Homeಕರ್ನಾಟಕಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಬೆಂಗಳೂರಿನ ಹೆಸರಘಟ್ಟ ಬಳಿ 150 ಎಕರೆ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು ಇದರ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಇದು ದಖ್ಖನ್ ಪ್ರಸ್ಥಭೂಮಿಯ ಹುಲ್ಲುಗಾವಲು ಪ್ರದೇಶವಾಗಿದ್ದು ಜೈವಿಕ ಮತ್ತು ಪಾರಿಸರಿಕಾವಾಗಿ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ.

2020-21ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಟಿನಲ್ಲಿ ರೂ.500 ಕೋಟಿ ಹಣವನ್ನು ಚಿತ್ರನಗರಿ ನಿರ್ಮಾಣಕ್ಕಾಗಿ ಘೋಷಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.

ಹೆಸರಘಟ್ಟದಲ್ಲಿ ಚಿತ್ರನಗರಿಗಾಗಿ ಮೀಸಲಿಟ್ಟಿರುವ ಸುಮಾರು 347 ಎಕರೆ ಭೂಪ್ರದೇಶವು ಪಶುಸಂಗೋಪನಾ ಇಲಾಖೆಗೆ ಸೇರಿದೆ. ಈ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಚಿತ್ರನಗರಿ ನಿರ್ಮಾಣದಿಂದ ಪರಿಸರ ಮತ್ತು ಜೀವ ವೈವಿಧ್ಯತೆಗೆ ತೊಂದರೆಯುಂಟಾಗುತ್ತದೆ ಎಂದು ಹಲವು ಪರಿಸರವಾದಿಗಳು ಇದನ್ನು ವಿರೋಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 2012 ರಲ್ಲಿಯೇ ಪರಿಸರವಾದಿಗಳು ಪಿಐಎಲ್ ಸಲ್ಲಿಸಿದ್ದರಿಂದ ಅಂದಿನ ರಾಜ್ಯ ಸರ್ಕಾರ ಯಥಾಸ್ಥಿತಿಯನ್ನು ಮುಂದುವರಿಸುವುದಾಗಿ ಹೇಳಿ, ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಪ್ರಸ್ತಾವವನ್ನು ಕೈಬಿಟ್ಟು ಪರ್ಯಾಯ ಸ್ಥಳವನ್ನು ಹುಡುಕುತ್ತಿತ್ತು. ಆದರೆ ಅಂದು ಆಶ್ವಾಸನೆ ಕೊಟ್ಟ ಸರ್ಕಾರ ಈಗ ಮತ್ತೆ ಅದೇ ಕೆಲಸಕ್ಕೆ ಮುಂದಾಗಿದೆ ಎಂದು ಪರಿಸರವಾದಿ ಮಹೇಶ್ ಭಟ್ ಹೇಳುತ್ತಾರೆ.

ಈ ವಿಷಯದ ಕುರಿತು ಮಹೇಶ್ ಭಟ್ ಮೊದಲಿನಿಂದಲೂ ದನಿಯೆತ್ತುತ್ತಿದ್ದಾರೆ. ಅರ್ಕಾವತಿ ನದಿಯ ಜಲಾನಯನ ಪ್ರದೇಶವಾಗಿರುವುದರಿಂದ ಇದನ್ನು ಉಳಿಸಿಕೊಳ್ಳಬೇಕಾದ ತುರ್ತಿದೆ. ಇದರ ಕುರಿತು ಸಾಕಷ್ಟು ಬರಹಗಳನ್ನು ಪ್ರಕಟಿಸುವುದರೊಂದಿಗೆ ಅವರು ಹಲವು ಹೋರಾಟಗಳನ್ನೂ ಮಾಡಿದ್ದಾರೆ.

ವಾಯುಮಾಲಿನ್ಯವನ್ನು ತಡೆಗಟ್ಟಿ ಪರಿಸರವನ್ನು ಉಳಿಸುವುದಾಗಿ ಜಗತ್ತಿನ ಎಲ್ಲಾ ದೇಶಗಳು ಪಣತೊಟ್ಟಿವೆ. ಈಗಾಗಲೆ ಜಾಗತಿಕ ತಾಪಮಾನ ಹೆಚ್ಚಿ ಸಾಕಷ್ಟು ತೊಂದರೆಗಳಾಗುತ್ತಿವೆ. ಮತ್ತೊಂದು ಕಡೆ ಕೊರೊನಾ ಎಂಬ ಸಾಂಕ್ರಾಮಿಕ ಹರಡಲೂ ಸಹ ಈ ರೀತಿಯ ಪರಿಸರನಾಶವೇ ಕಾರಣ ಎಂದು ತಿಳಿದುಬಂದಿದೆ.  ಹೀಗಿರುವಾಗ ಸರ್ಕಾರ ಮತ್ತೆ ಇಂತಹ ಕೆಲಸಕ್ಕೆ ಕೈ ಹಾಕಿರುವುದು ನಿಜವಾಗಲೂ ಖಂಡನೀಯ ಎಂದು ಮಹೇಶ್ ಭಟ್ ಹೇಳುತ್ತಾರೆ.

ಅಷ್ಟೇ ಅಲ್ಲದೇ ಇದು ಬೆಂಗಳೂರಿನ ಸುತ್ತಮುತ್ತ ಇರುವ ಏಕೈಕ ಹಸಿರು ಪ್ರದೇಶವಾಗಿದ್ದು, ಸಾಕಷ್ಟು ಜೀವ ವೈವಿಧ್ಯತೆಯನ್ನು ಹೊಂದಿದೆ. 120ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳು, ಸಸ್ತನಿಗಳು ಮತ್ತು ಸರಿಸೃಪಗಳಿವೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳಿಗೆ ಇರುವ ಏಕೈಕ ತಾಣವಿದು. ಜೊತೆಗೆ ನಗರೀಕರಣ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಡೆಗಟ್ಟಲು ಪರಿಸರದ ಉಳಿವಿನಿಂದ ಮಾತ್ರ ಸಾದ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮಹೇಶ್ ಭಟ್ ಇದರ ಕುರಿತು ಸವಿಸ್ತಾರವಾಗಿ ಫೇಸ್ಬುಕ್ ನಲ್ಲಿ ಬರಹವೊಂದನ್ನು ಮತ್ತು ಸರ್ಕಾರದ ಆದೇಶವನ್ನು ಹಂಚಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮತ್ತೊಬ್ಬ ಪರಿಸರವಾದಿ ಲಿಯೋ ಸಾಲ್ಡಾನಾ ‘ಇಷ್ಟು ಸೂಕ್ಷ್ಮವಾದ ಪರಿಸರ ಪ್ರದೇಶವನ್ನು ಚಿತ್ರನಗರಿಯ ನಿರ್ಮಾಣಕ್ಕೆ ಕೊಡುವುದು ಸರ್ಕಾರದ ಹುಚ್ಚುತನವನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಸುಮಾರು 100 ವರ್ಷಗಳಿಗೆ ಮೊದಲು ಇಲ್ಲಿ ಕಟ್ಟೆಯೊಂದನ್ನು ಕಟ್ಟಿ ಕೆರೆಯನ್ನು ನಿರ್ಮಿಸಲಾಗಿತ್ತು. ಬೆಂಗಳೂರಿಗೆ ಇದು ನೀರಿನ ಮೂಲವಾಗಿತ್ತು. ಆದರೆ ಈಗ 10 ವರ್ಷಗಳಿಂದ ಅಲ್ಲಿ ನೀರೂ ಸಹ ಇಲ್ಲ. ಹೀಗಿರುವಾಗ ಅಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದರಿಂದ ಉಪಯೋಗವಿಲ್ಲ’ ಎಂದಿದ್ದಾರೆ.

ಸರ್ಕಾರದ ಒಡೆತನದಲ್ಲಿಯೇ ಹತ್ತಾರು ಫ್ಯಾಕ್ಟರಿಗಳು ಖಾಲಿಯಾಗಿ ಉಳಿದಿವೆ. ಇಂತಹ ಯಾವುದೋ ಒಂದು ಸ್ಥಳದಲ್ಲಿ ಚಿತ್ರನಗರಿ ನಿರ್ಮಾಣ ಮಾಡಿದರೆ ಒಳ್ಳೆಯದು. ಅದು ಬಿಟ್ಟು ಸದ್ಯ ಬೆಂಗಳೂರನ್ನು ಕಾಪಾಡುತ್ತಿರುವ ಈ ಪ್ರದೇಶವನ್ನೂ ನಿರ್ಮೂಲನೆ ಮಾಡಿದರೆ ಮುಂದೆ ಅತ್ಯಂತ ಅಪಾಯಕಾರಿ ಸನ್ನಿವೇಷಗಳನ್ನು ಎದುರಿಸಬೇಕಾಗುತ್ತದೆ. ನೂರಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಲಿಯೋ ಸಾಲ್ಡಾನಾ ಹೇಳಿದ್ದಾರೆ.

ನಮಗೆ ಚಿತ್ರನಗರಿ ಬೇಕು, ಆದರೆ ಪರಿಸರವನ್ನು ನಾಶಮಾಡಿ ಅದನ್ನು ನಿರ್ಮಿಸುವುದಕ್ಕೆ ನನ್ನ ವಿರೋಧವಿದೆ. ಚಿತ್ರನಗರಿಯೂ ಬೇಕು, ಪರಿಸರವೂ ಉಳಿಯಬೇಕು ಎಂದರೆ ಈ ಪ್ರದೇಶವನ್ನು ಬಿಟ್ಟು ಬೇರೆ ಯಾವುದಾದರೂ ಬಯಲು ಪ್ರದೇಶ ಅಥವಾ ಪರಿಸರದ ದೃಷ್ಟಿಯಿಂದ ಅಷ್ಟಾಗಿ ಸೂಕ್ಷ್ಮವಲ್ಲದ ಸ್ಥಳವನ್ನು ಹುಡುಕಿ ನಿರ್ಮಿಸಿಕೊಳ್ಳಬೇಕು ಎಂದು ಚಿತ್ರನಟ ಚೇತನ್ ಅಹಿಂಸಾ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕೆಂಬುದು ಹಲವು ವರ್ಷಗಳ ಕೂಗು. ಆದರೆ ಇದೇ ಸ್ಥಳದಲ್ಲಿ ಬೇಕು ಎಂದು ನಾವು ಹೇಳುತ್ತಿಲ್ಲ. ಬಹುಪಾಲು ಬೆಂಗಳೂರಿಗೆ ಹತ್ತಿರವಾಗುವಂತೆ ಎಲ್ಲಿಯಾದರೂ ಸರಿ ಆದಷ್ಟು ಬೇಗ ಚಿತ್ರನಗರಿ ನಿರ್ಮಾಣ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಕನ್ನಟ ಚಿತ್ರರಂಗದ ದೃಷ್ಟಿಕೋನದಿಂದ ನೋಡುವುದಾದರೆ, ಈಗಲೂ ಚಿತ್ರೀಕರಣಕ್ಕಾಗಿ ಹೈದರಾಬಾದಿಗೊ ಅಥವಾ ಮತ್ತೆಲ್ಲಿಗೋ ಹೋಗಬೇಕಾಗಿದೆ. ಇದು ಹೆಚ್ಚು ದುಬಾರಿಯೂ ಆಗಿದೆ. ಈಗಿರುವ ಕಂಠೀರವ ಸ್ಟುಡಿಯೋದಲ್ಲಿ ಕೆಲವು ಕೊರತೆಗಳಿವೆ. ಹಾಗಾಗಿ ಬೆಂಗಳೂರಿನ ಬಳಿ ಚಿತ್ರನಗರಿ ನಿರ್ಮಾಣವಾಗಬೇಕು. ಜೊತೆಗೆ 4-5 ವರ್ಷಗಳಿಗೊಮ್ಮೆ ಅದು ಅಪ್ಡೇಟ್ ಆಗುತ್ತಿರಬೇಕು ಎಂದು ಚೇತನ್ ಹೇಳಿದ್ದಾರೆ.


ಇದನ್ನೂ ಓದಿ: ಪರಿಸರ ದಿನ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...