Homeಮುಖಪುಟಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನೂರಾರು ಮಹಿಳೆಯರು ಸೇರಿದಂತೆ 500ಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗವಹಿಸಿದ ಪ್ರತಿಭಟನೆಯಲ್ಲಿ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಬೆಳವಾಡಿ ಮಲ್ಲಣ್ಣಿನಿಗೆ ಜಯವಾಗಲಿ ಎಂಬ ಘೋಷಣೆಗಳು ಮುಗಿಲು ಮುಟ್ಟಿದ್ದವು.

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಮತ್ತು ಕನ್ನಡ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ, ಅದೇ ಸ್ಥಳದಲ್ಲಿ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿ ಎಂದು ಬೆಳಗಾವಿಯ ಪೀರನವಾಡಿ ಮತ್ತು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಭಾರೀ ಪ್ರತಿಭಟನೆ ನಡೆದಿದೆ.

ಬೆಳಗಾವಿಯ ಪೀರನವಾಡಿಯಲ್ಲಿ ಜಮಾಯಿಸಿದ ಕನ್ನಡ ಸಂಘಟನೆಯಗಳ ಕಾರ್ಯಕರ್ತರು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೀರನವಾಡಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ನಡೆಸಿ ಕೂಡಲೇ ಅದೇ ಸ್ಥಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ನಾವು ಒಂದು ತಿಂಗಳ ಮುಂಚೆಯೇ ಪ್ರತಿಮೆ ಸ್ಥಾಪನೆಗೆ ಅವಕಾಶ ಕೊಡುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಅವರು ಬೇಕಂತಲೇ ಅವಕಾಶ ನೀಡದೇ ಕನ್ನಡಿಗರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ನಾವು ರಾಯಣ್ಣರ ಜನ್ಮದಿನದಂದು ರಾತ್ರೋರಾತ್ರಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದೆವು. ಭಾರತದ ತ್ರಿವರ್ಣ ಧ್ವಜವನ್ನು ಸಹ ಹಾರಿಸಿದ್ದೆವು. ಆದರೆ ಪೊಲೀಸರು ಅದನ್ನು ತೆರವುಗೊಳಿಸುವ ಮೂಲಕ ಕನ್ನಡಿಗರಿಗೆ, ರಾಯಣ್ಣನವರಿಗೆ ಅವಮಾನ ಮಾಡಲಾಗಿದೆ ಎಂದು ಹಲವರು ಆರೋಪಿಸಿದ್ದಾರೆ.

ನೂರಾರು ಮಹಿಳೆಯರು ಸೇರಿದಂತೆ 500ಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗವಹಿಸಿದ ಪ್ರತಿಭಟನೆಯಲ್ಲಿ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಬೆಳವಾಡಿ ಮಲ್ಲಣ್ಣಿನಿಗೆ ಜಯವಾಗಲಿ ಎಂಬ ಘೋಷಣೆಗಳು ಮುಗಿಲು ಮುಟ್ಟಿದ್ದವು.

ಬೆಂಗಳೂರು ವರದಿ:

ಕನ್ನಡಪರ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಶಿವರೆಡ್ಡಿಯವರನ್ನು ಅಮಾನತು ಮಾಡಬೇಕು, ಬೆಳಗಾವಿಯ ಪೀರನವಾಡಿಯ ಅದೇ ಸ್ಥಳದಲ್ಲಿ ಕೂಡಲೇ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಣಧೀರರ ಪಡೆಯ ನೇತೃತ್ವದಲ್ಲಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ಮಾತನಾಡಿ, “ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ತೆರವುಗೊಳಿಸಿರುವುದನ್ನು ಎಲ್ಲಾ ಕನ್ನಡಿಗರಿ ಪರವಾಗಿ ಖಂಡಿಸುತ್ತೇವೆ. ರಾಯಣ್ಣ ದೇಶದ್ರೋಹಿ ಕೆಲಸ ಮಾಡಿಲ್ಲ. ಆದರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಪ್ರತಿಮೆಗೆ ಅವಮಾನ ಮಾಡಲಾಗಿದೆ. ನಾಲ್ಕು ವರ್ಷದಿಂದಲೂ ಅನುಮತಿಗಾಗಿ ಕನ್ನಡಿಗರು ಅಲೆಯುತ್ತಿದ್ದರೂ ಪೊಲೀಸರು ಅನುಮತಿ ಕೊಟ್ಟಿಲ್ಲ. ಹಾಗಾಗಿ ಸರ್ಕಾರಕ್ಕೆ ಒಂದು ವಾರದ ಗಡುವು ನೀಡುತ್ತೇವೆ. ಅಷ್ಟರಲ್ಲಿ ಪ್ರತಿಮೆ ನಿರ್ಮಾಣ ಮಾಡದಿದ್ದರೆ ಬೆಳಗಾವಿ ಚಲೋ ಕಾರ್ಯಕ್ರಮಕ್ಕೆ ಮುಂದಾಗುತ್ತೇವೆ” ಎಂದಿದ್ದಾರೆ.

ಪ್ರತಿಭಟನೆಯ ನಂತರ ಕಂದಾಯ ಸಚಿವರಾದ ಆರ್‌ ಅಶೋಕ್‌ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಜು ಗಣಪತಿಪುರ, ದೊಡ್ಡಯ್ಯ ಆನೇಕಲ್, ಮನೋಹರ್ ಎಸ್‌.ಎಂ, ರಾಜಶೇಖರ್ ಮುಂತಾದವರು ಇದ್ದರು.


ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...