Homeಅಂಕಣಗಳುಹಿಂಸೆಯನ್ನು ವಿರೋಧಿಸೋಣ, ಜೊತೆಗೆ.....

ಹಿಂಸೆಯನ್ನು ವಿರೋಧಿಸೋಣ, ಜೊತೆಗೆ…..

- Advertisement -
- Advertisement -

ಗೌರಿ ಲಂಕೇಶ್
ನವೆಂಬರ್ 23, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಹಿಂಸೆ. ಈ ಪದ ವಾಸ್ತವದಲ್ಲಿ ಪಡೆಯುವ ನಾನಾ ಸ್ವರೂಪಗಳ ಬಗ್ಗೆ ಇತ್ತೀಚೆಗೆ ನಾನಾ ಚರ್ಚೆಗಳು ನಡೆದಿವೆ. ನಮ್ಮದು ಅಹಿಂಸಾವಾದವನ್ನು ನಂಬಿರುವ ದೇಶ ಎಂದೇ ಹೇಳಿಕೊಂಡು ಬಂದಿರುವ ಭಾರತದಲ್ಲಿ ಇವತ್ತಿಗೂ ದುರ್ಬಲರ ಮೇಲೆ ದೌರ್ಜನ್ಯ ನಡೆಯಿತ್ತಲೇ ಇದೆ. ಅದನ್ನೆಲ್ಲ ನಮ್ಮ ಸಮಾಜದ ಹುಳುಕುಗಳು ಎಂದು ಹೇಳುತ್ತಾ ಸುಮ್ಮನಿದ್ದವರೆಲ್ಲ, ಯಾವಾಗ ಹಲವರು ಆ ಹುಳುಕುಗಳನ್ನು ನಿವಾರಿಸಲು ಹಿಂಸೆಯೆನಿಸುವ ಮಾರ್ಗಕ್ಕಿಳಿದರೋ, ಆಗ ಈ ಹಿಂಸಾತ್ಮಕ ಮಾರ್ಗಕ್ಕೆ ನಮ್ಮ ಸಮಾಜದಲ್ಲಿ ಜಾಗವಿಲ್ಲ ಎಂದು ಸಿಡಿದೆದ್ದಿದ್ದಾರೆ.
ಹೌದು, ಹಿಂದೆಯನ್ನು ಎಂದಿಗೂ ಸಹಿಸಕೂಡದು. ಆದರೆ ನಮ್ಮ ಕಣ್ಣುಮುಂದೆಯೇ ನಮ್ಮ ಸುತ್ತಲು ನಡೆಯುತ್ತಿರುವ ಹಿಂಸೆಯ ಬಗ್ಗೆ ಯಾಕೆ ಎಲ್ಲರಿಗೂ ಜಾಣ ಕುರುಡು? ಇವತ್ತು ಪ್ರತಿನಿತ್ಯದ ಹಿಂಸೆ ಉದ್ಭವಿಸುತ್ತಿರುವುದು ಆ ಯುವಕರು ಹಿಡಿದಿರುವ ಬಂದೂಕುಗಳಿಂದಲ್ಲ, ಬದಲಾಗಿ ಸಮಾಜದ ಪುರುಷ ಪ್ರಧಾನ ಆಲೋಚನೆ, ಊಳಿಗಮಾನ್ಯ ವ್ಯವಸ್ಥೆ, ಉಳ್ಳವರ ಪರವಾಗಿರುವ ರಾಜಕೀಯ, ಜಾಗತೀಕರಣದಿಂದಾಗುತ್ತಿರುವ ಅನ್ಯಾಯ…. ಇಂಥದೆಲ್ಲ ವಿಭಿನ್ನ ಬಗೆಯ ಹಿಂಸೆಯ ರೂಪಗಳಿಂದ. ಇದು ನಮ್ಮ ಭಾರತೀಯ ಸಮಾಜಕ್ಕೆ ಮಾತ್ರ ಅನ್ವಯಿಸುವುದಿಲ್ಲ, ಬದಲಾಗಿ ಮೇಲೆ ಹೇಳಿದ ಅಂಶಗಳು ಜಾಗತಿಕ ಮಟ್ಟದಲ್ಲೂ ಹಿಂಸೆಯನ್ನು ಹುಟ್ಟುಹಾಕುತ್ತಿದೆ.
ಇತ್ತೀಚೆಗೆ ಪ್ಯಾರಿಸ್ ನಗರದಲ್ಲಿ ಒಂದು ಪ್ರಯೋಗವನ್ನು ನಡೆಸಲಾಯಿತು. ಎಲ್ಲ ರೀತಿಯಲ್ಲೂ ಸಮಾನವಾದ ಅರ್ಹತೆಗಳನ್ನುಳ್ಳ ಎರಡು ಅರ್ಜಿಗಳನ್ನು-ಒಂದರಲ್ಲಿ ಕ್ರಿಶ್ಚಿಯನ್ ಹೆಸರನ್ನು ಹಾಗೂ ಪ್ರತಿಷ್ಠಿತ ಬಡಾವಣೆಯ ವಿಳಾಸವನ್ನು, ಮತ್ತೊಂದರಲ್ಲಿ ಮುಸ್ಲಿಂ ಹೆಸರನ್ನು ಹಾಗೂ ಬಡ-ಮಧ್ಯಮ ವರ್ಗದವರು ವಾಸಿಸುವ ಏರಿಯಾದ ವಿಳಾಸವನ್ನು ನಮೂದಿಸಿ-ಕೆಲಸಕ್ಕೆ ಅಹ್ವಾನಿಸಿದ್ದ ಕಚೇರಿಗಳಿಗೆ ಕಳುಹಿಸಲಾಗಿತ್ತು. ಸ್ವರ್ಗದಂತಹ ಪ್ಯಾರಿಸ್‍ನಲ್ಲೂ ನರಕಗಳಿರುತ್ತವೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕ್ರಿಶ್ಚಿಯನ್ ಹೆಸರಿನ, ಪ್ರತಿಷ್ಠಿತ ಬಡಾವಣೆಯ ಅರ್ಜಿಗೆ ಐದು ಅಹ್ವಾನಗಳು ಬಂದರೆ, ಮುಸ್ಲಿಂ ಹೆಸರಿನ ಬಡವರ್ಗಗಳ ಏರಿಯಾದ ಅರ್ಜಿಗೆ ಒಂದೇ ಒಂದು ಆಹ್ವಾನ ಬಂದಿತ್ತು.
ಇಂಥಾ ಅಸಮಾನತೆಯೂ ಒಂದು ಬಗೆಯ ಹಿಂಸೆ. ಈ ಹಿಂಸೆಯನ್ನು ಅದೆಷ್ಟು ದಿನ ತಾನೆ ಅಹಿಂಸೆಯ ನೆಪದಿಂದ ಸಹಿಸಿಕೊಳ್ಳಲು ಸಾಧ್ಯ. ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಾದಾಗ ಪ್ಯಾರಿಸ್‍ನ ಬಿಸಿರಕ್ತದ ಹುಡುಗರು ಗಲಭೆಗಿಳಿದಿದ್ದಾರೆ. ಆ ಗಲಭೆಗಳನ್ನು ವಿರೋಧಿಸುವುದು ಎಷ್ಟು ಜರೂರೋ, ಆ ಗಲಭೆಗೆ ಕಾರಣವಾದ ನಮ್ಮ ಸಮಾಜದ ಅಂತರ್ಗತ ಹಿಂಸೆಗಳನ್ನು ಹೋಗಲಾಡಿಸಬೇಕಾದ್ದೂ ನಮ್ಮೆಲ್ಲರ ಮೇಲಿರುವ ಹೊಣೆ. ಇಲ್ಲವಾದಲ್ಲಿ ಹಿಂಸೆಯನ್ನು ವಿರೋಧಿಸುವ ಹಕ್ಕನ್ನೇ ನಾವೆಲ್ಲ ಕಳೆದುಕೊಂಡುಬಿಡುತ್ತೇವೆ.
ಅದಕ್ಕೆ ಮೊದಲೇ ಹೇಳಿದ್ದು. ‘ಹಿಂಸೆ’ ಎಂದ ಕೂಡಲೇ “ಸಹಿಸಕೂಡದು” ಎಂದು ಅರಚುವ ಬದಲಾಗಿ ಆ ಹಿಂಸೆಯ ಮೂಲ ಎಲ್ಲಿದೆ ಎಂದು ವಿಶ್ಲೇಷಿಸುವ ಅಗತ್ಯ ಇವತ್ತಿನ ತುರ್ತು ಎಂದು. ಏಕೆಂದರೆ ಪ್ಯಾರಿಸ್‍ಗೆ ಬೆಂಕಿ ಹಚ್ಚಿರುವವರು ಹಿಂಸಾವಾದಿಗಳೂ ಅಲ್ಲ, ಭಯೋತ್ಪಾದಕರೂ ಅಲ್ಲ, ಬದಲಾಗಿ ಅದು ಅಲ್ಲಿನ ವ್ಯವಸ್ಥೆಯಲ್ಲೇ ಅಡಗಿರುವ ಹಿಂಸೆಗೆ ಬಲಿಯಾದವರ ಪ್ರತಿಕ್ರಿಯೆ ಅಷ್ಟೇ. ಇಂತಹ ಪ್ರತಿಕ್ರಿಯೆಯನ್ನು ನಿಷೇಧಾಜ್ಞೆಯಿಂದಾಗಲಿ, ಸ್ಪೆಷಲ್ ಸ್ಕ್ವಾಡ್‍ಗಳಿಂದಾಗಲಿ, ಗೋಲಿಬಾರ್‍ನಿಂದಾಗಲಿ ತಡೆಯಲಾಗುವುದಿಲ್ಲ.
ಇದೆಲ್ಲ ನಾವು ಕೈಕಟ್ಟಿ ಕೂತಿರುವಷ್ಟು ಕಾಲ ನಡೆಯುತ್ತಲೇ ಇರುತ್ತೆ. ಜನರಿಗೆ ಅನ್ಯಾಯದ ಬಗ್ಗೆ ಅರಿವು ಮೂಡಿದ ನಂತರವೂ ಅವರು ಕೈಕಟ್ಟಿ ಕೂತಿರಬೇಕು ಎಂದು ನಿರೀಕ್ಷಿಸಲಾಗುವುದಿಲ್ಲ. ಹಾಗೊಮ್ಮೆ ಅವರು ಪ್ಯಾರಿಸ್ ಯುವಕರಂತೆ ಕಾರ್ಯೋನ್ಮುಖರಾದರೆ ಅವರಿಗೆ ಆಗ ಅಹಿಂಸೆಯ ಪಾಠ ಬೋಧಿಸಲಾಗುವುದಿಲ್ಲ. ಆದ್ದರಿಂದಲೇ ಹಿಂಸೆಯ ವಿವಿಧ ವ್ಯಾಖ್ಯಾನಗಳಿಗಿಂತ ಅದರ ಬೇರು ಎಲ್ಲಿದೆ ಎಂದು ಹುಡುಕಬೇಕಿದೆ. ಈ ಪ್ರಶ್ನೆಯನ್ನು ಗಾಂಧೀಜಿಯವರೂ ನಿರಾಕರಿಸಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...