Homeಕರೋನಾ ತಲ್ಲಣಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ವೈಫಲ್ಯದ ಕುರಿತು ತನಿಖೆ ಸಾಧ್ಯವಿಲ್ಲ: ಸುಪ್ರೀಂ

ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ವೈಫಲ್ಯದ ಕುರಿತು ತನಿಖೆ ಸಾಧ್ಯವಿಲ್ಲ: ಸುಪ್ರೀಂ

ಮಾರ್ಚ್ 25 ರಿಂದ ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮತ್ತು ಅದನ್ನು ಜಾರಿಗೆ ತಂದ ವಿಧಾನವು, ಸಾರ್ವಜನಿಕರ ಉದ್ಯೋಗಗಳು ಮತ್ತು ಜೀವನೋಪಾಯ, ವಲಸೆ ಕಾರ್ಮಿಕರು ಹಾಗೂ ಒಟ್ಟಾರೆ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ ಎಂದು ಅರ್ಜಿದಾರರು ವಾದಿಸಿದ್ದರು.

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಅದರ ಅಪನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರದ ಮೇಲಿನ ಆರೋಪಗಳ ಕುರಿತು ತನಿಖೆ ನಡೆಸಲು ಆಯೋಗವನ್ನು ನೇಮಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಎಸ್. ರವೀಂದ್ರ ಭಟ್ ಮತ್ತು ಎಲ್.ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠವು ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಾಂಕ್ರಾಮಿಕ ಪಿಡುಗಿನ ತುರ್ತು ಪರಿಸ್ಥಿತಿಯಲ್ಲಿ ನ್ಯಾಯಾಂಗವು ಕಾರ್ಯನಿರ್ವಾಹಕ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಅಭಿಪ್ರಾಯ ವಿಶ್ವದಾದ್ಯಂತ ಇದೆ ಎಂದು ಕೋರ್ಟ್ ಹೇಳಿದೆ.

ನಿವೃತ್ತ ಅಧಿಕಾರಿಗಳು ಸೇರಿದಂತೆ ಆರು ಮಂದಿ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ವೈರಸ್ ಹರಡುವಿಕೆಯನ್ನು ತಡೆಗಟ್ಟಲು, ಸಮಯೋಚಿತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಲಾದ ಈ ಅರ್ಜಿಯಲ್ಲಿ, ಸಾಂಕ್ರಾಮಿಕ ರೋಗಕ್ಕೆ ಕೇಂದ್ರದ ಪ್ರಕ್ರಿಯೆಗಳು, ನಾಗರಿಕರ ಜೀವನ ಮತ್ತು ಜೀವನೋಪಾಯದ ಮೇಲೆ ಅದರ ಹಾನಿಕಾರಕ ಪರಿಣಾಮಗಳು, ಸಾರ್ವಜನಿಕ ಪ್ರಾಮುಖ್ಯತೆಯ ಒಂದು ನಿರ್ದಿಷ್ಟ ವಿಷಯವಾಗಿದೆ. ಹಾಗಾಗಿ ಇದರ ತನಿಖೆಗೆ ಆಯೋಗದ ನೇಮಕಾತಿ ಅವಶ್ಯಕ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮಾರ್ಚ್ 25 ರಿಂದ ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮತ್ತು ಅದನ್ನು ಜಾರಿಗೆ ತಂದ ವಿಧಾನವು, ಸಾರ್ವಜನಿಕರ ಉದ್ಯೋಗಗಳು ಮತ್ತು ಜೀವನೋಪಾಯ, ವಲಸೆ ಕಾರ್ಮಿಕರು ಹಾಗೂ ಒಟ್ಟಾರೆ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ ಎಂದು ಅರ್ಜಿದಾರರು ವಾದಿಸಿದ್ದರು.

ತಜ್ಞರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸರಿಯಾದ ಸಮಾಲೋಚನೆ ಇಲ್ಲದೆ ಮಾರ್ಚ್ 24 ರಂದು ಘೋಷಿಸಲಾದ ಲಾಕ್ ಡೌನ್ ಈಗ ದೊಡ್ಡ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿತ್ತು.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಷ್ಟ್ರೀಯ ಯೋಜನೆಯನ್ನು ರೂಪಿಸುವಲ್ಲಿ ಮತ್ತು ಇದರಿಂದ ತೊಂದರೆಗೊಳಗಾದ ಸಮಾಜದ ದುರ್ಬಲ ವರ್ಗಗಳಿಗೆ ಕನಿಷ್ಠ ಪರಿಹಾರದ ನೀಡುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರ್ಜಿ ಆರೋಪಿಸಿದೆ.

ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ವೈಯಕ್ತಿಕ ರಕ್ಷಣಾ ಸಾಧನಗಳ ಸಮರ್ಪಕ ಸರಬರಾಜನ್ನು ಒದಗಿಸುವಲ್ಲಿ ವಿಳಂಬವಾಗಿದೆ ಎಂದು ವಾದಿಸಿದ್ದರು.

ಈ ವರ್ಷದ ಜನವರಿಯ ಆರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ತಿಳಿಸಿದ ನಂತರವೂ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ವಿಫಲವಾಗಿದೆ. ಈ ವೈಫಲ್ಯಗಳು ಜನರ ಮೂಲಭೂತ ಹಕ್ಕುಗಳ ತೀವ್ರ ಉಲ್ಲಂಘನೆಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಮಾರ್ಚ್ 4 ರ ಮೊದಲು, ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ, ಸಾಕಷ್ಟು ಸಂಖ್ಯೆಯ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮತ್ತು ಕಣ್ಗಾವಲು ನಡೆಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರ್ಜಿ ಒತ್ತಿ ಹೇಳಿದೆ.


ಇದನ್ನೂ ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...