Homeಮುಖಪುಟ57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

57,128 ಕೋಟಿ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡಲು RBI ಒಪ್ಪಿಗೆ!

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

- Advertisement -
- Advertisement -

2019-20 ನೇ ಸಾಲಿನ ಆರ್ಥಿಕ ವರ್ಷದಲ್ಲಿ 57,128 ಕೋಟಿ ರೂಗಳ ಹೆಚ್ಚಿನ ಲಾಭಾಂಶವನ್ನು ಕೇಂದ್ರ ಸರ್ಕಾರಕ್ಕೆ ನೀಡುವುದಕ್ಕೆ RBI ಒಪ್ಪಿಗೆ ಸೂಚಿಸಿದೆ. RBI ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ 584ನೇ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ.

ತೀವ್ರ ಆರ್ಥಿಕ ಕುಸಿತ ಮತ್ತು ಕೊರೊನಾ ಸಾಂಕ್ರಾಮಿಕದ ಸಮಸ್ಯೆಯಿಂದ ಸರ್ಕಾರದ ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದ್ದರಿಂದ ಏಪ್ರಿಲ್-ಜೂನ್ ಅವಧಿಯಲ್ಲಿ ವಿತ್ತೀಯ ಕೊರತೆಯು ದಾಖಲೆಯ 6.62 ಲಕ್ಷಕೋಟಿ ರೂಗಳಿಗೆ ಏರಿಕೆಯಾಗಿರುವ ಸಂದರ್ಭದಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿದೆ.

ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಪರಿಣಾಮವನ್ನು ನಿಯಂತ್ರಿಸುವ ಮತ್ತು ಇತರ ಕ್ರಮಗಳನ್ನು ಪರಿಶೀಲಿಸಿದ ನಂತರ RBI ಆಡಳಿತವು 2019-20ರ (ಜುಲೈನಿಂದ ಜೂನ್ ವರೆಗೆ) ಲೆಕ್ಕಪತ್ರ ವರ್ಷಕ್ಕಾಗಿ ಹೆಚ್ಚುವರಿಯಾಗಿ 57.128 ಕೋಟಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಲು ಒಪ್ಪಿದೆ. ಈ ಅವಧಿಯನ್ನು ಲೆಕ್ಕಪತ್ರ ವರ್ಷವೆಂದು ಪರಿಗಣಿಸಲಾಗುತ್ತದೆ.

2020-21 ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ ಆರ್‌ಬಿಐ ಮತ್ತು ಇತರ ಸರ್ಕಾರೀ ಹಣಕಾಸು ಸಂಸ್ಥೆಗಳಿಂದ ರೂ. 60,000 ಕೋಟಿ ಲಾಭಾಂಶವನ್ನು ಅಂದಾಜಿಸಲಾಗಿದೆ. ಆರ್‌ಬಿಐನಿಂದ ಹಣದ ಪಾವತಿಯನ್ನು ಹೆಚ್ಚಿಸುವಂತೆ ಸರ್ಕಾರವು ಇತ್ತೀನ ವರ್ಷಗಳಲ್ಲಿ ಒತ್ತಡವನ್ನು ಹಾಕುತ್ತಿದೆ.

ಕಳೆದ ವರ್ಷ RBI ರೂ. 1.23 ಲಕ್ಷಕೋಟಿ ಲಾಭಾಂಶ ಮತ್ತು ರೂ. 52,640 ಕೋಟಿ ಹೆಚ್ಚುವರಿ ಬಂಡವಾಳ ಸೇರಿದಂತೆ ರೂ. 1.76 ಲಕ್ಷಕೋಟಿ ದಾಖಲೆ ಮೊತ್ತವನ್ನು ಸರ್ಕಾರಕ್ಕೆ ನೀಡಿತ್ತು.

ಈಗ ಕೊರೊನಾದಿಂದಾಗಿ ಉಂಟಾಗುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹಾಗೂ ಆರ್ಥಿಕತೆಯನ್ನು ಬೆಂಬಲಿಸಲು ಸರ್ಕಾರವು ಅಂದಾಜು, 60,000 ಕೋಟಿ ರೂ. ಬಯಸಿತ್ತು ಎನ್ನಲಾಗಿದೆ.

ಕೊರೊನಾ ವೈರಸ್ ಅನ್ನು ಎದುರಿಸಲು ಘೋಷಿಸಿದ ಸಂಪೂರ್ಣ ಲಾಕ್‌ಡೌನ್‌ನಿಂದಾಗಿ ಬಡವರಿಗೆ ಸಹಾಯ ಮಾಡಲು ಮತ್ತು ಆರ್ಥಿಕತೆಯ ವಿವಿಧ ವಿಭಾಗಗಳನ್ನು ಪುನರುಜ್ಜೀವನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೇ 12 ರಂದು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದರು.

ಸ್ಥಗಿತಗೊಂಡ ಆರ್ಥಿಕತೆಯು ಸರ್ಕಾರದ ತೆರಿಗೆ ಸಂಗ್ರಹವನ್ನು ಭಾದಿಸಿತ್ತು. ಇದರ ಪರಿಣಾಮವಾಗಿ ಹಣಕಾಸಿನ ಕೊರತೆಯು ಜೂನ್‌ನಲ್ಲಿ ಕೊನೆಗೊಂಡ ತ್ರೈಮಾಸಿಕ ಹಣಕಾಸು ಅವಧಿಯಲ್ಲಿ 6.6 ಲಕ್ಷ ಕೋಟಿ ರೂ.ಗೂ ಅಧಿಕವಾಗಿದೆ.

ನಾಲ್ಕು ದಶಕಗಳಲ್ಲಿ ದೇಶದ ಜಿಡಿಪಿ ಮೊದಲ ಬಾರಿಗೆ ಸಂಕುಚಿತಗೊಳ್ಳುವ ನಿರೀಕ್ಷೆಯಿರುವುದರಿಂದ ಹಣಕಾಸಿನ ಕೊರತೆಯು ಸುಮಾರು 7.5% ಕ್ಕೆ ಹೆಚ್ಚಾಗುತ್ತದೆ ಎಂದು ಅನೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯು ಸುಮಾರು 5.3% ರಷ್ಟು ಕುಗ್ಗುತ್ತದೆ ಎಂದು ಅಧ್ಯಯನಗಳು ಅಂದಾಜಿಸಿವೆ.

ಬಿಮಲ್ ಜಲನ್ ಸಮಿತಿಯ ಶಿಫಾರಸುಗಳ ಪ್ರಕಾರ ಪಾವತಿಸಬೇಕಾದ ಲಾಭಾಂಶವನ್ನು ನಿರ್ಧರಿಸಲು ಹೊಸ ಬಂಡವಾಳ ಚೌಕಟ್ಟನ್ನು ಅಳವಡಿಸಿಕೊಂಡ ನಂತರ ಕಳೆದ ವರ್ಷ ಕೇಂದ್ರ ಬ್ಯಾಂಕ್ 1.76 ಲಕ್ಷ ಕೋಟಿ ರೂ. ವನ್ನು ಪಾವತಿಸಿತ್ತು.


ಓದಿ: ಮನೆಯಲಿ ಇದ್ದರೆ ಚಿನ್ನ ಚಿಂತೆ ಯಾಕೆ ಅಣ್ಣ?! ರಿಸರ್ವ್ ಬ್ಯಾಂಕ್ ಮೀಸಲು ನಿಧಿಗೆ ಸರಕಾರದ ಕನ್ನ!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...