Homeಸಿನಿಮಾಕ್ರೀಡೆ4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

- Advertisement -
- Advertisement -

ಕರ್ನಾಟಕದ ಮಾಜಿ ಆಟಗಾರ್ತಿ ಮತ್ತು ಹಾಲಿ ಜರ್ಮನಿ ತಂಡದ ನಾಯಕಿ ಅನುರಾಧ ದೊಡ್ಡಬಳ್ಳಾಪುರ ಆಸ್ಟ್ರಿಯಾ ವಿರುದ್ಧದ ಮಹಿಳಾ ಟಿ20 ಪಂದ್ಯದಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಗಳಿಸುವ ಮೂಲಕ ವಿಶ್ವದಾಖಲೆ ಸ್ಥಾಪಿಸಿದ್ದಾರೆ.

ಆಗಸ್ಟ್ 14ರಂದು ಲೋಯರ್ ಆಸ್ಟ್ರಿಯಾದಲ್ಲಿ ನಡೆದ ನಾಲ್ಕನೇ ಮಹಿಳಾ ಟಿ20 ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಅವರ ಈ ಅಮೋಘ ಆಟದ ನೆರವಿನಿಂದ ಜರ್ಮನಿಯು ಆಸ್ಟ್ರಿಯಾವನ್ನು 137 ರನ್‌ಗಳಿಂದ ಮಣಿಸಿದೆ. ಆ ಮೂಲಕ 4 ಎಸೆತಗಳಲ್ಲಿ 4 ವಿಕೆಟ್ ಪಡೆದ ಪ್ರಥಮ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಅನುರಾಧ ದೊಡ್ಡಬಳ್ಳಾಪುರ ಭಾಜನರಾಗಿದ್ದಾರೆ.

ಶ್ರೀಲಂಕಾದ ಲಸಿತ್ ಮಾಲಿಂಗ ಮತ್ತು ಆಫ್ಘಾನಿಸ್ಥಾನದ ರಶೀದ್‌ ಖಾನ್‌ರವರ ಈ ಸಾಧನೆಯ ಅಪರೂಪದ ಪಟ್ಟಿಗೆ 33 ವರ್ಷದ ಅನುರಾಧ ದೊಡ್ಡಬಳ್ಳಾಪುರ ಸೇರಿದ್ದಾರೆ. ಲಸಿತ್ ಮಾಲಿಂಗ 2007ರ ಐಸಿಸಿ ವಿಶ್ವಕಪ್‌ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 4 ಎಸೆತಗಳಲ್ಲಿ 4 ವಿಕೆಟ್ ಗಳಿಸಿ ಸಾಧನೆಗೈದರೆ, 2019ರ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ರಶೀದ್ ಖಾನ್ 4 ಎಸೆತಗಳಲ್ಲಿ 4 ವಿಕೆಟ್ ಪಡೆದಿದ್ದರು.

ಶುಕ್ರವಾರ ನಡೆದ ಪಂದ್ಯದಲ್ಲಿ ಜರ್ಮನಿ 20 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 198 ರನ್ ಗಳಿಸಿದರೆ, ಉತ್ತರವಾಗಿ ಆಸ್ಟ್ರಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 61 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆಸ್ಟ್ರಿಯಾದ ಜೋ-ಆಂಟೊನೆಟ್ ಸ್ಟಿಗ್ಲಿಟ್ಜ್ (1), ಟಗ್ಸೆ ಕಜಾಂಸಿ (0), ಅನಿಷಾ ನೂಕಲಾ (0) ಮತ್ತು ಪ್ರಿಯಾ ಸಾಬು (0) ಅನುರಾಧ ದಾಳಿಗೆ ತತ್ತರಿಸಿದ ಆಟಗಾರರಾಗಿದ್ದಾರೆ.

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

ಈ ಹಿಂದೆ ಕರ್ನಾಟಕ ತಂಡದ ಪರವಾಗಿದ್ದ ಆಡಿದ್ದ ಅನುರಾಧ, ಮಧ್ಯಮವೇಗಿಯಾಗಿ ಹೆಸರು ಗಳಿಸಿದ್ದರು. ಈಗ ಜರ್ಮನಿ ತಂಡವನ್ನು ಮುನ್ನೆಡೆಸುತ್ತಿದ್ದು ವಿಶಿಷ್ಠ ಸಾಧನೆ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.


ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಧೋನಿ-ರೈನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...