Homeಚಳವಳಿಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು.

- Advertisement -
- Advertisement -

ಹೆಸರಾಂತ ಶಿಕ್ಷಣ ತಜ್ಞೆ, ದಲಿತರ ಮತ್ತು ಮಹಿಳೆಯರ ಹಕ್ಕುಗಳ ಚಳುವಳಿಗಾರ್ತಿ, ಶಿಕ್ಷಕಿ ಮತ್ತು ಹೋರಾಟಗಾರ್ತಿ – ಶೋಮಾ ಸೇನ್ ಇವೆಲ್ಲವೂ ಹೌದು ಮತ್ತು ಇವೆಲ್ಲವಕ್ಕಿಂತ ದೊಡ್ಡ ವ್ಯಕ್ತಿತ್ವದವರು. ಮುಂಬೈ ನಗರದಲ್ಲಿ ಹುಟ್ಟಿ ಬೆಳೆದ ಶೋಮಾ ಸಮಾಜದ ಆಂಚಿನಲ್ಲಿರುವ ದುರ್ಬಲ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಧೃಡ ನಿರ್ಧಾರದೊಂದಿಗೆ ತನ್ನ ಸಂಗಾತಿ ಮತ್ತು ಮಗಳೊಂದಿಗೆ ನಾಗಪುರಕ್ಕೆ ಹೋಗುತ್ತಾರೆ.

ಹೆಚ್ಚು ಕಡಿಮೆ ಮೂರು ದಶಕಗಳ ಕಾಲ ಶೋಮಾ ಗೌರವಾನ್ವಿತ ಶಿಕ್ಷಣ ತಜ್ಞೆಯಾಗಿದ್ದಾರೆ. ವಾರ್ಧ ವಿಶ್ವವಿದ್ಯಾಲಯದ ಮಹಿಳೆಯರ ವಿಭಾಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಶೋಮಾ ನಾಗಪುರದ ವಿವಿಧ ಕಾಲೇಜುಗಳಲ್ಲಿ ಪಾಠ ಮಾಡುತ್ತಿದ್ದರು. ಬಂಧನಕ್ಕೊಳಗಾದ ಸಮಯದಲ್ಲಿ ಶೋಮಾ ರಾಷ್ಟ್ರಸಂತ್ ತುಕದೋಜಿ ಮಹಾರಾಜ್ ನಾಗಪುರ ವಿಶ್ವವಿದ್ಯಾನಿಲಯದಲ್ಲಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಸಾಹತುಶಾಹಿಯ ನಂತರದ ದಿನಗಳ ಕುರಿತು ಮತ್ತು ಮಹಿಳಾ ಅಧ್ಯಯನದ ಕುರಿತು ಹಲವಾರು ಪ್ರಮುಖ ಲೇಖನಗಳನ್ನು ದಶಕಗಳಿಂದ ಶೋಮಾ ಬರೆದಿದ್ದಾರೆ.

 

ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲೆ ನಡೆಯುವ ಹಲವು ವಿಧದ ಸ್ತರದ ದೌರ್ಜನ್ಯಗಳ ಕುರಿತಾಗಿ ಸ್ತ್ರೀವಾದಿ ದೃಷ್ಟಿಕೋನಗಳನ್ನು ಶೋಮಾ ತಮ್ಮ ಬರವಣಿಗೆಯಲ್ಲಿ ಚರ್ಚಿಸಿದ್ದಾರೆ. ಮಹಿಳೆಯರ ರಾಜಕೀಯ ಪ್ರತಿಪಾದನೆ-ಸಮರ್ಥನೆಗಳ ಕುರಿತು ಮತ್ತು ಸ್ತ್ರೀಶಕ್ತಿಯ ಬಗ್ಗೆ ಅವರ ಬರಹಗಳು ಬೆಳಕು ಚೆಲ್ಲಿವೆ. ತಮ್ಮ ಬರಹಗಳ ಜೊತೆಗೆ, ಅವರ ಚಳುವಳಿಯ ಕೆಲಸಗಳು ರಾಜಕೀಯ ಮತ್ತು ಸಾಮಾಜಿಕ ಮಾರ್ಪಾಟಿಗೆ ಅಪಾರ ಕೊಡುಗೆ ನೀಡಿದೆ. 1970ರ ಸಮಯದಲ್ಲಿ ಮುಂಬೈಯಲ್ಲಿ ಓದುವ ಸಮಯದಲ್ಲಿ ಅವರು ವಿದ್ಯಾರ್ಥಿ ಪ್ರಗತಿ ಸಂಘಟನೆಯ ಭಾಗವಾಗಿದ್ದರು. 1980ರಲ್ಲಿ ವಿದ್ಯಾರ್ಥಿಗಳ ಪತ್ರಿಕೆಯಾದ ’ಕಲಂ’ನ ಸಂಪಾದಕರಾಗಿದ್ದರು. ಬಟ್ಟೆ ಉದ್ದಿಮೆಯ ಕಾರ್ಮಿಕರ ಮುಷ್ಕರಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾಗಪುರಕ್ಕೆ ಹೋದ ನಂತರ ಶೋಮಾ ಪ್ರಜಾಪ್ರಭುತ್ವ ಹಕ್ಕುಗಳ ಕುರಿತಾದ ತಮ್ಮ ಹೋರಾಟವನ್ನು ಮುಂದುವರಿಸಿದರು. ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ಡೆಮಾಕ್ರೆಟಿಕ್ ರೈಟ್ಸ್ (ಸಿಪಿಡಿಆರ್ – ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಸಮಿತಿ) ಸಂಘಟನೆಯ ಚಟುವಟಿಕೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದರು. ಸಿಪಿಡಿಆರ್ ಸಂಸ್ಥೆಯ ಮೂಲಕ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಜನರನ್ನು ಸಂಘಟಿಸುತ್ತಿದ್ದರು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ (ಸಿಎವಿಒಡಬ್ಲ್ಯು – ಲೈಂಗಿಕ ದೌರ್ಜನ್ಯ ಮತ್ತು ಪ್ರಭುತ್ವ ದಮನದ ವಿರುದ್ಧ ಮಹಿಳೆಯರ ಸಮಿತಿ) ಮತ್ತು ಸ್ತ್ರೀ ಚೇತನ ಸಂಘಟನೆಗಳ ಭಾಗವಾಗಿದ್ದರು. ಕಮಿಟಿ ವಿಮೆನ್ಸ್ ಎಗೇನ್ಸ್ಟ್ ಸೆಕ್ಷುಯಲ್ ವಯಲೆನ್ಸ್ ಅಂಡ್ ಸ್ಟೇಟ್ ರಿಪ್ರೆಷನ್ ಸಂಘಟನೆಯನ್ನು ಕಟ್ಟಿ ಬೆಳೆಸಿದರು. ಶೋಮಾ ಕಟ್ಟಿದ ಸಂಘಟನೆಯು ಪ್ರಭುತ್ವದ ಹಿಂಸೆಗೆ ಗುರಿಯಾಗಿದ್ದ ಮಣಿಪುರ ಮತ್ತು ಚತ್ತೀಸ್‌ಗಡದ ಪ್ರದೇಶದಲ್ಲಿ ಸತ್ಯಶೋಧನ ಕೆಲಸದಲ್ಲಿ ತೊಡಗಿಸಿಕೊಂಡಿತ್ತು. ಮಹಿಳಾ ರಾಜಕೀಯ ಖೈದಿಗಳಿಗೆ ಕಾನೂನಾತ್ಮಕ ಸಹಾಯ ಒದಗಿಸಲೂ ಶೋಮಾ ನಿರಂತರವಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮಹಿಳೆಯರ ಪಾತ್ರ ಹೆಸರಿಗಷ್ಟೇ ಅಂತಾಗಬಾರದು, ಮಹಿಳೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುವಂತಹ ವಾತಾವರಣವಿರಬೇಕು ಎಂದು ಶೋಮಾ ಧೃಡವಾಗಿ ನಂಬಿದ್ದರು. ಬ್ರಾಹ್ಮಣ್ಯ – ಪಿತೃಪ್ರಧಾನ ವ್ಯವಸ್ಥೆಯಿಂದ ದುಪ್ಪಟ್ಟು ಶೋಷಣೆಗೊಳಪಟ್ಟಿರುವ ದಲಿತ ಮಹಿಳೆಯರ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡುತ್ತಿದ್ದರು. ಮುಖ್ಯವಾಹಿನಿಯ ಸ್ತ್ರೀವಾದವು ಜಾತಿಯ ಕುರಿತು ಕುರುಡಾಗಿದೆ, ದಲಿತ ಮಹಿಳೆಯರು ಸಮುದಾಯದ ಒಳಗೆ ಮತ್ತು ಹೊರಗೆ ಅನುಭವಿಸುವ ದೌರ್ಜನ್ಯದ ಕುರಿತು ಮೌನವಾಗಿದೆ ಎಂದು ಶೋಮಾ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಅರವತ್ತು ವರ್ಷದ ಶೋಮಾರನ್ನು ಪುಣೆಯ ಪೋಲೀಸರು ಜೂನ್ 8, 2018ರಲ್ಲಿ ಬಂಧಿಸುತ್ತಾರೆ. ಪ್ರಭುತ್ವವು ಮಾನವ ಹಕ್ಕುಗಳ ರಕ್ಷಣೆಗೆ ಹೋರಾಡುವವರ ವಿರುದ್ಧ ತೆಗೆದುಕೊಂಡ ಹಿಂಸಾತ್ಮಕ ಕ್ರಮಗಳ ಭಾಗವಾಗಿಯೇ ಈ ಬಂಧನವಾಗುತ್ತದೆ. ಜೈಲಿನಲ್ಲಿನ ಭೇಟಿಗಳ ಕುರಿತು ಶೋಮಾರ ಮಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ. ಮಗಳಿಗೆ ಬರೆದ ಪತ್ರವೊಂದರಲ್ಲಿ ಶೋಮಾ “ಅವರು ನನ್ನನ್ನು ಬಂಧಿಸಿರಬಹುದು, ಆದರೆ ನನ್ನ ಆಲೋಚನೆಗಳು ಸ್ವತಂತ್ರವಾಗಿವೆ” ಎಂದು ಬರೆಯುತ್ತಾರೆ. ಈ ಸಾಲುಗಳು ಅವರ ಬತ್ತದ ಉತ್ಸಾಹಕ್ಕೆ ಕನ್ನಡಿಯಾಗಿದೆ. ಜೈಲಿನ ಅಧಿಕಾರಿಗಳು ಶೋಮಾರ ವಯಸ್ಸು, ಅವರ ಅಗತ್ಯಗಳು, ಕೀಲು ನೋವಿನ ಕುರಿತು ಅಸೂಕ್ಷ್ಮವಾಗಿ ವರ್ತಿಸಿದರೂ ಶೋಮಾರ ಉತ್ಸಾಹವನ್ನು ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ಶಿಕ್ಷಣ ಕ್ಷೇತ್ರಕ್ಕೆ ಶೋಮಾ ನೀಡಿದ ಅದ್ಭುತ ಕೊಡುಗೆಗಳು, ಜನರನ್ನು ಅದರಲ್ಲೂ ವಿವಿಧ ಪ್ರದೇಶಗಳ ಮಹಿಳೆಯರನ್ನು ಸಂಘಟಿಸುವ ಅವರ ಶಕ್ತಿಯಿಂದ ಪ್ರಭುತ್ವ ಇವರ ಮೇಲೆ ಕಣ್ಣಿಡುವುದಕ್ಕೆ ಕಾರಣವಾಯಿತು. ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದು ಅದನ್ನು ಬದಲಿಸುವ ಉದ್ದೇಶದಿಂದ ಹೋರಾಡುತ್ತಿದ್ದ ಮಹಿಳೆಯ ದನಿಯನ್ನು ಅಡಗಿಸುವ ಸ್ಪಷ್ಟ ಉದ್ದೇಶ ಪಿತೃಪ್ರಧಾನ ಪ್ರಭುತ್ವಕ್ಕಿರುವುದರಲ್ಲಿ ಅನುಮಾನವಿಲ್ಲ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ಡಾ. ಕೆ. ಆರ್. ಅಶೋಕ್


ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...