Homeಅಂತರಾಷ್ಟ್ರೀಯಕಮಲಾ ಹ್ಯಾರಿಸ್ ಗಿಂತ ಹೆಚ್ಚು ಭಾರತೀಯರ ಬೆಂಬಲ ನನಗಿದೆ: ಟ್ರಂಪ್

ಕಮಲಾ ಹ್ಯಾರಿಸ್ ಗಿಂತ ಹೆಚ್ಚು ಭಾರತೀಯರ ಬೆಂಬಲ ನನಗಿದೆ: ಟ್ರಂಪ್

"ಈ ವ್ಯಕ್ತಿ ನಿಮ್ಮ ಘನತೆ ಮತ್ತು ಗೌರವವನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಬಿಡೆನ್ ಅಮೆರಿಕದಲ್ಲಿ ಯಾರೂ ಸುರಕ್ಷಿತವಾಗಿರುವುದಿಲ್ಲ" ಎಂದು ಟ್ರಂಪ್ ಹೇಳಿದ್ದಾರೆ.

- Advertisement -
- Advertisement -

ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಅವರ ಮೇಲೆ ವಾಗ್ದಾಳಿ ನಡೆಸಿದ್ದು, ‘ಬಿಡನ್ ಅವರ ಅಮೆರಿಕದಲ್ಲಿ ಯಾರೂ ಸುರಕ್ಷಿತವಾಗಿರುವುದಿಲ್ಲ’ ಎಂದು ಹೇಳಿದ್ದಾರೆ.

ಜೋ ಬಿಡನ್ ಅವರು ಅಧ್ಯಕ್ಷರಾದರೆ, ತಕ್ಷಣವೇ ಅಮೆರಿಕದ ಪ್ರತಿಯೊಂದು ಪೊಲೀಸ್ ಇಲಾಖೆಯನ್ನು ತೆರವುಗೊಳಿಸಲು ಶಾಸನವನ್ನು ಹೊರಡಿಸುತ್ತಾರೆ. ಬಹುಶಃ ಕಮಲಾ ಹ್ಯಾರಿಸ್ ಅವರ ನಡೆಯೂ ಈ ವಿಷಯದಲ್ಲಿ ಕೆಟ್ಟದಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಅವರು ಭಾರತೀಯ ಪರಂಪರೆಯವರಾಗಿದ್ದಾರೆ. ಅವರಿಗಿಂತ ಹೆಚ್ಚು ಭಾರತೀಯರ ಬೆಂಬಲವನ್ನು ನಾನು ಹೊಂದಿದ್ದೇನೆ ಎಂದು ಸಿಟಿ ಆಫ್ ನ್ಯೂಯಾರ್ಕ್ ಪೊಲೀಸ್ ಬೆನೆವೊಲೆಂಟ್ ಅಸೋಸಿಯೇಶನ್ ಸದಸ್ಯರೊಂದಿಗಿನ ಸಂವಾದದಲ್ಲಿ ಟ್ರಂಪ್ ಹೇಳಿದರು.

ಟ್ರಂಪ್, ತಮ್ಮ ಭಾಷಣದಲ್ಲಿ, ಕಮಲಾ ಹ್ಯಾರಿಸ್ ಪೊಲೀಸರಿಗೆ ಅನಾನುಕೂಲಕರವಾದ ತೀಕ್ಷ್ಣ ಗುರಿಯನ್ನು ಹೊಂದಿದ್ದಾರೆ. ಇವರೊಂದಿಗೆ ಜೋ ಬಿಡನ್ “ಪೊಲೀಸರ ಮೇಲೆ ಎಡಪಂಥೀಯ ಯುದ್ಧ” ಸಾರುತ್ತಿರುವ ಕೇಂದ್ರದಲ್ಲಿದ್ದಾರೆ ಎಂದು ಹೇಳಿದರು.

“ಈ ವ್ಯಕ್ತಿ ನಿಮ್ಮ ಘನತೆ ಮತ್ತು ಗೌರವವನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಬಿಡೆನ್ ಅಮೆರಿಕದಲ್ಲಿ ಯಾರೂ ಸುರಕ್ಷಿತವಾಗಿರುವುದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪೊಲೀಸರನ್ನು ವಂಚಿಸಲು ಬಿಡನ್ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತನ್ನು ಟ್ರಂಪ್ ಪದೇ ಪದೇ ಪ್ರತಿಪಾದಿಸುತ್ತಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

ಶುಕ್ರವಾರ, ಅಧ್ಯಕ್ಷ ಟ್ರಂಪ್ ಅವರ ಮರುಚುನಾವಣೆ ಅಭಿಯಾನವನ್ನು ನ್ಯೂಯಾರ್ಕ್ ನಗರದ ಪೊಲೀಸ್ ಬೆನೆವೊಲೆಂಟ್ ಅಸೋಸಿಯೇಷನ್ ​​(NYCPBA) ಅನುಮೋದಿಸಿದೆ.

ಶುಕ್ರವಾರ ನಡೆದ NYCPBA ಸಭೆಯಲ್ಲಿ ಮಾತನಾಡಿದ ನ್ಯೂಯಾರ್ಕ್ ನಗರದ ಮಾಜಿ ಮೇಯರ್ ರುಡಾಲ್ಫ್ ಗಿಯುಲಿಯಾನಿ, ಕಮಲಾ ಹ್ಯಾರಿಸ್ ಅವರ ಪ್ರಾಸಿಕ್ಯೂಟರಿ ದಾಖಲೆಯ ಮೇಲೆ ದಾಳಿ ಮಾಡಿದರು. ಹ್ಯಾರಿಸ್ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿದ್ದಾಗ, “ಅವರು ಕಡಿಮೆ ಸಂಖ್ಯೆಯ ಜನರನ್ನು ವಿಚಾರಣೆಗೆ ಒಳಪಡಿಸಿದರು” ಎಂದು ಹೇಳಿದರು.


ಇದನ್ನೂ ಓದಿ: ಶ್ವೇತಭವನದ ಹೊರಗೆ ಗುಂಡು ಹಾರಾಟ; ಪತ್ರಿಕಾಗೋಷ್ಟಿಯಿಂದ ಹೊರನಡೆದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...