Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...