Homeಮುಖಪುಟದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಬನ್ಸ್‌ಗಾಂವ್‌ನಲ್ಲಿ ಮೊದಲ ಬಾರಿಗೆ ಗ್ರಾ.ಪಂ ಮುಖ್ಯಸ್ಥನಾದ ದಲಿತ ಜಾತಿಗೆ ಸೇರಿದ ಸತ್ಯಮೇವ್ ಜಯತ್ ಆಲಿಯಾಸ್ ಪಪ್ಪು ರಾಮ್‌ ಎಂಬಾತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಆತ ಮೇಲ್ಜಾತಿ ಠಾಕೂರರ ಮಾತು ಕೇಳದಿರುವುದೇ ಕೊಲೆಗೆ ಕಾರಣ ಎಂದು ದಲಿತರು ಆರೋಪಿಸಿದ್ದಾರೆ.

ಬನ್ಸ್‌ಗಾಂವ್‌ನಲ್ಲಿ ಮೇಲ್ಜಾತಿಗಳಿಗಿಂತ ದಲಿತರೆ ಅಧಿಕವಾಗಿರುವ ಪ್ರದೇಶವಾಗಿದೆ. ಇಲ್ಲಿಯ ಗ್ರಾಮ ಪಂಚಾಯ್ತಿಯ ಅಧಿಕಾರವು ಬ್ರಾಹ್ಮಣ ಮತ್ತು ಠಾಕೂರರಿಂದ ದಲಿತರಿಗೆ ವರ್ಗಾಹಿಸಲ್ಪಟ್ಟಿದೆ. ಇದನ್ನು ಸಹಿಸದ ಮೇಲ್ಜಾತಿಯವರು ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸತ್ಯಮೇವ್ ಜಯತ್ ಕೊಲೆಯ ನಂತರ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ವಾಹನಕ್ಕೆ ಬೆಂಕಿ ಬಿದ್ದಿದ್ದು ಅದರಡಿ ಸಿಲುಕಿದ ಸೂರಜ್ ಎಂಬ 8 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಸತ್ಯಮೇವ್ ಹತ್ಯೆಗೆ ಸಂಬಂಧಿಸಿದಂತೆ ವಿವೇಕ್ ಸಿಂಗ್ ಅಲಿಯಾಸ್ ಭೋಲು, ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಅಲಿಯಾಸ್ ಗಪ್ಪು ಮತ್ತು ವಾಸಿಮ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದುಬೆಯ ವಿರುದ್ಧ ಕೊಲೆ ಯತ್ನ ಸೇರಿದಂತೆ ಇತರ ಐದು ಪ್ರಕರಣಗಳಿವೆ.

ನಾವು ಸತ್ಯಮೇವ್ ಕುಟುಂಬದ ಹೇಳಿಕೆ ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಕಾರಣವಿದ್ದರೂ ಚುನಾಯಿತ ಪ್ರತಿನಿಧಿಯ ಕೊಲೆಯೂ ಗಂಭೀರ ಅಪರಾಧವಾಗಿದೆ. ಅಲ್ಲದೇ ಸೂರಜ್ ಸಾವಿನ ವಿಷಯವನ್ನು ತನಿಖೆ ಮಾಡಲಾಗುವುದು ಎಂದು ಡಿಐಜಿ ಸುಭಾಸ್ ಚಂದ್ರ ದುಬೆ ತಿಳಿಸಿದ್ದಾರೆ.

ಜಾತಿ ಮತ್ಸರ

ಪಪ್ಪು ರಾಮ್‌ ತನ್ನ ಹೆಸರನ್ನು ಸತ್ಯಮೇವ್ ಜಯತ್ ಎಂದು ಬದಲಿಸಿಕೊಂಡಿದ್ದರು. ಸಾಕಷ್ಟು ಓದಿಕೊಂಡಿದ್ದ ಅವರು, ಅಮೇರಿಕಾದಲ್ಲಿ ಗುಲಾಮಗಿರಿಯನ್ನು ತೊಲಗಿಸಿದ ಅಂಬ್ರಾಹಂ ಲಿಂಕನ್ ನೆನಪಿಗೆ ತನ್ನ ಸೋದರಳಿಯನಿಗೆ ಲಿಂಕನ್ ಎಂದು ಹೆಸರಿಟ್ಟಿದ್ದಾರೆ. ಮತ್ತೊಬ್ಬ ಸಹೋದರನ ಮಗನಿಗೆ ರಾಮು ರಾಮ್ ಎಂದು ಹೆಸರಿಟ್ಟಿದ್ದನು.

300 ದಲಿತ ಕುಟಂಬಗಳಿರುವ ಬನ್ಸ್‌ಗಾಂವ್‌ನಲ್ಲಿ 30 ಬ್ರಾಹ್ಮಣ ಮತ್ತು 30 ಠಾಕೂರ್ ಕುಟುಂಬಗಳಿವೆ. ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಸಹಜವಾಗಿಯೇ ಹಿಂದಿನಿಂದಲೂ ಗ್ರಾಮ ಪ್ರಧಾನ್ ದಲಿತರೇ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಕೂರ್ ಮತ್ತು ಬ್ರಾಹ್ಮಣರು ದಲಿತರ ವಿರುದ್ಧ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಠಾಕೂರರು ಮತ್ತು ಸತ್ಯಮೇವ್ ನಡುವೆ ವಾಗ್ದಾದ ನಡೆದಿತ್ತು. ಅವರು ಸತ್ಯಮೇವ್‌ನ ಕಂಡರೆ ಅಸೂಯೆ ಪಡುತ್ತಿದ್ದರು. ತಮ್ಮ ಮಾತು ಕೇಳದ ಕಾರಣಕ್ಕಾಗಿಯೇ ಸತ್ಯಮೇವ್‌ನನ್ನು ಕೊಂದಿದ್ದಾರೆ ಎಂದು ಸತ್ಯಮೇವ್ ಸೋದರಳಿಯಿ ಲಿಂಕನ್ ಹೇಳಿದ್ದಾರೆ.

ಸೂರ್ಯನ್ಸು ಕುಮಾರ್ ದುಬೆ ಎಂಬಾತ ಈ ಗ್ರಾಮದಲ್ಲಿ ವಾಸವಿಲ್ಲದಿದ್ದರೂ ಸಹ ಪದೇ ಪದೇ ಗ್ರಾ.ಪಂ ಗೆ ಬಂದು ವಾಸಸ್ಥಳ ದೃಢೀಕರಣ ಪತ್ರ ಕೊಡುವಂತೆ ದುಂಬಾಲು ಬಿದ್ದಿದ್ದ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಬಂದು ಧಮಕಿ ಹಾಕಿದ್ದ. ಆದರೆ ಅವನ ಬೆದರಿಗೆಕೆ ಸತ್ಯಮೇವ್ ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಠಾಕೂರರು ಗುಂಡು ಹಾರಿಸಿ ಸತ್ಯಮೇವ್‌ನನ್ನು ಕೊಂದಿದ್ದಾರೆ. ಕೊಲೆಯ ನಂತರ ಸತ್ಯಮೇವ್ ತಾಯಿಯ ಬಳಿ ಹೋಗಿ ಜಾತಿನಿಂದನೆ ಮಾಡಿ ಬೈಯ್ದಿದ್ದಾರೆ. ತಾನೇ ಕೊಂದಿದ್ದಾಗಿ ಹೇಳಿ ಶವವನ್ನು ಹೋಗಿ ನೋಡಿ ಎಂದು ಬೆದರಿಕೆ ಹಾಕಿದ್ದರು ಎಂದು ಲಿಂಕನ್ ಹೇಳಿದ್ದಾರೆ.

ವಿವೇಕ್ ಸಿಂಗ್‌ ಎಂಬಾತ ಬಂದು ಸತ್ಯಮೇವ್‌ರನ್ನು ತನ್ನ ಬೈಕ್‌ನಲ್ಲಿ ಕರೆದುಕೊಂಡ ಹೋದ. ನಂತರ ವೇಕ್ ಸಿಂಗ್ ಸೂರ್ಯನ್ಶ್ ಕುಮಾರ್ ದುಬೆ, ಬ್ರಿಜೇಂದ್ರ ಸಿಂಗ್ ಮತ್ತು ವಾಸಿಮ್ ಸೇರಿ ಹತ್ಯೆ ಮಾಡಿದ್ದಾರೆ ಎಂದು ಸತ್ಯಮೇವ್ ಪತ್ನಿ ಮುನ್ನಿ ದೇವಿ ಹೇಳಿದ್ದಾರೆಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಅಲ್ಲದೇ ಬಿಜೇಂದ್ರ ಸಿಂಗ್ ಎಂಬ ಆರೋಪಿಯೊಂದಿಗೆ ಕಳೆದ ತಿಂಗಳು ಜಮೀನಿನ ವಿಷಯಕ್ಕೆ ಜಗಳವಾಗಿತ್ತು. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.


ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...