ರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...