Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...