Homeಕರ್ನಾಟಕಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ!

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮತ್ತು ಕನ್ನಡ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಹಲವು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಹುಟ್ಟಿದ ದಿನವೇ ಅವರ ಪ್ರತಿಮೆಗೆ ಅವಮಾನ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರವು ಕನ್ನಡಿಗರ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.

ಅನುಮತಿ ಪಡೆದಿದ್ದೇವೆ

ಪೊಲೀಸರು ಅನುಮತಿ ಪಡೆಯದೇ ಪ್ರತಿಮೆ ನಿರ್ಮಾಣ ಮಾಡಿರುವುದು ಕಾನೂನುಬಾಹಿರ ಎಂದು ವಾದಿಸಿದರೆ ಹಲವು ಕನ್ನಡ ಹೋರಾಟಗಾರರು, ಹಿಂದಿನ ಸರ್ಕಾರವಿದ್ದಾಗಲೇ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದೇವೆ ಮತ್ತು ಗ್ರಾಮಪಂಚಾಯ್ತಿಯಿಂದ ಅನುಮತಿ ಪಡೆದಿದ್ದೇವೆ ಎಂದು ವಾದಿಸಿದ್ದಾರೆ.

ಈಶ್ವರಪ್ಪ ಎಲ್ಲಿದ್ದಾರೆ?

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡುವು ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದ ಕೆ.ಎಸ್ ಈಶ್ವರಪ್ಪನವರು ಈಗ ಎಲ್ಲಿದ್ದಾರೆ ಎಂದು ಹಲವು ನೆಟ್ಟಿಗರು ಪ್ರಶ್ನಿಸಿದ್ದಾರೆ. ಇತ್ತ ಸಂಗೊಳ್ಳಿ ರಾಯಣ್ಣನವರಿಗೆ ಬಿಜೆಪಿಯವರಿಂದಲೇ ಅವಮಾನವಾಗುತ್ತಿದ್ದು ತಿರುಗಿ ನೋಡದ ಈಶ್ವರಪ್ಪನವರಿಗೆ ರಾಯಣ್ಣರ ಮೇಲೆ ಪ್ರೀತಿ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ರಾಯಣ್ಣನ ಹೆಸರಲ್ಲಿ ಬ್ರಿಗೇಡಗಳನ್ನ ಕಟ್ಟಿಕೊಳ್ಳೊದೇನು, ನಿನ್ನ ಪತ್ರಿಕೆಗಳಲ್ಲಿ ರಾಯಣ್ಣನ ಕುರಿತು ಬರೆದಿದ್ದೇನು! ರಾಯಣ್ಣನನ್ನು ರಾಜಕೀಯಕ್ಕೆ ಬಳಸಿಕೊಳ್ಳೋದು. ಪುತ್ಥಳಿಯನ್ನು ಹಿಂದಿನಿಂದ ತೆಗೆಸೋದು. ಕನ್ನಡಿಗರಿಗೆ ಮಂಕುಬೂದಿ ಎರಚಿದ್ದು ಸಾಕು ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಸಂಗೊಳ್ಳಿ ರಾಯಣ್ಣ ಬೇಡ: ಸಾವರ್ಕರ್ ಬೇಕು – ಇದು ಬಿಜೆಪಿ ನೀತಿ

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕನ್ನಡಿಗರ ಹೆಮ್ಮಯ ರಾಯಣ್ಣನ ಪ್ರತಿಮೆ ತೆರವು ಗೊಳಿಸಿದ ಸರ್ಕಾರ. ಬೆಂಗಳೂರಿನಲ್ಲಿ ಮರಾಠಿ ಸಾವರ್ಕರ್ ಪ್ರತಿಮೆ ಉದ್ಘಾಟನೆ ಮಾಡಿದ ಸರ್ಕಾರ. ಕರ್ನಾಟಕದಲ್ಲಿ ಕನ್ನಡಿಗರ ಸರ್ಕಾರವಿದೆಯೋ ಅಥವಾ ನಾಗಪುರದ ಸರ್ಕಾರವಿದೆಯೋ? ಇದು ರಾಯಣ್ಣನ ಜನ್ಮದಿನದಂದೆ ಕನ್ನಡಿಗರಿಂದ ಕನ್ನಡಿಗ ರಾಯಣ್ಣನಿಗೆ ಮಾಡಿದ ಅವಮಾನ ಎಂದು ಪ್ರತಾಪ್ ಕಣಗಲ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಒಂದೆಡೆ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣನವರ ಪ್ರತಿಮೆ ಅವರ ಹುಟ್ಟೂರಿನಿಂದಲೆ ಎತ್ತಂಗಡಿ. ಮತ್ತೊಂದೆಡೆ, ಬೆಂಗಳೂರಿನಲ್ಲಿ ಬ್ರಿಟಿಷರ ಕ್ಷಮಾಪಣೆ ಕೇಳಿದ ಸಾವರ್ಕರ್ ಪ್ರತಿಮೆ ಅನಾವರಣ. ಇದು ಕನ್ನಡಿಗರಿಗೆ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸ್ವಾತಂತ್ರ್ಯ ದಿನದ ಕೊಡುಗೆ ಎಂದು ಗದ್ದಪ್ಪ ಎಂಬುವವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನೆಗೆ ಕರೆ

ಈ ಸರ್ಕಾರಕ್ಕೆ ಮರಾಠಿಗ ಸಾವರ್ಕರ್ ಬೇಕು. ಕೆಚ್ಚೆದೆಯ ಕನ್ನಡಿಗ ಸ್ವಾತಂತ್ರ್ಯ ಸೇನಾನಿ ರಾಯಣ್ಣ ಬೇಕಾಗಿಲ್ಲ….! ನಾಡ ಅಭಿಮಾನಿಗಳೇ ಬನ್ನಿ, ನಾಳೆ ಬೆಳಿಗ್ಗೆ ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ. ಬೆಳಗ್ಗೆ -11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣ ಮುಂಭಾಗ ಪ್ರತಿಭಟನೆ ನಡೆಸೋಣ ಎಂದು ಕನ್ನಡ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್‌ರವರು ಕರೆನೀಡಿದ್ದಾರೆ.

ಬೆಳಗಾವಿಯ ಪೀರನವಾಡಿಯಲ್ಲಿ ಹುತಾತ್ಮ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸ್ಥಾಪಿಸಲು ಪೊಲೀಸರು ಅವಕಾಶ ನೀಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿರುವ ಅವಮಾನ, ಈ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಕೂಡಲೇ ಸರ್ಕಾರ ಎಚ್ಚೆತ್ತು ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಜೆಡಿಎಸ್ ಪಕ್ಷ ಘೋಷಿಸಿದೆ.

ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ.‌ ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ರಾಯಣ್ಣನ ಅಭಿಮಾನಿಗಳು ಮೂರ್ತಿ ಸ್ಥಾಪನೆಗೆ‌ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ನಡೆದುಕೊಳ್ಳಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....