Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...