Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...