Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್...

ಫ್ಯಾಕ್ಟ್‌ಚೆಕ್: ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

- Advertisement -
- Advertisement -

ಚಾಮರಾಜನಗರ ಜಿಲ್ಲೆಯ SP ದಿವ್ಯಾ ಸಾರಾ ಥಾಮಸ್ ಕೊಳ್ಳೇಗಾಲದ ಆಂಜನೇಯ ದೇವಸ್ಥಾನಕ್ಕೆ ಹೋಗಿ ಅಲ್ಲಿಯ ಅರ್ಚಕರಿಂದ ಏಸುವಿನ ಫೋಟೊ ಇಡಿಸಿ ಪೂಜೆ ಮಾಡಿಸಿದ್ದಾರೆ. ನಮ್ಮ ದೇವಸ್ಥಾನಗಳು ಎಂದರೆ ಅಷ್ಟೊಂದು ಸಸಾರವೇ? ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಟ್ವಿಟ್ಟರ್‌ನಲ್ಲಿಯೂ ಅದೇ ರೀತಿಯ ಆರೋಪವೊರಿಸಲಾಗಿದ್ದು, ಆ ಟ್ವೀಟ್‌ 6 ಸಾವಿರಕ್ಕೂ ಹೆಚ್ಚು ಜನ ರೀಟ್ವಿಟ್ ಮಾಡಿದ್ದಾರೆ.

 

ಆಗಸ್ಟ್ 5 ರಂದು ರಾಮಂದಿರ ಶಿಲಾನ್ಯಾಸ ನಡೆಯುತ್ತಿರುವಾಗ ರಾಜ್ಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿದ್ದರಿಂದ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌ ರವರು ಪರೀಶೀಲನೆ ನಡೆಸಲು ಕೊಳ್ಳೇಗಾಲಕ್ಕೆ ತೆರಳಿದ್ದರು. ಆ ವೇಳೆ ಕೊಳ್ಳೇಗಾಲದ ಜ್ಯೋತಿಷಿ ಮತ್ತು ಅರ್ಚಕ ಟಿವಿಎಸ್ ರಾಘವನ್‌ರವರು ಎಸ್ ಪಿಯವರನ್ನು ತಮ್ಮ ಸ್ವಗೃಹದಲ್ಲಿರುವ ದೇವಸ್ಥಾನಕ್ಕೆ ಆಹ್ವಾನಿಸಿದ್ದರು. ಎಸ್‌ಪಿಯವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರಾಗಿದ್ದರಿಂದ ಏಸು ಮತ್ತು ಮೇರಿಯ ಚಿತ್ರವುಳ್ಳ ಫೋಟೊವನ್ನು ಗರ್ಭಗುಡಿಯಲ್ಲಿಟ್ಟು ಪೂಜೆ ಮಾಡಿದ ಅರ್ಚಕರು ಎಸ್‌ಪಿಯವರಿಗೆ ಸನ್ಮಾನ ಮಾಡಿ ಆ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿದರು. ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಬಹುದು. ನಂತರ ಆ ಫೋಟೊ ವೈರಲ್ ಆಗಿದ್ದು ಎಸ್‌ಪಿಯವರೇ ಒತ್ತಾಯಪೂರ್ವಕವಾಗಿ ಏಸುವಿನ ಫೋಟೊ ಇರಿಸಿ ಪೂಜೆ ಮಾಡಿಸಿದ್ದಾರೆ ಎಂದು ದೂರಲಾಗಿತ್ತು.

ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂಬ ಆರೋಪ ಬಂದಾಗ ಅರ್ಚಕ ಟಿವಿಎಸ್ ರಾಘವನ್‌ರವರು “ಯಾರೋ ಬಂದರೂ, ಏನೇ ತಂದರೂ ಅದನ್ನು ದೇವರ ಮುಂದಿಟ್ಟು ಪೂಜೆ ಮಾಡಿಕೊಡುವುದು ನಮ್ಮ ಸಂಪ್ರದಾಯ. ಒಳ್ಳೆಯದಾಗಲಿ ಎಂಬ ಭಾವನೆಯಷ್ಟೆ ಹೊರತು ಯಾವುದೇ ಕೆಟ್ಟ ದೃಷ್ಟಿಯಿಂದ  ಆ ಫೋಟೊ ಇಟ್ಟಿಲ್ಲ. ಹಿಂದೂ ಸಮುದಾಯಕ್ಕೆ ಇದರಿಂದ ನೋವಾಗಿದ್ದಾರೆ ಕ್ಷಮೆ ಕೋರುತ್ತೇನೆ ಎಂದಿದ್ದಾರೆ. ಅಲ್ಲದೇ ತಾನು ಹಿಂದೂಗಳಾಗಿಯೇ ಉಳಿಯುತ್ತೇನೆ, ಹಿಂದೂವಾಗಿಯೇ ಕೊನೆಯಾಗುತ್ತೇನೆ ಎಂದು ಅವರು ಹೇಳಿದ್ದಾರೆ. ಅವರ ವಿಡಿಯೋ ಇಲ್ಲಿದೆ.

ಇನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಫ್ಯಾಕ್ಟ್‌ಚೆಕ್ ನಡೆಸಿದ್ದು, ಪೊಲೀಸರು ಸ್ವತಂತ್ರವಾಗಿ ಅಲ್ಲಿನ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅದರಂತೆ ಎಸ್‌ಪಿ ದಿವ್ಯಾ ಸಾರಾ ಥಾಮಸ್‌ರವರು ದೇವಾಸ್ಥಾನಕ್ಕೆ ಯಾವುದೇ ಫೋಟೊ ತೆಗೆದುಕೊಂಡು ಹೋಗಿಲ್ಲ ಮತ್ತು ಏಸು ಫೋಟೊಗೆ ಪೂಜೆ ಮಾಡುವಂತೆ ಒತ್ತಾಯಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅದರ ವರದಿ ಇಲ್ಲಿದೆ.

ದಿ ನ್ಯೂಸ್‌ಮಿನಿಟ್‌ ಜೊತೆ ಮಾತನಾಡಿದ ಎಸ್‌ಪಿ ದಿವ್ಯಾ ಸಾರಾ ಥಾಮಸ್‌ “ಫೇಕ್‌ ಪೋಸ್ಟ್‌ ಮೂಲಕ ನನ್ನ ಖ್ಯಾತಿ ಕೆಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಕೆಲ ಕಿಡಿಗೇಡಿಗಳು ಫೇಕ್‌ ಪೊಸ್ಟ್‌ ಹರಡುತ್ತಿದ್ದಾರೆ. ನಾನು ಕ್ರಿಶ್ಚಿಯನ್, ನನ್ನ ಪತಿ ಹಿಂದೂ ಆಗಿದ್ದಾರೆ. ನಾನು ದೇವಸ್ಥಾನಕ್ಕೆ ಹೋಗಿದ್ದೇ ಆದರೆ ಏಸುವಿನ ಫೋಟೊಗೆ ಪೂಜೆ ಮಾಡುವಂತೆ ಒತ್ತಾಯಿಸಿಲ್ಲ. ಅರ್ಚಕರೇ ಹಾಗೆ ಮಾಡಿ ನನ್ನನ್ನು ಸನ್ಮಾನಿಸಿದರು ಅಷ್ಟೇ” ಎಂದಿದ್ದಾರೆ. ಇದರ ವರದಿ ಇಲ್ಲಿದೆ.

ಒಟ್ಟಿನಲ್ಲಿ ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ ಎಂಬುವು ಸ್ಪಷ್ಟವಾಗಿದೆ.

ಕೃಪೆ: FAQTLY


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಶ್ರೀನಗರದ ಲಾಲ್ ಚೌಕದಲ್ಲಿ ರಾಷ್ಟ್ರಧ್ವಜ ಹಾರಿಸಿರುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...