Homeಚಳವಳಿಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ಮಹೇಶ್ ರಾವುತ್ ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲಿಲ್ಲ. ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ.

- Advertisement -
- Advertisement -

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯವರಾದ ಮಹೇಶ್ ರಾವುತ್ ತಮ್ಮ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯಗಳ ಹಕ್ಕುಗಳಿಗಾಗಿ ಹೋರಾಡುತ್ತಿರುವ ಪ್ರಮುಖ ಯುವ ಕಾರ್ಯಕರ್ತ. ಮಹಾರಾಷ್ಟ್ರದ ಸಣ್ಣ ಹಳ್ಳಿಯಾಗಿರುವ ಲಾಖಾಪುರದಲ್ಲಿ ಹುಟ್ಟಿದ ಮಹೇಶ್, ಗಡ್ಚಿರೋಲಿಯಲ್ಲಿ ಶಾಲಾ ಶಿಕ್ಷಣ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ನಾಗಪುರಕ್ಕೆ ತೆರಳಿದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬಯಿಯ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ಗೆ ಸೇರಿದರು.

ಶಿಕ್ಷಣ ಮುಗಿಸಿದ ಬಳಿಕ ಅವರು ಗಡ್ಚಿರೋಲಿಯಲ್ಲಿ ಪ್ರಧಾನ ಮಂತ್ರಿ ಗ್ರಾಮೀಣಾಭಿವೃದ್ಧಿ ಫೆಲೋ (ಪಿಎಂಆರ್‌ಡಿಎಫ್) ಆಗಿ ಕೆಲಸ ಮಾಡಿದರು. ದೊಡ್ಡ ಕಾರ್ಪೊರೇಟ್‌ಗಳ ಕಾನೂನುಬಾಹಿರ ಭೂಕಬಳಿಕೆ ವಿರುದ್ಧ ಮೂಲನಿವಾಸಿ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ರಕ್ಷಣೆ ನೀಡುವ ಪಂಚಾಯತ್ (ಅಧಿಸೂಚಿತ ಪ್ರದೇಶಗಳಿಗೆ ವಿಸ್ತರಣೆ) ಕಾಯಿದೆ ಮತ್ತು ಅರಣ್ಯ ಹಕ್ಕುಗಳ ಕಾಯಿದೆಗಳ ಪರವಾಗಿ ಅವರು ದಣಿವರಿಯದೇ ಕೆಲಸ ಮಾಡಿದರು. ಮಹೇಶ್ ಅವರು ಸಂವಿಧಾನದ ಚೌಕಟ್ಟಿನಲ್ಲಿಯೇ ಅಂಚಿಗೆ ತಳ್ಳಲ್ಪಟ್ಟ ದುರ್ಬಲ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ನಿರಂತರವಾಗಿ ದುಡಿದರು. ತಮ್ಮ ಫೆಲೋಶಿಪ್ ಮುಗಿದ ಬಳಿಕವೂ ಅವರು ರಾಜ್ಯದ ಆದಿವಾಸಿ ಸಮುದಾಯಗಳ ಜೊತೆಗೆ ಕೆಲಸ ಮಾಡುವುದನ್ನು ಮುಂದುವರಿಸಲು ನಿರ್ಧರಿಸಿದರು.

ಮಹೇಶ್ ರಾವುತ್ ಸಮಾಜಕಲ್ಯಾಣಕ್ಕೆ ಒತ್ತಾಸೆ ನೀಡಲು ಸಾಮೂಹಿಕ ಚಳವಳಿಗಳನ್ನು ಅಯೋಜಿಸಿದರಲ್ಲದೆ ಅಂತಹ ಹಲವು ಚಳವಳಿಗಳಲ್ಲಿ ಭಾಗವಹಿಸಿದರು. ಅವರು ಆದಿವಾಸಿಗಳು ಮತ್ತು ಇತರ ಶೋಷಿತ ವರ್ಗಗಳ ಜನರನ್ನು ಬಲವಂತದಿಂದ ಒಕ್ಕಲೆಬ್ಬಿಸುವ ವಿದ್ಯಮಾನದ ವಿರುದ್ಧ ಹೋರಾಡುವ ವಿಸ್ಥಾಪನ್ ವಿರೋಧಿ ಜನ್ ವಿಕಾಸ್ ಆಂದೋಲನ್ (ವಿವಿಜೆವಿಎ) ಸಂಘಟನೆಯ ಸಹಸಂಚಾಲಕರಾಗಿದ್ದರು. ವಿವಿಜೆವಿಎಯ ಸದಸ್ಯರಾಗಿ ಅವರು ಆ ಪ್ರದೇಶದ ಆದಿವಾಸಿ ಸಮುದಾಯಗಳ ತೆಂಡು ಎಲೆ ಸಂಗ್ರಹಿಸುವ ಕಾರ್ಮಿಕರನ್ನು ಸಂಘಟಿಸಿ, ಅವರು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆಯೇ ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾದ ವ್ಯವಸ್ಥೆ ಮಾಡಿದರು.


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…


ಆ ಪ್ರದೇಶದ ಆದಿವಾಸಿಗಳ ಪರವಾಗಿ ಪ್ರಚಾರ ಮಾಡುತ್ತಲೇ ಅವರು ದಿವಂಗತ ಬಿ.ಡಿ. ಶರ್ಮಾ ಅವರು ಸ್ಥಾಪಿಸಿದ್ದ ಭಾರತ್ ಜನ ಆಂದೋಲನ್ (ಬಿಜೆಎ) ಸಂಘಟನೆಗೂ ಸೇರಿದರು. ಬಿಜೆಎ ಜೊತೆ ತನ್ನ ಕೆಲಸದ ಮೂಲಕ ಅವರು ಸೂರಜ್‌ಗಢ್ ಮೈನಿಂಗ್ ಪ್ರೊಜೆಕ್ಟ್ ಸೇರಿದಂತೆ ಹಲವಾರು ಗಣಿಗಾರಿಕಾ ಯೋಜನೆಗಳಿಂದ ಬಾಧಿತವಾದ ಪ್ರದೇಶಗಳಲ್ಲಿ ’ಭಾಗವಹಿಸುವಿಕೆಯ ಮೂಲಕ ತಾವೇ ನಿರ್ಧಾರ ಕೈಗೊಳ್ಳುವುದರ ಪರವಾಗಿ ಜನರನ್ನು ಸಂಘಟಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಪೊಲೀಸ್ ಮತ್ತು ಪ್ರಭುತ್ವದ ಹಲವಾರು ಅಧಿಕಾರಿಗಳ ದೌರ್ಜನ್ಯ ಮತ್ತು ಅತಿರೇಕಗಳ ವಿರುದ್ಧ ಅವರ ಹೋರಾಟದ ಪರಿಣಾಮವಾಗಿ ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾದವು. ಅವರ ಪಿಎಂಆರ್‌ಡಿಎಫ್ ಸಂಗಾತಿಗಳು ಬರೆದಿರುವ ಪತ್ರವೊಂದರ ಪ್ರಕಾರ, ಮಹೇಶ್ ಅವರ ವಿರುದ್ಧ ಸರಕಾರದ ದಮನವು 2013ರಲ್ಲಿಯೇ ಆರಂಭವಾಗಿದ್ದು, ಅವರ ನಿರಂತರ ರಾಜಕೀಯ ಚಟುವಟಿಕೆಗಳು ಅವರಿಗೆ ಕಿರುಕುಳ ನೀಡುವುದಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.

ಬಿಹಾರದಲ್ಲಿ ಕೆಲಸ ಮಾಡುತ್ತಿರುವ ಅವರ ಗೆಳತಿ ಮತ್ತು ಸಹ ಕಾರ್ಯಕರ್ತೆ ಸೋಹಿನಿ ಶೊಯೆಬ್ ಅವರು ಮಹೇಶ್ ಕುರಿತು ಹೀಗೆ ಬರೆಯುತ್ತಾರೆ: “ಮಹೇಶ್ ಈ ಎಲ್ಲಾ ಹಳ್ಳಿಗಳಲ್ಲಿ ಅತ್ಯಂತ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು ಮತ್ತು ನಾನು ಭೇಟಿ ಮಾಡಿದ ಜನರೊಂದಿಗೆ ಒಂದಾಗಿದ್ದರು. ಜನರು ತಮ್ಮ ಸ್ವಂತ ಮನೆಮಗನೋ ಎಂಬಂತೆ ಅವರನ್ನು ನಡೆಸಿಕೊಳ್ಳುತ್ತಿದ್ದರು! ಮದುವೆಯಾಗುವಂತೆ ಅವರ ಮನವೊಲಿಸಬೇಕು ಎಂದೂ ಕೆಲವರು ನನ್ನನ್ನು ಒತ್ತಾಯಿಸಿದರು. ಜೀವನ ಸಂಗಾತಿ ಬಂದರೆ ಅವರ ಒಂಟಿತನ ಕಡಿಮೆಯಾಗಿ, ಜೀವನದ ಇತರ ವಿಷಯಗಳ ಬಗ್ಗೆ ಸಮತೋಲನ ಕಾಪಾಡಲು ನೆರವಾಗುತ್ತದೆ ಎಂಬುದು ಅವರ ನಂಬಿಕೆಯಾಗಿತ್ತು!”

2018ರಲ್ಲಿ ಎಲ್ಗಾರ್ ಪರಿಷದ್‌ನ ಸಂಘಟನೆಯಲ್ಲಿ ಶಾಮೀಲಾತಿ ಮತ್ತು ತಥಾಕಥಿತ ಮಾವೋವಾದಿ ಸಂಪರ್ಕದ ಆರೋಪ ಹೊರಿಸಿ ಪುಣೆ ಪೊಲೀಸರು ಮಹೇಶ್ ಅವರನ್ನು ಬಂಧಿಸಿದರು. ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ)ಯ ಕೆಲವು ವಿಧಿಗಳ ಅಡಿಯಲ್ಲಿ ಅವರನ್ನು ಅವರ ನಾಗಪುರದ ಮನೆಯಿಂದ ಬಂಧಿಸಲಾಯಿತು. ವಾಸ್ತವವಾಗಿ ಅವರು ಎಲ್ಗಾರ್ ಪರಿಷದ್‌ನ ಆಯೋಜನೆಯಲ್ಲಿ ಭಾಗಿಯಾಗಿರಲೂ ಇಲ್ಲ, ಡಿಸೆಂಬರ್ 31ರ ಕಾರ್ಯಕ್ರಮಗಳಲ್ಲಿ ಭಾಗವಹಿಸಿರಲೂ ಇಲ್ಲ. ಅವರ ಬಂಧನವು ಪ್ರಭುತ್ವ ಮತ್ತು ಕಾರ್ಪೊರೇಟ್‌ಗಳ ನಡುವಿನ ಕೂಟದ ಎದುರು ಹೋರಾಡುತ್ತಿರುವ ರಾಜ್ಯದ ಮಾನವ ಹಕ್ಕು ರಕ್ಷಕರ ವಿರುದ್ಧ ನಡೆಸಿದ ಸ್ಪಷ್ಟ ದಮನವಾಗಿದೆ. ಅಂಚಿಗೆ ಸರಿಸಲ್ಪಟ್ಟ ದಮನಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಅವರ ದೇಣಿಗೆಯೇ ಅವರಿಗೆ ಕಿರುಕುಳ ನೀಡುವುದಕ್ಕೆ ಮತ್ತು ನಂತರ ಅವರ ಬಂಧನಕ್ಕೆ ಕಾರಣವಾಗಿದೆ. ಅವರ ಕಾರಾಗೃಹವಾಸವು ಪ್ರಭುತ್ವವು ಕಾಲಡಿಯಲ್ಲಿ ಹೊಸಕಿಹಾಕುತ್ತಿರುವ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಅದೇ ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆಗೆ ಜೀವಂತ ಸಾಕ್ಷಿಯಾಗಿದೆ.

ಕೃಪೆ: ಮಹಾರಾಷ್ಟ್ರ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

Also Read: When the moon slips into Darkness: K Satyanrayana on Varavara Rao

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...