Homeಮುಖಪುಟವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

- Advertisement -
- Advertisement -

ಗೂಗಲ್‌ನಲ್ಲಿ ಯಾವುದೇ ವಿಷಯ, ವ್ಯಕ್ತಿ, ಸ್ಥಳದ ಬಗ್ಗೆ ಹೆಚ್ಚಿನ ಮಾಹಿತಿ ಬಯಸುವವರು ಆಧರಿಸಿರುವುದು ವಿಕಿಪೀಡಿಯಾವನ್ನು. ಅದು ಜಾಗತಿಕವಾಗಿ ಇಂಟರ್ನೆಟ್ ಬಳಕೆದಾರರ ಕುರಿತಂತೆ ದತ್ತಾಂಶ ವಿಶ್ಲೇಷಣೆ ನಡೆಸಿ ಕುತೂಹಲಕಾರಿ ವಿಷಯಗಳನ್ನು ಹೊರಗೆಡವಿದೆ. ಅದು ಜಾಗತಿಕವಾಗಿ ಹೆಚ್ಚು ಹುಡುಕಾಟ ನಡೆಸಿದ ವಿಷಯ, ಭಾಷೆ, ಜನಸಂಖ್ಯೆ, ದೇಶಗಳ ಕುರಿತ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಕನ್ನಡ ಭಾಷೆಯ ಹುಡುಕಾಟದಲ್ಲಿ ಡಾ. ಅಂಬೇಡ್ಕರ್ ಕುರಿತಂತೆ ಹೆಚ್ಚಿನ ಹುಡುಕಾಟಗಳು ನಡೆದಿವೆ ಎಂದು ಅದರ ದತ್ತಾಂಶ ತೋರಿಸುತ್ತದೆ.

ಅಸ್ಸಾಮೀಗುರು ಕೋವಿಡ್‌19 ಅಂತಲೂ, ಬಂಗಾಳಿ ಭಾಷಿಗರು ಬಾಂಗ್ಲಾದೇಶದ ಬಗ್ಗೆಯೂ, ಹಿಂದಿ ಭಾಷಿಕರು ಕೊರೊನಾ ವೈರಸ್ ಬಗ್ಗೆ, ತಮಿಳರು ಕೆ.ಕಾಮರಾಜ್‌ ಬಗ್ಗೆಯೂ ಹುಡುಕಿದರೆ ಕನ್ನಡಿಗರು ಡಾ.ಬಿ.ಆರ್ ಅಂಬೇಡ್ಕರ್‌ರವರ ಹುಡುಕುವ ಮೂಲಕ ಗಮನ ಸೆಳೆದಿದ್ದಾರೆ.

ಮರಾಠಿಗರು ಶಿವಾಜಿ ಬಗ್ಗೆಯೂ, ಪಂಜಾಬಿಗರು ಗುರು ಗ್ರಂಥ ಸಾಹೇಬ್ ಬಗ್ಗೆ, ಮಲೆಯಾಳಿಗರು ವೈಕ್ಕಂ ಮಹಮ್ಮದ್ ಬಶೀರ್ ಬಗ್ಗೆ ಮತ್ತು ಒರಿಯನ್ನರು ಫಕೀರ್ ಮೋಹನ್ ಸೆನಪತಿ ಬಗ್ಗೆ ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ತೆಲುಗು ಭಾಷಿಕರು ಕೋಳಿ ಪಂದ್ಯ ನಡೆಸಲು ಹೇಗೆ ಕೋಳಿಗಳನ್ನ ಸಾಕಬೇಕು ಎಂಬುದರ ಬಗ್ಗೆ ಹೆಚ್ಚು ಹುಡುಕಿದ್ದಾರೆ.

ಕನ್ನಡ ಝೀ ಕನ್ನಡ ಚಾನೆಲ್‌ನಲ್ಲಿ ಡಾ.ಅಂಬೇಡ್ಕರರ ಜೀವನ ಚರಿತ್ರೆ ಕುರಿತ ‘ಮಹಾನಾಯಕ’ ಎಂಬ ಧಾರಾವಾಹಿ ಬಿಡುಗಡೆಯಾಗಿದ್ದು ಬಹಳಷ್ಟು ಜನರ ಮೆಚ್ಚುಗೆ ಗಳಿಸಿದೆ. ಧಾರವಾಹಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದ್ದು ಹಲವಾರು ಜನ ಧಾರವಾಹಿಗಾಗಿ ಕಾದು ಕುಳಿತಿದ್ದಾರೆ. ಹಲವು ಗ್ರಾಮಗಳಲ್ಲಿ ಮಹಾನಾಯಕ ಧಾರವಾಹಿಯಲ್ಲಿ ಬಾಲನಟನಾಗಿ ಅಂಬೇಡ್ಕರ್ ಪಾತ್ರ ವಹಿಸಿರುವ ಆಯುದ್ ಬಾನುಶಾಲಿ ಎಂಬ ಬಾಲಕನ ಪೋಸ್ಟರ್ ಕಟೌಟ್‌ ಹಾಕಿ ಸಂಭ್ರಮಿಸಿದ್ದಾರೆ. ಸದ್ಯಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್‌ಪಿ ಪಡೆಯುತ್ತಿರುವ ಧಾರವಾಹಿ ಇದಾಗಿದ್ದು, ಈ ಹಿನ್ನೆಲೆಯಲ್ಲಿಯೂ ಹಲವು ಕನ್ನಡಿಗರು ಅಂಬೇಡ್ಕರ್ ಕುರಿತು ವಿಕಿಪೀಡಿಯಾದಲ್ಲಿ ಹುಡುಕಿರುವ ಸಾಧ್ಯತೆಯಿದೆ.

ಅಂಬೇಡ್ಕರ್ ಕುರಿತು 1,39,836 ಕನ್ನಡಿಗರು ಹುಡುಕಿದ್ದಾರೆ ಎಂದು ವಿಕಿಪೀಡಿಯಾ ತಿಳಿಸಿದೆ.

ಭಾರತೀಯ ಅಂತರ್ಜಾಲ ಬಳಕೆದಾರರಿಗೆ ಸಂಬಂಧಿಸಿದಂತೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಲೈವ್‌ ಮಿಂಟ್‌ ಪತ್ರಿಕೆ ಪ್ರಕಟಿಸಿದೆ. ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿರುವ ಮತ್ತು ತಮ್ಮದೇ ಆದ ವಿಕಿಪೀಡಿಯಾ ಆವೃತ್ತಿಯನ್ನು ಹೊಂದಿರುವ ಎಲ್ಲಾ 14 ಭಾಷೆಗಳನ್ನು ಈ ವಿಶ್ಲೇಷಣೆಯಲ್ಲಿ ಪರಿಗಣಿಸಲಾಗಿದೆ.

ಭಾರತೀಯ ಭಾಷೆಗಳು ವೈವಿಧ್ಯಮಯ ಉನ್ನತ ವಿಕಿಪೀಡಿಯ ಲೇಖನಗಳನ್ನು ಹೊಂದಿದ್ದವು. ಅವುಗಳಲ್ಲಿ ಭಾಷಾವಾರು ಹುಡುಕಾಟ ನಡೆಸಿರುವ ವಿಷಯಗಳ ಕುರಿತ ದತ್ತಾಂಶ ಇಲ್ಲಿದೆ.

ಈ ವರ್ಷ, ಇಲ್ಲಿಯವರೆಗೆ, ಭಾರತೀಯ ಅಂತರ್ಜಾಲ ಬಳಕೆದಾರರು ವಿಕಿಪೀಡಿಯಾದ ಪುಟಗಳನ್ನು ತಮ್ಮ ಸ್ಥಳೀಯ ಭಾಷೆಗಳಲ್ಲಿ ಸುಮಾರು 500 ದಶಲಕ್ಷಕ್ಕೂ ಹೆಚ್ಚು ಬಾರಿ ಬ್ರೌಸ್ ಮಾಡಿದ್ದಾರೆ.

14 ಪ್ರಮುಖ ಭಾರತೀಯ ಭಾಷೆಗಳಲ್ಲಿ 11 ಭಾಷೆಗಳಲ್ಲಿ ವಿಕಿಪೀಡಿಯ ಓದುಗರ ಸಂಖ್ಯೆ ಈ ವರ್ಷ ಗಮನಾರ್ಹವಾಗಿ ಹೆಚ್ಚಾಗಿದೆ ಎನ್ನಲಾಗಿದೆ.

ಇದರಲ್ಲಿ ಹುಡುಕಾಟದ ವಿಷಯಗಳ ವ್ಯಾಪ್ತಿಯು ಭಾಷೆಗನುಗುಣವಾಗಿ ವ್ಯಾಪಕವಾಗಿ ಬದಲಾಗಿರುವುದು ಕಂಡುಬಂದಿದೆ. ಮರಾಠಿ ಓದುಗರು ಮಹಾರಾಷ್ಟ್ರದ ಐತಿಹಾಸಿಕ ಐಕಾನ್ ಗಳ ಬಗ್ಗೆ ಸಾಕಷ್ಟು ಓದಿದ್ದರೆ, ಪಂಜಾಬಿ ಮತ್ತು ಉರ್ದು ಓದುಗರು ಧರ್ಮದ ಬಗ್ಗೆ ಹೆಚ್ಚು ಓದಿದ್ದಾರೆ.

ತಮಿಳು, ಅಸ್ಸಾಮಿ, ಒಡಿಯಾ, ಮತ್ತು ಕನ್ನಡ ಓದುಗರು ತಮ್ಮದೇ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಹೆಚ್ಚು ಓದುತ್ತಾರೆ. ಭೋಜ್‌ಪುರಿ ಓದುಗರು ಲೈಂಗಿಕತೆಯ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎಂದು ಈ ಸಮೀಕ್ಷೆಯಿಂದ ತಿಳಿದುಬಂದಿದೆ.

ಭಾರತೀಯ ಭಾಷೆಗಳಲ್ಲಿಯೇ ಅತಿಹೆಚ್ಚು ಹುಡುಕಾಟವನ್ನು ಹಿಂದಿಯಲ್ಲಿ ನಡೆಸಲಾಗಿದೆ. ಸುಮಾರು 8,53,987 ಹುಡುಕಾಟಗಳು ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ದಾಖಲಾಗಿವೆ. ಅತಿ ಕಡಿಮೆ ಹುಡುಕಾಟಗಳನ್ನು ಒಡಿಯಾ ಭಾಷೆಯಲ್ಲಿ ಸುಮಾರು 10,087 ಹುಡುಕಾಟಗಳು ಫಕೀರ್ ಮೋಹನ್ ಸೇನಪತಿ ಎಂಬುವವರ ಕುರಿತು ದಾಖಲಾಗಿವೆ.

ಉಳಿದ ಬೇರೆ ಬೇರೆ ರಾಜ್ಯಗಳಲ್ಲಿ  ಧರ್ಮ, ಸಾಹಿತ್ಯ, ಪ್ರಮುಖ ವ್ಯಕ್ತಿಗಳು ಮುಂತಾದ ವಿಷಯಗಳ ಬಗ್ಗೆ ಹುಡುಕಾಟ ನಡೆದಿದೆ.


ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...