Homeಮುಖಪುಟಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ಆತ್ಮನಿರ್ಭರ ಭಾರತಕ್ಕೆ 130 ಕೋಟಿ ಪರಿಹಾರಗಳಿವೆ: ನರೇಂದ್ರ ಮೋದಿ

ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸತತ ಏಳನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಇಂದು ಬೆಳಿಗ್ಗೆ ಧ್ವಜಾರೋಹಣ ಮಾಡಿದರು.ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಈ ಆಚರಣೆ ನಡೆಯುತ್ತಿರುವುದರಿಂದ ಕಟ್ಟುನಿಟ್ಟಾದ ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

ಪ್ರಧಾನಿ ಮೋದಿಯವರು ಎರಡನೇ ಅವಧಿ ಗೆದ್ದ ನಂತರ ಅವರ ಎರಡನೇ ಸ್ವಾತಂತ್ರ್ಯ ದಿನಾಚರಣೆ ಇದು. ಇಂದಿನ ಮೋದಿಯವರ ಭಾಷಣದ ಪ್ರಮುಖಾಂಶಗಳು ಇಲ್ಲಿವೆ;

  1. ಭಾರತವು ಶತಮಾನಗಳ ವಿದೇಶಿ ಆಡಳಿತವನ್ನು ಎದುರಿಸಿ ಸ್ವಾತಂತ್ರ್ಯ ಪಡೆದಿದೆ. ನಮ್ಮ ರಾಷ್ಟ್ರ, ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳನ್ನು ನಾಶಮಾಡಲು ಎಲ್ಲಾ ಪ್ರಯತ್ನಗಳು ನಡೆದವು. ಆದರೆ ಅವು ನಮ್ಮ ಆತ್ಮನಂಬಿಕೆ ಮತ್ತು ದೃಢನಿಶ್ಚಯದ ಕುರಿತು ಕಡಿಮೆ ಅಂದಾಜು ಮಾಡಿದ್ದವು. ಹಾಗಾಗಿಯೇ ನಾವು ಬದುಕಿದ್ದೇವೆ ಮತ್ತು ವಿಜಯಶಾಲಿಗಳೂ ಆಗಿದ್ದೇವೆ.
  2. ತಮ್ಮ ಧ್ವಜಗಳನ್ನು ಹಾರಿಸಲು ಹೊಸ ಸ್ಥಳಗಳನ್ನು ಹುಡುಕುವಲ್ಲಿ ನಿರತರಾಗಿದ್ದವರು, ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಬಯಸಿದವರು ನಮ್ಮನ್ನು ಕಡಿಮೆ ಅಂದಾಜು ಮಾಡಿದ್ದಾರೆ. ಪ್ರಪಂಚವು ಎರಡು ವಿಶ್ವ ಯುದ್ಧಗಳನ್ನು ಕಂಡಿತು. ಅನೇಕ ರಾಷ್ಟ್ರಗಳು ಅಪಾರ ವಿನಾಶವನ್ನು ಎದುರಿಸಿದವು, ಆದರೆ ನಾವು ಈ ಎಲ್ಲದರಿಂದ ಗೆದ್ದು ಬಂದಿದ್ದೇವೆ. ನಮ್ಮ ಅಪ್ರತಿಮ ಸ್ವಾತಂತ್ರ್ಯ ಹೋರಾಟವನ್ನು ಜಗತ್ತು ನೋಡಿದೆ.
  3. ಇಂದು, ಭಾರತವು ಮೂರು ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿದೆ. ಇದು ಪ್ರಯೋಗಗಳ ವಿವಿಧ ಹಂತಗಳಲ್ಲಿದೆ. ಅಂತಿಮ ಅನುಮತಿಯನ್ನು ಪಡೆಯಲು ಸಿದ್ಧವಾದ ನಂತರ, ಅದರ ವಿತರಣೆಗಾಗಿ ನಾವು ಮಾರ್ಗಸೂಚಿಯನ್ನು ಪ್ರಕಟಿಸುತ್ತೇವೆ.
  4. ಆತ್ಮ ನಿರ್ಭರ್ (ಸ್ವಾವಲಂಬಿ) ಆಗಲು ಭಾರತಕ್ಕೆ ಲಕ್ಷಾಂತರ ಸವಾಲುಗಳಿವೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅದು ನಿಜವೂ ಹೌದು. ಪ್ರಪಂಚದ ಇತರ ಭಾಗಗಳಿಂದ ತೀವ್ರ ಸ್ಪರ್ಧೆ ಇದೆ. ಆದರೆ ನಾನು ಯಾವಾಗಲೂ ಹೇಳುವುದೇನೆಂದರೆ, ಭಾರತವು ಲಕ್ಷಾಂತರ ಸವಾಲುಗಳನ್ನು ಎದುರಿಸಲು ಅದು 130 ಕೋಟಿ ಪರಿಹಾರಗಳನ್ನು ಹೊಂದಿದೆ ಎಂದು.
  5. ಮೊದಲೇ ಹೇಳಿದಂತೆ, ರೈತರ ಆದಾಯವನ್ನು ದ್ವಿಗುಣಗೊಳಿಸಲು ನಾವು ಕೆಲಸ ಮಾಡುತ್ತಿದ್ದೇವೆ. ನಿಮ್ಮಲ್ಲಿ ಕೆಲವರಿಗೆ ಇದು ತಿಳಿದಿಲ್ಲದಿರಬಹುದು. ಆದರೆ ಬೇರೆ ಯಾವುದೇ ವ್ಯವಹಾರಕ್ಕಿಂತ ಭಿನ್ನವಾಗಿ, ಒಬ್ಬ ಉದ್ಯಮಿ ತಮ್ಮ ಉತ್ಪನ್ನ ಅಥವಾ ಸೇವೆಯನ್ನು ದೇಶದ ಅಥವಾ ಪ್ರಪಂಚದ ಯಾವುದೇ ಭಾಗದಲ್ಲಿ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಹೊಂದಿದ್ದಾನೆ. ಅದೂ ಅವರು ಬಯಸುವ ಬೆಲೆಗೆ. ನಮ್ಮ ರೈತರಿಗೆ ಇಲ್ಲಿಯವರೆಗೆ ಆ ಸ್ವಾತಂತ್ರ್ಯ ಇರಲಿಲ್ಲ. ಅವರು, ಮಾರಾಟ ಮಾಡಲು ಹೇಳಿದವರಿಗೆ ಮಾತ್ರ ಮಾರಾಟ ಮಾಡಬಹುದಿತ್ತು. ಈಗ, ನಾವು ಈ ನಿರ್ಬಂಧಗಳನ್ನು ತೆಗೆದುಹಾಕಿದ್ದೇವೆ ಮತ್ತು ರೈತರಿಗೆ ಉತ್ತಮ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ನೀಡಿದ್ದೇವೆ.
  6. ಸಾಂಕ್ರಾಮಿಕ ರೋಗದ ಮಧ್ಯೆ ರಾಷ್ಟ್ರ ಸೇವೆ ಮಾಡಲು ದಣಿವರಿಯದೇ ಕೆಲಸ ಮಾಡಿದ ಎಲ್ಲಾ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ದಾದಿಯರಿಗೆ ಇಡೀ ರಾಷ್ಟ್ರದ ಪರವಾಗಿ, ಎಲ್ಲಾ ಕರೋನಾ-ಯೋಧರ ಪ್ರಯತ್ನಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ರಾಷ್ಟ್ರ ಅವರಿಗೆ ನಮಸ್ಕರಿಸುತ್ತದೆ.
  7. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಿದಾಗ, ಏನು ಬೇಕಾದರೂ ಸಾಧಿಸಬಹುದು ಎಂದು ನಂಬಿದ್ದೇವೆ. ನಾವು ಎಂದಿಗೂ ಪಿಪಿಇ ಕಿಟ್‌ಗಳನ್ನು ತಯಾರಿಸಲಿಲ್ಲ. ಮಾಸ್ಕ್ ಮತ್ತು ವೆಂಟಿಲೇಟರ್‌ಗಳ ಉತ್ಪಾದನೆಯು ಅಲ್ಪವಾಗಿತ್ತು. ಆದರೆ ಇಂದು ನಾವು ಎಲ್ಲವನ್ನೂ ತಯಾರಿಸುತ್ತಿದ್ದೇವೆ.
  8. ನಾವು 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತೆ, ನಮ್ಮ ಪ್ರಮುಖ ಮೈಲಿಗಲ್ಲನ್ನು ಎದುರು ನೋಡುತ್ತಿದ್ದೇವೆ. ಇದು ನಮ್ಮ ಸ್ವಾತಂತ್ರ್ಯದ 75 ನೇ ವರ್ಷ. ನಾವು ಆ ಮೈಲಿಗಲ್ಲನ್ನು ತಲುಪಿದಾಗ, ಅದನ್ನು ಅದ್ದೂರಿಯಾಗಿ ಆಚರಿಸುತ್ತೇವೆ.
  9. ಇಂದು, ನಾವು ಭಾರತವನ್ನು ಅತೀ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಭಾರತವನ್ನು ನಿರ್ಮಿಸಲು, ಆತ್ಮ ನಿರ್ಭಾರ್ (ಸ್ವಾವಲಂಬಿ) ಭಾರತವನ್ನು ಅಳವಡಿಸಿಕೊಂಡಿದ್ದೇವೆ. ಭಾರತ ಖಂಡಿತವಾಗಿಯೂ ಇದನ್ನು ಸಾಧಿಸುತ್ತದೆ. ಭಾರತವು ಏನನ್ನಾದರೂ ಸಾಧಿಸಲು ದೃಢನಿಶ್ಚಯಿಸಿದಾಗ ಅದು ಸಾಧ್ಯವಾಗಿದೆ ಎಂಬುದಕ್ಕೆ ಇತಿಹಾಸವು ಸಾಕ್ಷಿಯಾಗಿದೆ. ಸ್ವಾವಲಂಬಿ ಭಾರತ ಈಗ 130 ಕೋಟಿ ಭಾರತೀಯರ ಮಂತ್ರವಾಗಿದೆ.
  10. ನಾವು ಇನ್ನೂ ಎಲ್ಲಿಯವರೆಗೆ ಕಚ್ಚಾ ವಸ್ತುಗಳನ್ನು ರಫ್ತು ಮಾಡಿ, ಸಿದ್ಧಪಡಿಸಿದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು? ನಾವು ಈ ಚಕ್ರವನ್ನು ಕೊನೆಗೊಳಿಸುವ ಸಮಯ ಬಂದಿದೆ. ಭಾರತವು ಈಗ ತಾನು ಅನುಭೋಗಿಸುವ ಎಲ್ಲವನ್ನೂ ತಯಾರಿಸಬೇಕು. ಜೊತೆಗೆ ನಾವು ಬೆಳೆದಂತೆ ಜಗತ್ತಿಗೆ ರಫ್ತು ಮಾಡಬೇಕು.

ಇದನ್ನೂ ಓದಿ: ಕೋವಿಡ್‌ನಿಂದ ಸ್ವಾತಂತ್ರ್ಯ: ಆಗಸ್ಟ್ 15 ರಂದು ಪಣತೊಡಲು ಮೋದಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...