Homeಚಳವಳಿಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಅಜೀವಪರ್ಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಭಾರತದಲ್ಲಿ ಆಳುವ ವರ್ಗಗಳು ಹಿಂದುತ್ವದ ಶಕ್ತಿಗಳನ್ನು ಬಲಪಡಿಸುವ ಸಲುವಾಗಿ "ಇಸ್ಲಾಮೋಫೋಬಿಯಾ"ವನ್ನು ಒಂದು ಸಿದ್ಧಾಂತವಾಗಿ ಬಳಸುತ್ತಿದೆ ಎಂದು ಅವರ ಸಂಶೋಧನಾ ಪ್ರಬಂಧವು ಚರ್ಚಿಸುತ್ತದೆ.

- Advertisement -
- Advertisement -

ರೋಣ ವಿಲ್ಸನ್ ಒಬ್ಬ ಸಂಶೋಧನಾ ವಿದ್ವಾಂಸರಾಗಿದ್ದು, ರಾಜಕೀಯ ಕೈದಿಗಳ ಸ್ಥಿತಿಗತಿ ಮತ್ತು ಕಾನೂನುಬಾಹಿರ ಚಟುವಟಿಕೆ ತಡೆ ಕಾಯಿದೆ (ಯುಎಪಿಎ) ಹಾಗೂ ಇತರ ಕರಾಳ ಕಾನೂನುಗಳ ಬಳಕೆಯ ಕುರಿತು ಕೆಲಸ ಮಾಡಿದ್ದಾರೆ. ಮಧ್ಯ ಭಾರತದ ಅಂಚಿಗೆ ಸರಿಸಲ್ಪಟ್ಟ ಶೋಷಿತ ಆದಿವಾಸಿ ಸಮುದಾಯಗಳ ಮೇಲೆ ಸರಕಾರ ಹೂಡಿದ್ದ ಅಪರೇಷನ್ ಗ್ರೀನ್ ಹಂಟ್ ಯುದ್ಧನೀತಿಯ ವಿರುದ್ಧ ಮಾತನಾಡಿದ್ದಕ್ಕಾಗಿ ಬಂಧಿತರಾದ ಪ್ರೊ. ಜಿ.ಎನ್. ಸಾಯಿಬಾಬಾ, ಹೇಮ್ ಮಿಶ್ರಾ ಅವರಂತಹ ರಾಜಕೀಯ ಕೈದಿಗಳ ಪರವಾಗಿ ಅವರು ಸಕ್ರಿಯವಾಗಿ ಆಂದೋಲನ ನಡೆಸಿದ್ದಾರೆ.

ಸಂಸತ್ ಮೇಲಿನ ದಾಳಿ ಪ್ರಕರಣದಲ್ಲಿ ಅನ್ಯಾಯವಾಗಿ ಬಂಧಿತರಾಗಿ, ಚಿತ್ರಹಿಂಸೆ ಮತ್ತು ಅಮಾನವೀಯ ವರ್ತನೆಗೆ ಗುರಿಪಡಿಸಲಾದ ಕಾಶ್ಮೀರಿ ವಿದ್ವಾಂಸ ಮತ್ತು ಪ್ರಾಧ್ಯಾಪಕ ಎಸ್.ಎ.ಆರ್. ಗಿಲಾನಿ ಅವರ ಬಿಡುಗಡೆಗಾಗಿ ನಡೆದ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲುಗೊಂಡಂದಿನಿಂದ ರೋಣ ಅವರಿಗೆ ರಾಜಕೀಯ ಕೈದಿಗಳ ಜೊತೆ ಕೆಲಸ ಮಾಡುವ ಆಸಕ್ತಿ ಹುಟ್ಟಿಕೊಂಡಿತ್ತು. ವಾಸ್ತವವಾಗಿ ಪ್ರೊ. ಗಿಲಾನಿ ಅವರು ಆರೋಪಮುಕ್ತರಾಗಿ ಬಿಡುಗಡೆಯಾದ ಬಳಿಕ ರೋಣ ಮತ್ತು ಪ್ರೊ. ಗಿಲಾನಿ ಇತರ ಸಾಮಾಜಿಕ ಕಾರ್ಯಕರ್ತರ ಜೊತೆಸೇರಿ ’ಕಮಿಟಿ ಫಾರ್ ರಿಲೀಸ್ ಆಫ್ ಪೊಲಿಟಿಕಲ್ ಪ್ರಿಸ್‌ನರ್ಸ್’ (ಸಿಆರ್‌ಪಿಪಿ – ರಾಜಕೀಯ ಕೈದಿಗಳ ಬಿಡುಗಡೆಗಾಗಿ ಸಮಿತಿ) ಎಂಬ ಸಂಘಟನೆಯನ್ನು ರೂಪಿಸಿದ್ದರು.

ರೋಣ ಅವರು ಸಿಆರ್‌ಪಿಪಿಯ ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿದ್ದಾಗ, ಸಿಆರ್‌ಪಿಪಿಯ ಮೂಲಕವೇ ಪ್ರೊ. ಗಿಲಾನಿ ಅವರೊಂದಿಗೆ, ಪ್ರೊ. ಸಾಯಿಬಾಬಾ ಪ್ರಕರಣದದಲ್ಲಿ ಆಸಕ್ತಿವಹಿಸಿ, ಅವರ ಬಿಡುಗಡೆಗಾಗಿ ಹೋರಾಟ ನಡೆಸಿದ್ದರು. ಸಿಆರ್‌ಪಿಪಿಯ ಭಾಗವಾಗಿ ಅವರು ಯುಎಪಿಎ, ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ), ಆರ್ಮ್‌ಡ್ ಫೋರ್ಸಸ್ ಸ್ಪೆಷಲ್ ಪವರ್ಸ್ ಆಕ್ಟ್ (ಎಎಫ್‌ಎಸ್‌ಪಿಎ – ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ) ಮತ್ತು ವಿವಿಧ ರಾಜ್ಯ ಮಟ್ಟದ ಸಾರ್ವಜನಿಕ ಭದ್ರತಾ ಕಾಯಿದೆ (ಪಿಎಸ್‌ಎ)ಗಳು ಮುಂತಾದ ಕರಾಳ ಕಾಯಿದೆಗಳ ಅಸಾಂವಿಧಾನಿಕ ಸ್ವರೂಪ, ಮರಣ ದಂಡನೆಯನ್ನು ವಿವೇಚನೆಯಿಲ್ಲದೆ ಬಳಸುವುದರ ವಿರುದ್ಧ ಮತ್ತು ಈ ದೇಶದಲ್ಲಿ ದಲಿತರು ಮತ್ತು ಮುಸ್ಲಿಮರೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಅದಕ್ಕೆ ಗುರಿಯಾಗುವುದರ ಬಗ್ಗೆ ಅವರು ಹಲವಾರು ಸಮಾವೇಶಗಳನ್ನು ಆಯೋಜಿಸಿದ್ದರು. ವಿಪರ್ಯಾಸವೆಂದರೆ ಅವರು ಈಗ ಅದೇ ಕರಾಳ ಯುಎಪಿಎ ಅಡಿ ರಾಜಕೀಯ ಬಂಧಿಯಾಗಿದ್ದಾರೆ.

ಕೈದಿಗಳ ಕುರಿತ ವಿಶ್ವಸಂಸ್ಥೆಯ ಒಪ್ಪಂದವನ್ನು ಅನುಷ್ಟಾನಗೊಳಿಸಬೇಕು ಎಂದು ಒತ್ತಾಯಿಸಿರುವ ಸಿಆರ್‌ಪಿಪಿ, “ಅನಾನುಕೂಲಕರ ಪರಿಸ್ಥಿತಿಯಲ್ಲಿರುವ; ಅಥವಾ ಮಾಧ್ಯಮಗಳ ಪ್ರಚಾರ, ಪೊಲೀಸ್, ಸೇನೆ ಅಥವಾ ಪ್ರಭುತ್ವದ ನ್ಯಾಯಸಮ್ಮತವಲ್ಲದ ಅಪಪ್ರಚಾರಗಳ ಕಾರಣದಿಂದಾಗಿ ನಿಷ್ಪಕ್ಷಪಾತಿ ವಿಚಾರಣೆ ನಡೆಯದಂತೆ ತಾರತಮ್ಯಕ್ಕೆ ಒಳಗಾಗಿರುವವರಿಗೆ ಕಾನೂನು ನೆರವು ಒದಗಿಸಬೇಕು” ಎಂದು ವಾದಿಸಿದೆ.

ಕೇರಳದ ಕೊಲ್ಲಂನಲ್ಲಿ ಹುಟ್ಟಿದ ರೋಣ, ಪ್ರಾಣಿಶಾಸ್ತ್ರದಲ್ಲಿ ಪದವಿ ಪಡೆಯುವವರೆಗೆ ಅಲ್ಲಿಯೇ ವಾಸಿಸುತ್ತಿದ್ದರು. ನಂತರ ಅವರು ರಾಜಕೀಯ ವಿಜ್ಞಾನ ಮತ್ತು ಅಂತರರಾಷ್ಟ್ರೀಯ ಸಂಬಂಧಗಳು ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕಾಗಿ ಪುದುಚೆರಿಯ ಸೆಂಟಲ್ ಯುನಿವರ್ಸಿಟಿ (ಪಿಸಿಯು)ಗೆ ಹೋದರು. ಅಲ್ಲಿಂದ ದೆಹಲಿಯ ಜವಾಹರಲಾಲ್ ನೆಹರೂ ಯುನಿವರ್ಸಿಟಿ (ಜೆಎನ್‌ಯು)ಗೆ ತೆರಳಿ ಸ್ನಾತಕೋತ್ತರ ಎಂ.ಫಿಲ್ ಪದವಿಯನ್ನು ಗಳಿಸಿದರು. ಫುಟ್ಬಾಲ್ ಪ್ರೇಮಿಯಾದ ಅವರು, ಮುಖ್ಯವಾಗಿ ಲ್ಯಾಟಿನ್ ಅಮೇರಿಕಾ ದೇಶಗಳ ಆಟವನ್ನು ನಿಕಟವಾಗಿ ಅನುಸರಿಸುತ್ತಾರೆ.

ಇದನ್ನೂ ಓದಿ: ನ್ಯಾಯಕ್ಕಾಗಿ ಎದೆಯುಬ್ಬಿಸಿ ನಿಲ್ಲುವ ವರ್ನನ್ ಗೊನ್ಸಾಲ್ವೆಸ್ ಜೈಲಿನಲ್ಲಿ…

ಇತ್ತೀಚೆಗೆ ಅವರನ್ನು ಡಾಕ್ಟರೇಟ್ ಪದವಿಗಾಗಿ ಇಂಗ್ಲೆಂಡ್‌ನ ಸರ್ರ್‍ಏ ಮತ್ತು ಲೀಸೆಸ್ಟರ್ ವಿಶ್ವವಿದ್ಯಾಲಯಗಳು ಸ್ವೀಕರಿಸಿದ್ದವು. ಅವರ ಪ್ರಸ್ತಾಪಿತ ವಿಷಯವು “ದಿ ಫಿಕ್ಷನ್ ಆಫ್ ದಿ ಮುಸ್ಲಿಂ ಅದರ್: ಸ್ಟೇಟ್, ಲಾ ಎಂಡ್ ಪಾಲಿಟಿಕ್ಸ್ ಆಫ್ ನೇಮಿಂಗ್ ಇನ್ ಕಂಟೆಂಪರರಿ ಇಂಡಿಯಾ” (ಅನ್ಯ ಮುಸ್ಲಿಂ ಎಂಬ ಕಟ್ಟುಕತೆ: ಪ್ರಭುತ್ವ, ಕಾನೂನು ಮತ್ತು ಸಮಕಾಲೀನ ಭಾರತದಲ್ಲಿ ಹೆಸರಿಸುವ ರಾಜಕೀಯ”). ಭಾರತದಲ್ಲಿ ಆಳುವ ವರ್ಗಗಳು ಹಿಂದುತ್ವದ ಶಕ್ತಿಗಳನ್ನು ಬಲಪಡಿಸುವ ಸಲುವಾಗಿ “ಇಸ್ಲಾಮೋಫೋಬಿಯಾ”ವನ್ನು ಒಂದು ಸಿದ್ಧಾಂತವಾಗಿ ಬಳಸುತ್ತಿದೆ ಎಂದು ಅವರ ಸಂಶೋಧನಾ ಪ್ರಬಂಧವು ಚರ್ಚಿಸುತ್ತದೆ.

ಮುಸ್ಲಿಂ ಪುರುಷನ್ನು “ಭಯೋತ್ಪಾದಕ”ನಾಗಿ ಪರಿಗಣಿಸುವ ಸಾಮಾಜಿಕ ಪರಿಗ್ರಹಣೆಯ ಕುರಿತು ಅಧ್ಯಯನ ಮಾಡುವ ಕಡೆಗೆ ಅವರ ಒಲವಿತ್ತು. ಕಾನೂನು ಹೇಗೆ ಒಬ್ಬ ಉಗ್ರವಾದಿ ಮುಸ್ಲಿಂ ಪುರುಷನ ಕಥಾನಕ ಕಟ್ಟಲು, ಭಯೋತ್ಪಾದಕ ಪುರುಷತ್ವವಾಗಿ ಬಿಂಬಿಸಿ ನಂತರ ಸೈದ್ಧಾಂತಿಕ ಪ್ರಭುತ್ವ ವ್ಯವಸ್ಥೆ ಅದನ್ನೇ ಬಳಸಿಕೊಂಡು ಬಹುಸಂಖ್ಯಾತ ಜನರಲ್ಲಿ ’ಅನ್ಯ ಮುಸ್ಲಿಂ’ ಎಂಬುದನ್ನು ಪುನರುಚ್ಚರಿಸಿ, ಅದೇ ಹೊತ್ತಿಗೆ, ಮುಸ್ಲಿಂ ಮಹಿಳೆಯರನ್ನು ಭಾರತ ಪ್ರಭುತ್ವದ ರಕ್ಷಣೆ ಅಗತ್ಯವಾಗಿರುವ, ವಿಧೇಯ ದೇಹಗಳಾಗಿ ಬಿಂಬಿಸುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಅವರ ಅಧ್ಯಯನದ ಉದ್ದೇಶವಾಗಿತ್ತು.

ಬಂಧನದ ನಂತರ ರೋಣ ತಮ್ಮ ಡಾಕ್ಟರೆಟ್ ಅಧ್ಯಯನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಮಾತ್ರವಲ್ಲ ಅವರು ಇತರಿಗೆ ಒದಗಿಸುತ್ತಿದ್ದ ಕಾನೂನು ನೆರವನ್ನೂ ಕೂಡ ಕಡಿತಗೊಳಿಸಲಾಗಿದೆ.

ರೋಣ ಅಜೀವಪಯಂತ ಮಾನವಹಕ್ಕುಗಳ ಹೋರಾಟಗಾರ. ಜೈಲಿನ ಪರಿಮಿತಿಯೊಳಗಿಂದಲೇ ಅವರ ಹೋರಾಟ ಮುಂದುವರಿಯುತ್ತದೆ. ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿ, ಹಣೆಪಟ್ಟಿ ಹಚ್ಚಿ, ನ್ಯಾಯವನ್ನು ನಿರಾಕರಿಸುವುದೆಂದರೆ ಏನು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ವಿದ್ಯಾರ್ಥಿಗಳ ನೆಚ್ಚಿನ, ಜನಪ್ರಿಯ ಪ್ರಾಧ್ಯಾಪಕ ಡಾ. ಹನಿ ಬಾಬು ಬಂಧನದಲ್ಲಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...