Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...