Homeಮುಖಪುಟಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

ಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ. ಶಾ ‘ಭಾರತವು ಒಂದು ರೀತಿಯ ಚುನಾಯಿತ ಸರ್ವಾಧಿಕಾರದ ಕಡೆ ಸಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜನರಿಗೆ ಸೂಕ್ತ ನಾಯಕತ್ವ ಒದಗಿಸಲು ಸಂಸತ್ತು ವಿಫಲವಾಗಿರುವ ಕೊರೊನಾ ಕಾಲದ ಈ ಸಂದರ್ಭವನ್ನು ಉಪಯೋಗಿಸಿ ಸರಕಾರಕ್ಕೆ ತನಗೆ ಬೇಕಿದ್ದಂತೆ ಮಾಡಲು ಸ್ವಾತಂತ್ರ್ಯ ನೀಡಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರವನ್ನು ಹದ್ದುಬಸ್ತಿನಲ್ಲಿಡುವ ಅಧಿಕಾರ ಹೊಂದಿದ ನ್ಯಾಯಾಂಗ ಸಂಸ್ಥೆಯನ್ನು ಭಾರತದಲ್ಲಿ ವ್ಯವಸ್ಥಿತವಾಗಿ ನಾಶಗೊಳಿಸಲಾಗುತ್ತಿದೆ ಎಂದಿರುವ ಮಾಜಿ ನ್ಯಾಯಮೂರ್ತಿ, 2014 ರಿಂದ ಈ ಎಲ್ಲಾ ಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಇಂದಿರಾ ಗಾಂಧಿ ಮಾಡಿದಂತೆ ಇದು ಬಹಿರಂಗವಾಗಿ ಇಲ್ಲದಿದ್ದರು ಭಾರತದ ಪ್ರಜಾಪ್ರಭುತ್ವ ಕೋಮಾ ಸ್ಥಿತಿಯಲ್ಲಿರುವಂತೆ ಮಾಡಲಾಗುತ್ತಿದೆ ಜೊತೆಗೆ ಕಾರ್ಯಾಂಗಕ್ಕೆ ಹೆಚ್ಚಿನ ವಿಚಾರಗಳಲ್ಲಿ ಮೇಲುಗೈ ಒದಗಿಸಲಾಗಿದೆ, ಚುನಾಯಿತ ಸರ್ವಾಧಿಕಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ ತಿಂಗಳಿನಿಂದ ದೇಶದ ಸಂಸತ್ತು “ಭೂತಗಳ ಪಟ್ಟಣ”ವಾಗಿದೆ ಎಂದಿರುವ ಅವರು, ಇಂತಹ ಒಂದು ಸಾಂಕ್ರಾಮಿಕ ರೋಗ ಸೃಷ್ಟಿಸಿದ ಸಮಸ್ಯೆಯ ಸಂದರ್ಭ ಜನರಿಗೆ ನಾಯಕತ್ವ ಒದಗಿಸಲು ವಿಫಲವಾಗಿರುವುದರ ಜತೆಗೆ ಉತ್ತರದಾಯಿತ್ವ ಹಾಗೂ ಪ್ರತಿನಿಧಿತ್ವವನ್ನು ದೂರವಾಗಿಸಿ ಕಾರ್ಯಾಂಗಕ್ಕೆ ತನಗೆ ಬೇಕಿದ್ದಂತೆ ಮಾಡುವ ಸ್ವಾತಂತ್ರ್ಯ ನೀಡಿದೆ’ ಎಂದಿದ್ದಾರೆ.

“ಇಂತಹ ಸಂದರ್ಭಗಳಲ್ಲಿ ಕಾರ್ಯಾಂಗದ ಉತ್ತರದಾಯಿತ್ವ ನೆನಪು ಮಾತ್ರ, ಅದರ ಕಾರ್ಯಗಳ ಕುರಿತು ಪ್ರಶ್ನೆಗಳನ್ನು ಎತ್ತಲು ಯಾರೂ ಇಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಭಾರತದ ಸಂಸತ್ತಿನ ಬಜೆಟ್ ಅಧಿವೇಶನ ಮುಂದೂಡಲಾಗಿದೆ. ಆದರೆ ಇತರ ದೇಶಗಳು ಕೊರೊನಾ ವೈರಸ್ ಭೀತಿಯ ನಡುವೆಯೇ ವರ್ಚುವಲ್ ಆಗಿ ಕಾರ್ಯಾಚರಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜನರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ ಎಂದು ನ್ಯಾಯಾಂಗವನ್ನು ಟೀಕಿಸಿದ ಎ.ಪಿ. ಶಾ, “ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಕುರಿತಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಕಾರ್ಯ ನಿರ್ವಹಿಸದೆ, ಕಾರ್ಯಾಂಗ ನೇತೃತ್ವದ ಸಮಿತಿಗೆ ಈ ವಿಚಾರ ತೀರ್ಮಾನಿಸಲು ಬಿಟ್ಟಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.


ಓದಿ: ಯಾರು ಕನ್ನಡಿಗರು, ಯಾರು ಕನ್ನಡಿಗರಲ್ಲ ಎಂಬುದನ್ನು ನಿರ್ಧರಿಸುವವರು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...