Homeಮುಖಪುಟಪ್ರವಾದಿ ನಿಂದನೆ: ಪಿ.ನವೀನ್ ತಲೆಗೆ 51 ಲಕ್ಷ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಪ್ರವಾದಿ ನಿಂದನೆ: ಪಿ.ನವೀನ್ ತಲೆಗೆ 51 ಲಕ್ಷ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸೋದರಳಿಯ ಪಿ.ನವೀನ್ ತಲೆಗೆ ಬಹುಮಾನ ಘೋಷಿಸಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮಾಜಿ ನಾಯಕನನ್ನು ನಿನ್ನೆ ಬಂಧಿಸಲಾಗಿದೆ.

ಮೀರತ್‌ನ ಫಲ್ವಾಡಾ ಪಟ್ಟಣದ ರಸೂಲ್‌ಪುರ ಗ್ರಾಮದ ನಿವಾಸಿ ಶಹಜೇಬ್ ರಿಜ್ವಿ ವಾಟ್ಸ್‌ಆ್ಯಪ್‌ನಲ್ಲಿ ವಿಡಿಯೋವೊಂದನ್ನು ಪ್ರಸಾರ ಮಾಡಿ, ಫೇಸ್‌ಬುಕ್ ನಲ್ಲಿ ಪ್ರವಾದಿ ಮೊಹಮ್ಮದರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಾಕಿದ್ದಕ್ಕಾಗಿ ಪಿ ನವೀನ್ ತಲೆಗೆ 51 ಲಕ್ಷ ರೂ.ಗಳ ಮೊತ್ತವನ್ನು ಘೋಷಿಸಿದ್ದಾರೆ. ಪ್ರಸ್ತುತ ವಿಡಿಯೋ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ.

“ಕಾಂಗ್ರೆಸ್ ಶಾಸಕರ ಸೋದರಳಿಯ ಹಾಕಿರುವ ಸಾಮಾಜಿಕ ಜಾಲತಾಣದ ಪೋಸ್ಟ್‌ನಿಂದಾಗಿ ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಯಾರು ಅವರ ಸೋದರಳಿಯನ ತಲೆಯನ್ನು ತರುತ್ತಾರೋ ಅದಕ್ಕೆ ಪ್ರತಿಯಾಗಿ 51 ಲಕ್ಷ ರೂ ನೀಡುತ್ತೇನೆ” ಎಂದು ರಿಜ್ವಿ ವೀಡಿಯೊದಲ್ಲಿ ಹೇಳುವುದನ್ನು ಕೇಳಬಹುದಾಗಿದೆ.

ಮೀರತ್‌ನ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ, ”ಶಹಜೇಬ್ ರಿಜ್ವಿ ವಿರುದ್ಧ 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ಒಂದು ಸಮುದಾಯವನ್ನು ಇನ್ನೊಂದರ ವಿರುದ್ಧ ಪ್ರಚೋದಿಸುವ ಉದ್ದೇಶ) ) ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಶಹಜೇಬ್ ರಿಜ್ವಿ ಈ ಹಿಂದೆ ಸಮಾಜವಾದಿ ಪಕ್ಷದ (ಎಸ್‌ಪಿ) ಅಲ್ಪಸಂಖ್ಯಾತ ಘಟಕದೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೋದರಳಿಯ ಪಿ.ನವೀನ್ ಫೇಸ್‌ಬುಕ್‌ನಲ್ಲಿ ಪ್ರವಾದಿ ಮೊಹಮ್ಮದರ ವಿರುದ್ದ ಅವಹೇಳನಕಾರಿಯಗಿ ಪ್ರತಿಕ್ರಿಯೆ ನೀಡಿದ ನಂತರ ಬೆಂಗಳೂರಿನಲ್ಲಿ ಹಿಂಸಾಚಾರ ಪ್ರಾರಂಭವಾಯಿತು.

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ಬೃಹತ್ ಜನಸಮೂಹ ಜಮಾಯಿಸಿ ಪ್ರತಿಭಟನೆ ನಡೆಸಿತ್ತು. ಇದರ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಉದ್ರಿಕ್ತ ಜನರು ಪೊಲೀಸ್ ಠಾಣೆ, ಶ್ರೀನಿವಾಸ್ ಮೂರ್ತಿ ಅವರ ನಿವಾಸ ಮತ್ತು ನವೀನ್ ಮನೆ ಸೇರಿದಂತೆ ಹಲವಾರು ವಾಹನಗಳಿಗೆ ಹಾನಿ ಮಾಡಿದ್ದಾರೆ.

ನ್ಯೂಸ್ ಮಿನಿಟ್ ವರದಿಯಂತೆ ನಾಗವರ ಮೂಲದ ಬಿಬಿಎಂಪಿ ಕಾರ್ಪೊರೇಟರ್ ಪತಿ ಕಲೀಮ್ ಪಾಷಾ ಸೇರಿದಂತೆ ಗಲಭೆಗೆ ಸಂಬಂಧಿಸಿದ 206 ಜನರನ್ನು ಈವರೆಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.


ಓದಿ: ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...