Homeಕರೋನಾ ತಲ್ಲಣಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ವೈಫಲ್ಯದ ಕುರಿತು ತನಿಖೆ ಸಾಧ್ಯವಿಲ್ಲ: ಸುಪ್ರೀಂ

ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ವೈಫಲ್ಯದ ಕುರಿತು ತನಿಖೆ ಸಾಧ್ಯವಿಲ್ಲ: ಸುಪ್ರೀಂ

ಮಾರ್ಚ್ 25 ರಿಂದ ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮತ್ತು ಅದನ್ನು ಜಾರಿಗೆ ತಂದ ವಿಧಾನವು, ಸಾರ್ವಜನಿಕರ ಉದ್ಯೋಗಗಳು ಮತ್ತು ಜೀವನೋಪಾಯ, ವಲಸೆ ಕಾರ್ಮಿಕರು ಹಾಗೂ ಒಟ್ಟಾರೆ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ ಎಂದು ಅರ್ಜಿದಾರರು ವಾದಿಸಿದ್ದರು.

- Advertisement -
- Advertisement -

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಅದರ ಅಪನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರದ ಮೇಲಿನ ಆರೋಪಗಳ ಕುರಿತು ತನಿಖೆ ನಡೆಸಲು ಆಯೋಗವನ್ನು ನೇಮಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಎಸ್. ರವೀಂದ್ರ ಭಟ್ ಮತ್ತು ಎಲ್.ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠವು ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸಾಂಕ್ರಾಮಿಕ ಪಿಡುಗಿನ ತುರ್ತು ಪರಿಸ್ಥಿತಿಯಲ್ಲಿ ನ್ಯಾಯಾಂಗವು ಕಾರ್ಯನಿರ್ವಾಹಕ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಅಭಿಪ್ರಾಯ ವಿಶ್ವದಾದ್ಯಂತ ಇದೆ ಎಂದು ಕೋರ್ಟ್ ಹೇಳಿದೆ.

ನಿವೃತ್ತ ಅಧಿಕಾರಿಗಳು ಸೇರಿದಂತೆ ಆರು ಮಂದಿ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ವೈರಸ್ ಹರಡುವಿಕೆಯನ್ನು ತಡೆಗಟ್ಟಲು, ಸಮಯೋಚಿತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಲಾದ ಈ ಅರ್ಜಿಯಲ್ಲಿ, ಸಾಂಕ್ರಾಮಿಕ ರೋಗಕ್ಕೆ ಕೇಂದ್ರದ ಪ್ರಕ್ರಿಯೆಗಳು, ನಾಗರಿಕರ ಜೀವನ ಮತ್ತು ಜೀವನೋಪಾಯದ ಮೇಲೆ ಅದರ ಹಾನಿಕಾರಕ ಪರಿಣಾಮಗಳು, ಸಾರ್ವಜನಿಕ ಪ್ರಾಮುಖ್ಯತೆಯ ಒಂದು ನಿರ್ದಿಷ್ಟ ವಿಷಯವಾಗಿದೆ. ಹಾಗಾಗಿ ಇದರ ತನಿಖೆಗೆ ಆಯೋಗದ ನೇಮಕಾತಿ ಅವಶ್ಯಕ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮಾರ್ಚ್ 25 ರಿಂದ ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮತ್ತು ಅದನ್ನು ಜಾರಿಗೆ ತಂದ ವಿಧಾನವು, ಸಾರ್ವಜನಿಕರ ಉದ್ಯೋಗಗಳು ಮತ್ತು ಜೀವನೋಪಾಯ, ವಲಸೆ ಕಾರ್ಮಿಕರು ಹಾಗೂ ಒಟ್ಟಾರೆ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ ಎಂದು ಅರ್ಜಿದಾರರು ವಾದಿಸಿದ್ದರು.

ತಜ್ಞರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸರಿಯಾದ ಸಮಾಲೋಚನೆ ಇಲ್ಲದೆ ಮಾರ್ಚ್ 24 ರಂದು ಘೋಷಿಸಲಾದ ಲಾಕ್ ಡೌನ್ ಈಗ ದೊಡ್ಡ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿತ್ತು.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಷ್ಟ್ರೀಯ ಯೋಜನೆಯನ್ನು ರೂಪಿಸುವಲ್ಲಿ ಮತ್ತು ಇದರಿಂದ ತೊಂದರೆಗೊಳಗಾದ ಸಮಾಜದ ದುರ್ಬಲ ವರ್ಗಗಳಿಗೆ ಕನಿಷ್ಠ ಪರಿಹಾರದ ನೀಡುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರ್ಜಿ ಆರೋಪಿಸಿದೆ.

ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ವೈಯಕ್ತಿಕ ರಕ್ಷಣಾ ಸಾಧನಗಳ ಸಮರ್ಪಕ ಸರಬರಾಜನ್ನು ಒದಗಿಸುವಲ್ಲಿ ವಿಳಂಬವಾಗಿದೆ ಎಂದು ವಾದಿಸಿದ್ದರು.

ಈ ವರ್ಷದ ಜನವರಿಯ ಆರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ತಿಳಿಸಿದ ನಂತರವೂ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ವಿಫಲವಾಗಿದೆ. ಈ ವೈಫಲ್ಯಗಳು ಜನರ ಮೂಲಭೂತ ಹಕ್ಕುಗಳ ತೀವ್ರ ಉಲ್ಲಂಘನೆಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಮಾರ್ಚ್ 4 ರ ಮೊದಲು, ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ, ಸಾಕಷ್ಟು ಸಂಖ್ಯೆಯ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮತ್ತು ಕಣ್ಗಾವಲು ನಡೆಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರ್ಜಿ ಒತ್ತಿ ಹೇಳಿದೆ.


ಇದನ್ನೂ ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...