Homeಕರ್ನಾಟಕಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

- Advertisement -
- Advertisement -

ಅಸೋಸಿಯೆಟಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಆಂಡ್ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ ಎಂಬ ಖಾಸಗಿ ಶಾಲೆಗಳ ಸಂಘ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು “ಸರ್ಕಾರಿ ಶಾಲೆ ಶಿಕ್ಷಕರು ಆಮಿಷವೊಡ್ಡಿ ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ” ಎಂದು ದೂರು ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಬರೆದ ಪತ್ರದಲ್ಲಿ “ಸರ್ಕಾರಿ ಶಾಲೆಗಳು ರಾಷ್ಟ್ರೀಯ ವಿಪತ್ತು ಕಾಯಿದೆಯ ಮಾರ್ಗಸೂಚಿಯಂತೆ ಯಾವುದೇ ಶಾಲಾ-ಕಾಲೇಜುಗಳು ಪ್ರಾರಂಭ ಆಗಬಾರದೆಂದು ನಿಯಮವಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ, ನಿಯಮವನ್ನು ಉಲ್ಲಂಘಿಸಿ ರಾಜ್ಯದ ಹಲವಾರು ಕಡೆ ‘ವಿದ್ಯಾಗಮ ಯೋಜನೆ’ ಹಸರಿನಲ್ಲಿ ಶಾಲೆಯ ತರಗತಿಯ ಒಳಗೆ ಹಾಗೂ ಹೊರಗೆ ಪಾಠ ಮಾಡುತ್ತಿದೆ” ಎಂದು ಉಲ್ಲೇಖಿಸಿದೆ.

“ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಸರ್ಕಾರಿ ಶಿಕ್ಷಕರು ಮನೆಮನೆಗೆ ತೆರಳಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಈ ವರ್ಷ ಪ್ರಾರಂಭವಾಗುವುದಿಲ್ಲ. ನಮ್ಮಲ್ಲಿ ಮಾತ್ರ ಶಿಕ್ಷಣ ನೀಡುತ್ತೇವೆ ಹಾಗೂ ಆಹಾರ ಮತ್ತು ಪುಸ್ತಕ ನೀಡುತ್ತೇವೆ ಎಂದು ಆಮಿಷವೊಡ್ಡಿ, ವಾಮಮಾರ್ಗವಾಗಿ ಮಕ್ಕಳನ್ನು ಸೆಳೆಯುತ್ತಿದೆ” ಎಂದು ಪತ್ರ ಆರೋಪಿಸಿದೆ.

“ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಬಿಡದೆ, ಶಿಕ್ಷಣ ಇಲಾಖೆಯ ಈ ಧೋರಣೆ ಮತ್ತು ಕಾನೂನು ಬಾಹಿರವಾಗಿ ಶಾಲೆಗಳ ಒಳಗೆ ಯಾವುದೇ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಶಾಲೆಗಳನ್ನು ನಡೆಸುತ್ತಿದೆ” ಎಂದು ಪತ್ರದಲ್ಲಿ ದೂರಲಾಗಿದೆ.

ಆದರೆ ಖಾಸಗಿ ಶಾಲಾ ಸಂಘಟನೆಯ ಈ ಆರೋಪವನ್ನು ನಿರಾಕರಿಸಿದ ಸರ್ಕಾರಿ ಶಿಕ್ಷಕರೊಬ್ಬರು, “ಅವರು ಯಾವ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆ ಎಂದು ತಿಳಿದಿಲ್ಲ. ನಾವು ಸರ್ಕಾರದ ನಿಯಮವನ್ನು ಎಲ್ಲಿಯೂ ಉಲ್ಲಂಘಿಸಿಲ್ಲ. ಮಕ್ಕಳಿಗೆ ಶೂನ್ಯ ಕಲಿಕೆ ಆಗಬಾರದು ಎಂಬ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ನಮ್ಮದೆ ಶಾಲೆಯ ಮಕ್ಕಳನ್ನು ಶಾಲೆಯ ಹೊರಗಡೆ ಹಿಂದಿನ ವರ್ಷದ ಪಾಠಗಳನ್ನು ಪುನರ್-ಮನನ ಮಾಡುತ್ತಿದ್ದೇವೆ. ಖಾಸಗಿ ಶಾಲೆಗಳು ಆನ್‍ಲೈನ್ ಶಿಕ್ಷಣ ಎಂದು ಈಗಾಗಲೆ ಕಲಿಕೆಯನ್ನು ಮುಂದುವರೆಸಿದೆ. ಆದರೆ ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಇಂತಹ ವ್ಯವಸ್ಥೆ ಇರುವುದಿಲ್ಲ. ವಿದ್ಯಾಗಮ ಯೋಜನೆ ಉತ್ತಮ ಯೋಜನೆಯಾಗಿದೆ. ಇಷ್ಟೂ ಆಗದಿದ್ದರೆ ಮಕ್ಕಳನ್ನು ಕಲಿಕೆಗೆ ಮರುಹೊಂದಿಸಿಕೊಳ್ಳಲು ಕಷ್ಟಕರವಾಗುತ್ತದೆ ಅಲ್ಲದೆ ಅವರು ಅಕ್ಷರಗಳನ್ನು ಮರೆತು ಬಿಡುವ ಅಪಾಯವಿದೆ” ಎಂದು ಹೇಳಿದ್ದಾರೆ.


ಓದಿ: ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...