Homeಕರ್ನಾಟಕಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ಐದು ತಿಂಗಳಾದರೂ ಬಾರದ ಗೌರವಧನ : ಸಂಕಷ್ಟದಲ್ಲಿ ಬಿಸಿಯೂಟ ನೌಕರರು

ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ.

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರಿಗೆ ಐದು ತಿಂಗಳಾದರೂ ಗೌರವಧನ ಬಿಡುಗಡೆಯಾಗಿಲ್ಲ. ಹತ್ತು-ಹದಿನೈದು ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತೆಯರು ಇದೀಗ ಕೊರೊನಾ ಲಾಕ್‌ಡೌನ್‌ ನಡುವೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಯಾವುದೇ ಅಧಾಯದ ಮೂಲಗಳು ಇಲ್ಲದ ಅವರು ಇದೇ ವೃತ್ತಿಯನ್ನು ನಂಬಿ ಜೀವನ ದೂಡುತ್ತಿದ್ದು, ಗೌರವಧನ ಸಿಗದೆ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಬಂದಿದೆ.

ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಕೆಗೆ ಇವರನ್ನು ಗೌರವಧನದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಶಾಲೆಗಳು ಆರಂಭವಾಗುವ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ಬಿಸಿಯೂಟ ಕಾರ್ಯಕರ್ತೆಯರಿಗೆ ಸಂಜೆ 4 ಗಂಟೆಯವರೆಗೂ ಕೆಲಸವಿರುತ್ತದೆ.

ಯಾವುದೇ ಸರ್ಕಾರಿ ಶಾಲೆಗಳಲ್ಲಿ ಡಿ ಗ್ರೂಪ್ ನೌಕರರು ಇಲ್ಲ. ಹಾಗಾಗಿ ಬಿಸಿಯೂಟ ಮಾಡುವ ಮೊದಲು ಕೊಠಡಿಗಳು ಮತ್ತು ಆವರಣ ಸ್ವಚ್ಚಗೊಳಿಸುವ ಕೆಲಸವೂ ಬಿಸಿಯೂಟ ಕಾರ್ಯಕರ್ತೆಯರ ಮೇಲೆ ಬೀಳುತ್ತದೆ. ಕೈತೋಟಗಳನ್ನು ಆರೈಕೆ ಮಾಡುವ ಕೆಲಸವನ್ನು ನೋಡಿಕೊಳ್ಳಬೇಕಾಗುತ್ತದೆ. ಬಿಸಿಯೂಟ ಮಾಡಿ ಮಕ್ಕಳಿಗೆ ಊಟ ಬಡಿಸಿದ ಮೇಲೆ ಪಾತ್ರೆಗಳ ಶುಚಿಗೊಳಿಸುವುದು ನಂತರ ಶಾಲಾ ಕೈತೋಟದಲ್ಲಿ ಕೆಲಸ ಇರುತ್ತದೆ.

ದಿನದ ಸುಮಾರು ಆರು ಗಂಟೆಗಳನ್ನು ಶಾಲೆಯಲ್ಲೇ ಕಳೆಯಬೇಕಾಗುತ್ತದೆ. ಹಾಗಾಗಿ ಬಿಸಿಯೂಟದವರು ಬೇರೆ ಕೂಲಿ ಕೆಲಸಗಳಿಗೂ ಹೋಗಲು ಸಾಧ್ಯವಿಲ್ಲ. ಅಕ್ಷರದಾಸೋಹ ಯೋಜನೆಯಡಿ ಬರುವ ಮಾಸಿಕ 2600 ರೂ ಗೌರವಧನ ಹೊರತುಪಡಿಸಿ ಬೇರೆ ಹಣಕಾಸಿನ ಮೂಲಗಳು ಇಲ್ಲ. ಬರುವ ಕಡಿಮೆ ಗೌರವಧನದಲ್ಲಿ ಕುಟುಂಬವನ್ನು ನಿರ್ವಹಣೆ ಮಾಡಬೇಕಾಗಿದೆ.

ಕೊರೊನ ಸೋಂಕು ವ್ಯಾಪಕವಾಗಿ ಸಮುದಾಯದ ನಡುವೆ ಹರಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಶಾಲೆಗಳು ಆರಂಭವಾಗಿಲ್ಲ. ಕೋವಿಡ್-19 ಮತ್ತು ಲಾಕ್ ಡೌನ್‌ನಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತೆ ಮಾಡಿದೆ. ಐದು ತಿಂಗಳಿಂದ ಗೌರವಧನ ಸಿಕ್ಕಿಲ್ಲ. ಕೂಲಿಯೂ ಇಲ್ಲ, ಮನೆ ನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂದು ಬಿಸಿಯೂಟ ಮಹಿಳೆಯರು ನಾನುಗೌರಿ.ಕಾಂ ಜೊತೆ ನೋವು ತೋಡಿಕೊಂಡರು.

ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತ ಮಾತನಾಡಿ “ರಾಜ್ಯದ 54 ಸಾವಿರ ಶಾಲೆಗಳಲ್ಲಿ ಒಟ್ಟು 1,17,919 ಮಂದಿ ಅಡುಗೆಯವರು ಮತ್ತು ಅಡುಗೆ ಸಹಾಯಕರು ಕೆಲಸ ಮಾಡುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ 2700 ರೂ ಮತ್ತು ಅಡುಗೆ ಸಹಾಯಕರಿಗೆ 2600 ರೂಪಾಯಿ ಗೌರವಧನ ನೀಡಲಾಗುತ್ತಿದೆ. ಆದರೆ ಕಳೆದ 5 ತಿಂಗಳಿನಿಂದಲೂ ಹಣ ಬಿಡುಗಡೆ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಹಲವು ಮನವಿಗಳನ್ನು ನೀಡಿದ್ದೇವೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇವೆ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದೇವೆ. ಅವರೆಲ್ಲರೂ ಕೊಡುವ ಮಾತನಾಡುತ್ತಾರೆಯೇ ಹೊರತು ಕೊಟ್ಟಿಲ್ಲ. ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸಿದ್ದೇವೆ. ಕೊಡುವ ಭರವಸೆಗಳನ್ನು ನೀಡಿದರು. ಆದರೂ ಹಣ ಬಂದಿಲ್ಲ. ಹಾಗಾಗಿ ಆಗಸ್ಟ್ 11 ರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇವೆ. ನಿನ್ನೆ ಮತ್ತು ಇಂದು ರಜೆ ಇದ್ದರಿಂದ ಉಪವಾಸವನ್ನು ನಿಲ್ಲಿಸಿದ್ದೆವು. ಆಗಸ್ಟ್ 17ರಿಂದ ಮತ್ತೆ ಉಪವಾಸ ಕೂರುತ್ತೇವೆ ಎಂದು ಅವರು ಹೇಳಿದರು.

ಏಪ್ರಿಲ್ ತಿಂಗಳಿಂದಲೂ ಹಣ ಬಿಡುಗಡೆಯಾಗದೇ ಇರುವುದು ಬಡತನದಲ್ಲಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕಿಯರು ಕುಟುಂಬಗಳನ್ನು ಸಂಭಾಳಿಸುವುದು ಕಷ್ಟವಾಗಿದೆ. ಕೂಡಲೇ ಸರ್ಕಾರ ಗೌರವಧನ ಬಿಡುಗಡೆ ಮಾಡಬೇಕು. ಅವರ ಕುಟುಂಬಗಳನ್ನು ರಕ್ಷಣೆ ಮಾಡಬೇಕು ಎಂದು ಮಾಲಿನಿ ಮೆಸ್ತ ಆಗ್ರಹಿಸಿದರು.


ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...