Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...