Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...