Homeಚಳವಳಿನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ...

ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ.

- Advertisement -
- Advertisement -

ಯಾವಾಗಲೂ ಅರ್ಧ ತೋಳಿನ ಕಾಟನ್ ಅಂಗಿ, ದೊಗಳೆ ಪ್ಯಾಂಟು, ಕನ್ನಡಕ, ಬಗಲಿಗೆ ಒಂದು ಚೀಲ ಹಾಗೂ ಹೃದಯಪೂರ್ವಕ ನಗುವಿನೊಂದಿಗೆ ಕಾಣಿಸಿಕೊಳ್ಳುವ ವರ್ನನ್ ಗೊನ್ಸಾಲ್ವೆಸ್ ಒಬ್ಬ ಕ್ರಿಯಾಶೀಲ ಬುದ್ಧಿವಂತನಾಗಿ ಕಂಡುಬರುತ್ತಾರೆ. ಆರು ವರ್ಷದ ಮಗುವಿನಿಂದ ಹಿಡಿದು 60 ವರ್ಷದವರೊಂದಿಗೂ ಅವರು ಸಲೀಸಾಗಿ ಬೆರೆಯುತ್ತಾರೆ. ಅವರ ಬಾಹ್ಯನೋಟ ಅವರ ಹೃದಯದಲ್ಲಿ ಸದಾಕಾಲ ಹುದುಗಿರುವ ಸಂತೋಷವನ್ನು ಪ್ರತಿಫಲಿಸುತ್ತದೆ. ಅವರು ಕಾಲೇಜಿನಲ್ಲಿದ್ದಾಗ ಒಂದು ಬ್ಯಾಂಡ್ ಶುರು ಮಾಡಿದ್ದರು. ಆದರೆ ಜನಚಳವಳಿಯ ಭಾಗವಾದ ನಂತರ ಅದನ್ನು ಬಿಟ್ಟರು. ಈಗಲೂ ಅವರು ಹಾಡಿದಾಗ 70ರ ದಶಕದ ರಾಕ್ ಸಂಗೀತದ ರುಚಿಕಟ್ಟು ಅದಕ್ಕಿದೆ.

ವರ್ನನ್ ಅವರ ಬರಹಗಳಲ್ಲಿ ಅವರ ಕಾಣ್ಕೆ ಸ್ಪಷ್ಟವಾಗಿ ಕಂಡುಬರುತ್ತದೆ. ವರ್ಗ, ಜಾತಿ, ಜನಾಂಗದ ಭೇದಗಳಿಲ್ಲದ, ಲೈಂಗಿಕ ಸಮಾನತೆಯ ತತ್ವಗಳನ್ನೊಳಗೊಂಡ ಹಾಗೂ ನ್ಯಾಯಯುತವಾದ ಸಮಾಜದ ಅವರ ನೋಟ ಅವರ ಬರಹಗಳನ್ನು ಓದಿದರೆ ಸ್ಪಷ್ಟವಾಗುತ್ತದೆ. ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವ ಅವರು ಕ್ಲಿಷ್ಟ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ಸೂಕ್ಷ್ಮ ಮತ್ತು ಸಮತೋಲನದ ವಾದಗಳನ್ನು ಮುಂದಿಸುತ್ತಾರೆ. ವರ್ನನ್ ಪ್ರಗತಿಪರ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಅರ್ಥ ಮಾಡಿಕೊಳ್ಳಲು ಸದಾ ಉತ್ಸುಕರಾಗಿರುತ್ತಾರೆ.

ಮುಂಬಯಿಯ ಭಾಯಕಲ್ಲಾದ ಒಂದು ಚಾಳನಲ್ಲಿ ಬೆಳೆದ ವರ್ನನ್ ಅವರ ತಂದೆತಾಯಿ ಮಂಗಳೂರು ಮೂಲದ ಕ್ಯಾಥೊಲಿಕ್ಕರು. ಓದಿನಲ್ಲಿ ಯಾವಾಗಲೂ ಮುಂದಿದ್ದ ವರ್ನನ್, ಮುಂಬಯಿ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಸ್ವರ್ಣ ಪದಕ ಪಡೆದವರು. ಶಿಕ್ಷಣ ಮುಗಿಸಿ, ಸೀಮೆನ್ಸ್ ಕಂಪನಿಯಲ್ಲಿ ಕೆಲ ದಿನ ಕಾರ್ಪೋರೇಟ್ ನೌಕರಿ ಮಾಡಿದರು. ನಂತರ ಮುಂಬಯಿಯ ಟ್ರೇಟ್ ಯುನಿಯನ್‌ಗಳು, ಸ್ಲಮ್‌ನಲ್ಲಿ ಇರುವುವರ ಹಾಗೂ ದುಡಿಯುವ ವರ್ಗದವರೊಂದಿಗೆ ಕೆಲಸ ಮಾಡಲು ತಮ್ಮ ನೌಕರಿಯನ್ನು ಬಿಟ್ಟರು. ಅದೇ ಸಮಯದಲ್ಲಿ ಮುಂಬಯಿಯ ಕೆಲವು ಪ್ರಮುಖ ಕಾಲೇಜುಗಳಾದ ರೂಪರೇಲ್ ಕಾಲೇಜು, ಎಚ್‌ಆರ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜು ಮತ್ತು ಅಕ್ಬರ್ ಪೀರ್‌ಭೋಯ್ ವಾಣಿಜ್ಯ ಮತ್ತು ಅರ್ಥಶಾಸ್ತ್ರ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು.

1983ರ ಹೊತ್ತಿಗೆ ಅವರು ನಾಗಪುರ ಸಮೀಪದ ಚಂದ್ರಪುರದಲ್ಲಿ ಬಂದು ನೆಲಸಿದರು. ಅಲ್ಲಿ ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಒಳಗೊಂಡು ಇತರ ಅಸಂಘಟಿತ ವಲಯದ ಕಾರ್ಮಿಕರೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದರು. 1984ರಲ್ಲಿ ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಸೂಸಾನ್ ಅಬ್ರಾಹಮ್ ಜೊತೆಗೆ ಲಗ್ನವಾದರು. ಅದು ಎರಡು ವಿಶಿಷ್ಟ ಹಾಗೂ ತೀವ್ರ ಸ್ವತಂತ್ರ ಮನಸ್ಸುಗಳ ಮಿಲನವಾಗಿತ್ತು. ಚಂದ್ರಪುರದಲ್ಲಿ ಒಂದು ದಶಕ ಕೆಲಸ ಮಾಡಿ, 1994ರಲ್ಲಿ ಮಗ ಸಾಗರ್ ಹುಟ್ಟಿದ ನಂತರ ಮುಂಬಯಿಗೆ ಮರಳಿದರು.

2007ರ ಆಗಸ್ಟ್ 19ರಂದು ಮಹಾರಾಷ್ಟ್ರ ಎಟಿಎಸ್ ವರ್ನನ್ ಅವರನ್ನು ಮುಂಬಯಿಯ ಅಂಧೇರಿಯ ಮನೆಯಿಂದ ಬಂಧಿಸಿದರು. ಆದರೆ ಅವರ ಬಂಧನವನ್ನು ಇನ್ನೊಬ್ಬ ಸಹ ಆರೋಪಿ ಎಸ್ ಶ್ರೀಧರ್ ಅವರ ಗೋವಂಡಿಯ ಮನೆಯಲ್ಲಿ ಮಾಡಲಾಯಿತು ಎಂದು ಸುಳ್ಳಾಗಿ ತೋರಿಸಲಾಯಿತು. ಅವರ ಮೇಲೆ ಸ್ಫೋಟಕ ವಸ್ತುಗಳನ್ನು ಇಟ್ಟುಕೊಂಡ ಟಾಪ್ ಲೆವೆಲ್ ನಕ್ಸಲೈಟ್ ಎಂಬ ಆಪಾದನೆಯನ್ನು ಹೊರೆಸಲಾಯಿತು. ಅದಕ್ಕೆ ಕೆಲ ತಿಂಗಳು ಮುಂಚೆ, ವರ್ನನ್ ಅವರು ಮಹಾರಾಷ್ಟ್ರದ ಚಂದ್ರಪುರ ಜಿಲ್ಲೆಯ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು. ಅವರ ಮೇಲೆ 20 ಪ್ರಕರಣಗಳನ್ನು ದಾಖಲಿಸಲಾಯಿತು. ವಿಚಾರಣಾಧೀನ ಕೈದಿಯಾಗಿ ಸುಮಾರು 6 ವರ್ಷ ಜೈಲಿನಲಿದ್ದರು. 20 ರಲ್ಲಿ 18 ಪ್ರಕರಣಗಳಲ್ಲಿ ನಿರ್ದೋಷಿ ಎಂದು ತೀರ್ಪು ಬಂತು. ಒಂದು ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದು, ಈಗ ನಾಗಪುರ ಹೈಕೋರ್ಟ್‌ನಲ್ಲಿ ಅದರ ವಿರುದ್ಧ ಅಪೀಲ್ ಸಲ್ಲಿಸಲಾಗಿದೆ. ಹಾಗೂ ಕೊನೆಯ ಪ್ರಕರಣದಲ್ಲಿ ಬಿಡುಗಡೆ ಮಾಡಬೇಕು ಎನ್ನುವ ಅರ್ಜಿ ಗುಜರಾತ್ ಹೈಕೋರ್ಟ್ ಮುಂದಿದೆ.

ಜೈಲಿನಲ್ಲಿ ವಿಚಾಣಾಧೀನ ಕೈದಿಯಾಗಿ ವರ್ನನ್ ತಮ್ಮ ಬಹುತೇಕ ಸಮಯವನ್ನು ಬರೆಯುವುದರಲ್ಲಿ ಕಳೆದರು. ಸದ್ಯಕ್ಕೆ ಸೆರೆವಾಸದ ಬಗ್ಗೆಯ ಬರಹಗಳ ಸಂಗ್ರಹದ ಮೇಲೆ ಕೆಲಸ ಮಾಡುತ್ತಿದ್ದಾರೆ. ಜೈಲಿನಲ್ಲಿದ್ದುಕೊಂಡೇ, ಸಣ್ಣ ಕಥೆಗಳ ಸಂಗ್ರಹವನ್ನು ಸಂಪಾದಿಸಿದರು, ಅದರಲ್ಲಿಯ ಒಂದು ಕಥೆ, ಜೈಲ್‌ಬರ್ಡ್ ಜಬ್ಬಾರ್ ಎಂಬುದನ್ನು ಪಕ್ಕಾ ಬಂಬಯ್ಯಾ ಶೈಲಿಯಲ್ಲಿ ಬರೆಯಲಾಗಿದೆ. ಅದರೊಂದಿಗೆ ಮರಾಠಿ ಲೇಖಕ ಅಣ್ಣಾಭಾವು ಸಾಠೆ ಅವರ ಕಥೆಗಳನ್ನು ಇಂಗ್ಲೀಷಿಗೆ ಅನುವಾದ ಮಾಡಿದರು. ಅದನ್ನು ಅ ಕ್ಲಚ್ ಆಫ್ ಶಾರ್ಟ್ ಸ್ಟೋರೀಸ್ ಎಂಬ ಶೀರ್ಷಿಕೆಯಲ್ಲಿ ಅಲೆಫ್ ಪ್ರಕಾಶನ ಪ್ರಕಟಿಸಿತು. ಜೈಲಿನಿಂದ ಬಿಡುಗಡೆಯಾದ ನಂತರ ಅನೇಕ ಲೇಖನಗಳನ್ನು ಬರೆದಿದ್ದಾರೆ. ಅದರಲ್ಲಿ ಯುಎಪಿಎ ಕಾನೂನನ್ನು ಕೊನೆಗೊಳಿಸುವುದರ ಬಗ್ಗೆ, ದಲಿತ ಮತ್ತು ಆದಿವಾಸಿ ಸಮುದಾಯ ಹಕ್ಕುಗಳು, ಪ್ರಸಕ್ತ ಕಾನೂನುಗಳು, ಅಂಚಿನಲ್ಲಿರುವ ದುರ್ಬಲ ಸಮುದಾಯಗಳ ವಿರುದ್ಧ ಸರಕಾರವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಹೇಗೆ ದುರ್ಬಳಿಕೆ ಮಾಡುತ್ತಿದೆ, ಕಾರ್ಪೋರೆಟ್‌ಗಳು ಮತ್ತು ಸರ್ಕಾರದ ನೆಕ್ಸಸ್‌ನಿಂದ ಆಗುವ ಭೂಕಬಳಿಕೆ ಹೀಗೆ ಹಲವು ವಿಷಯಗಳ ಬಗ್ಗೆ ಬರೆದಿದ್ದಾರೆ. ಇತ್ತೀಚಿಗೆ ಪ್ರಕಟಗೊಂಡ ಹಾರ್ಷರ್ ಪನಿಷ್‌ಮೆಂಟ್ಸ್ ಆಂಡ್ ರಿಟ್ರಿಬ್ಯೂಟಿವ್ ಕ್ರಿಮಿನಲ್ ಜಸ್ಟಿಸ್ (ಕಠಿಣ ಶಿಕ್ಷೆಗಳು ಮತ್ತು ಪ್ರತೀಕಾರದ ಕ್ರಿಮಿನಲ್ ನ್ಯಾಯ) ಎಂಬ ಲೇಖನವು ಅಪರಾಧ ನಿಯಂತ್ರಣದ ಒಟ್ಟಾರೆ ಗತಿ ಮತ್ತು ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯ ವಿಶ್ಲೇಷಣೆಯು ಆ ವಿಷಯದಲ್ಲಿ ಒಂದು ಮೈಲಿಗಲ್ಲಾಗಿದೆ.

ವರ್ನನ್ ಅವರ ಮಗ ಸಾಗರ್, ತನ್ನ ತಂದೆಯ ಬಗ್ಗೆ ಹತ್ತಿರದ ಎಲ್ಲರೂ ಏನನ್ನುತ್ತಾರೆ ಎಂಬುದನ್ನು ಹೀಗೆ ವಿವರಿಸುತ್ತಾರೆ.

ನನ್ನ ತಂದೆಯ ಅನೇಕ ಗುಣಗಳಲ್ಲಿ ನಾನು ಮೆಚ್ಚುವುದು, ತಮ್ಮ ನಂಬಿಕೆ ಮತ್ತು ಆದರ್ಶಗಳ ಬಗ್ಗೆ ಅವರಿಗಿರುವ ಬದ್ಧತೆ. ನ್ಯಾಯದ ಕೆಲಸಕ್ಕೆ ಎದೆಯುಬ್ಬಿಸಿ ನಿಲ್ಲುವುದು ಹಾಗೂ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿತರಾದವರ ಜೊತೆಗೆ ನಿಂತು, ಅವರಿಗೆ ಸಹಾಯ ಮಾಡುವುದು. ಇದನ್ನು ಅವರು ಮುಂಚೆಯಿಂದಲೂ ಮಾಡಿಕೊಂಡು ಬಂದಿದ್ದಾರೆ ಹಾಗೂ ಅದನ್ನೇ ಮುಂದುವರೆಸಲಿದ್ದಾರೆ. ಮುಂಚೆಯೂ ಅವರು ಧೈರ್ಯಗುಂದಲಿಲ್ಲ ಹಾಗೂ ಈಗಲೂ ಅವರು ಧೈರ್ಯಗುಂದದೆ ಮುಂದುವರೆಯುವರು. ತಮ್ಮ ನಂಬಿಕೆಗಳಿಗೆ ಎಂದಿಗೂ ಬದ್ಧರಾಗಿರುವ ಅವರ ಅನನ್ಯತೆಯನ್ನು ಕಟ್ಟಿಹಾಕಲು ಸಾಧ್ಯವಿಲ್ಲ”

(ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ)

ಅನುವಾದ: ರಾಜಶೇಖರ ಅಕ್ಕಿ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...