Homeಕರ್ನಾಟಕಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

- Advertisement -
- Advertisement -

ಇಂದು ಭಾರತವು ಸ್ವಾತಂತ್ರ್ಯ ದಿನ ಆಚರಿಸುತ್ತಿರುವ ಸಂದರ್ಭದಲ್ಲಿ”ನಮಗೆ ಸ್ವಾತಂತ್ರ್ಯವೇನೋ ಸಿಕ್ಕಿತ್ತು, ಆದರೆ ನಮ್ಮ ಸ್ವಾಯುತ್ತತೆ ಕಳೆದುಹೋಯಿತು” ಎಂದು ಕನ್ನಡಿಗರು ಕೂಗು ಹಾಕಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಕೊಡದ, ಕಾಯ್ದೆ ಕಾನೂನುಗಳನ್ನು ಸ್ಥಳೀಯ ಭಾಷೆಯಲ್ಲಿ ಒದಗಿಸದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಿಗರು, ಹಿಂದಿ ಹೇರಿಕೆಯ ವಿರುದ್ಧ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಆರಂಭವಾಗಿರುವ ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಅಭಿಯಾನವು ಇಂದು ಸ್ವಾತಂತ್ರ್ಯ ದಿನಾಚರಣೆಯಂದು ಬಿರುಸು ಪಡೆದುಕೊಂಡಿದೆ. ನೂರಾರು ಕನ್ನಡಿಗರು ಕೇಂದ್ರ ಸರ್ಕಾರದ ಸ್ಥಳೀಯ ಭಾಷೆಗಳ ನಿರ್ಲಕ್ಷ್ಯವನ್ನು ಎತ್ತಿತೋರಿಸಿದ್ದಾರೆ.

ಟ್ವಿಟ್ಟರ್‌ನಲ್ಲಿ ಕುವೆಂಪು ಮತ್ತು ಬೇಂದ್ರೆಯವರ ಹೇಳಿಕೆಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ವಿರುದ್ಧ ದನೆಯೆತ್ತಲಾಗಿದೆ.

ಭಾರತ ಸರಕಾರ ಕನ್ನಡದಲ್ಲಿ ಕಾನೂನು ರೂಪಿಸುವ/ತಿದ್ದುಪಡಿ ಮಾಡುವ ಅಂಶವನ್ನು ಕನ್ನಡದಲ್ಲಿ ನೀಡದಿರಲು ಸುಪ್ರಿಂ ಕೋರ್ಟಿಗೆ ಹೋಗಿದೆ. ಇದರಿಂದ ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಾದ ಅಂಶವಿಷ್ಟೆ – ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು ಎಂದು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕನ್ನಡ ನಾಡಿನಲ್ಲಿರುವ ಕೇಂದ್ರ ಸರಕಾರದ ಇಲಾಖೆಗಳಲ್ಲಿ ನಮ್ಮ ಮಂದಿ ಮುಂಬಡ್ತಿ ಪಡೆಯಲು, ದಿನಕ್ಕೊಂದು ಹಿಂದಿ ಪದ ಕಲಿಯಬೇಕು, ಹಿಂದಿಯಲ್ಲಿ ಸಹಿ ಹಾಕುವುದನ್ನು ಕಲಿಯಬೇಕು, ಹಿಂದಿ ಸಪ್ತಾಹದಲ್ಲಿ ಭಾಗವಹಿಸಬೇಕು. ಇದು ವೈವಿದ್ಯತೆಯನ್ನು ಗೌರವಿಸುವ ಒಕ್ಕೂಟವೇ? ಇದು ನಮಗೆ ಸ್ವಾತಂತ್ರದಿಂದ ಸಿಕ್ಕ ಉಡುಗೊರೆಯೇ? ಎಂದು ಮಲ್ಲಿಕಾರ್ಜುನ್ ಎಂಬುವವರು ಪ್ರಶ್ನಿಸಿದ್ದಾರೆ.

ನಮ್ಮೂರಿನ ವಿಮಾನ ನಿಲ್ದಾಣಗಳಿಗೆ ನಮಗೆ ಬೇಕಾದ ಹೆಸರಿಡುವ ಸ್ವಾತಂತ್ರ ನಮಗಿಲ್ಲ. ಕನ್ನಡಿಗರನ್ನು ದೆಹಲಿಯಿಂದ ಹಿಂದಿ ಮಂದಿ ಆಳೋದನ್ನ ಸ್ವಾತಂತ್ರ ಎನ್ನಲಾದೀತೆ ? ಕನ್ನಡಿಗರೇ, ರಾಜಕೀಯ ಸ್ವಾಯತ್ತತೆ ಇಲ್ಲದ ಸ್ವಾತಂತ್ರಕ್ಕೆ ಯಾವುದೇ ಅರ್ಥವಿಲ್ಲ ಎಂದು ಎಂ ರಾಮಚಂದ್ರರವರು ಅಭಿಪ್ರಾಯಪಟ್ಟಿದ್ದಾರೆ.

ಜಿಎಸ್ಟಿ ಒಪ್ಪಿಕೊಂಡ ದಿನವೇ ನಮ್ಮ ಹಣಕಾಸಿನ ಸ್ವಾತಂತ್ರ್ಯವನ್ನು ಕಳೆದುಕೊಂಡೆವು. ನಮ್ಮ ತೆರಿಗೆ ಹಣವನ್ನ ಡೆಲ್ಲಿಯವರಿಗೆ ಒಪ್ಪಿಸದೆ ನಮ್ಮವರ ಏಳಿಗೆಗಾಗಿ, ನಾಡಿನ ಏಳಿಗೆಗಾಗಿ ಬಳಸುವ ದಿನ ಬಂದಾಗಲೆ, ಈ ಗುಲಾಮಗಿರಿಯ ಸಂಕೋಲೆಗಳಿಂದ ಬಿಡುಗಡೆ ಎಂದು ಶೃತಿ ಎಚ್.ಎಂ ತಿಳಿಸಿದ್ದಾರೆ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು


ಪಠ್ಯದಲ್ಲಿ ಭಾಷಾ ಆಯ್ಕೆಯ ಸ್ವತಂತ್ರ ನಮಗೆ ಸಿಕ್ಕಿದೆಯೆ? ನಮ್ಮ ನೆಲದಲ್ಲಿ ನಮ್ಮ ನುಡಿಯಲ್ಲಿ ಸೇವೆ ದೊರೆಯುವ ಸ್ವತಂತ್ರ ಸಿಕ್ಕಿದೆಯೆ? ಅನಾವಶ್ಯಕ ಹಿಂದಿ ಹೇರಿಕೆಯಿಂದ ಸ್ವತಂತ್ರ ಸಿಕ್ಕಿದೆಯೆ? ಹಿಂದಿಗಿರುವ ಪ್ರಾಶಸ್ತ್ಯ ಕನ್ನಡಕ್ಕೆ ಸಿಕ್ಕಿದೆಯೆ? ಎಂದು ಚೈತ್ರರವರು ಅಭಿಪ್ರಾಯಪಟ್ಟಿದ್ದಾರೆ.

ಭಾರತ ಸರ್ಕಾರ ಒಕ್ಕೂಟ ಧರ್ಮಪಾಲಿಸುತ್ತಿಲ್ಲ. ಹಿಂದಿವಾಲಾಗಳಿಗೆ ಕೇಳದೆಯೇ ಎಲ್ಲಾ ಸೇವೆಗಳು ಅವರ ಭಾಷೆಯಲ್ಲಿ ಸಿಗುತ್ತೆ. ಹಿಂದಿಯೇತರರು ಬೇಡಿಕೊಂಡರು ಅವರ ನುಡಿಯಲ್ಲಿ ಸೇವೆ ಕೊಡಲ್ಲ. ಏಕೆ ಈ ತಾರತಮ್ಯ? ಭಾರತವೆಂದರೆ ಹಿಂದಿಯೆಂದು ಪ್ರತಿಹಂತದಲ್ಲೂ ಬಿಂಬಿಸಲು ಹೊರಟಿದೆ. ಇದು ಒಕ್ಕೂಟಕ್ಕೆ ಮಾಡುವ ದ್ರೋಹವೇ ಸರಿ ಎಂದು ಕನ್ನಡಿಗ ಸಾಗರ್ ರವಿನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಸ್ವಾತಂತ್ರ್ಯ ನಮಗೆ ಕೊಡಿ.. ಸ್ವತಂತ್ರರಾಗಿದ್ದವರನ್ನ ಒಕ್ಕೂಟದಲ್ಲಿ ಕಟ್ಟಿಹಾಕಿ, ಬಂಧಿಮಾಡಿ, ಹಿಂದಿ ಹೇರಿಕೆ ಮಾಡಿ, ಎಲ್ಲವನ್ನ ಕಿತ್ತುಕೊಂಡು ಉತ್ತರದವರನ್ನು ಮಾತ್ರ ಬೆಳೆಸಿದರು. ಕನ್ನಡದೇಶದ ಜನರು ಸರ್ವಸ್ವತಂತ್ರರು. ನಮ್ಮ ಹಕ್ಕನ್ನ ನಮಗೆ ಕೊಡಿ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...