Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...