Homeಕರೋನಾ ತಲ್ಲಣಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ 'ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ' ಎಂದಿದೆ.

- Advertisement -
- Advertisement -

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಸಂದರ್ಭದಲ್ಲಿ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ. ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ದೇಣಿಗೆ ಸಂಗ್ರಹಕ್ಕಾಗಿ ಸ್ಥಾಪಿಸಲ್ಪಟ್ಟ ಪಿಎಂ ಕೇರ್ಸ್‌ ಕುರಿತು ಮಾಹಿತಿ ಕೇಳಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಸಾವಿರಾರು ಕೋಟಿ ರೂ ಹಣ ಸಂಗ್ರಹವಾಗಿದ್ದರೂ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಮಾಹಿತಿ ಹಕ್ಕು ಕಾಯ್ದೆ, 2005 ರ ಸೆಕ್ಷನ್ 2 (ಎಚ್) ಅಡಿಯಲ್ಲಿ ಈ ನಿಧಿ ಸಾರ್ವಜನಿಕ ಪ್ರಾಧಿಕಾರವಲ್ಲ ಎಂದು ಮೇ ತಿಂಗಳಿನಲ್ಲಿಯೇ ಪಿಎಂಒ ಹೇಳಿದೆ. ಆದ್ದರಿಂದ ಅರ್ಜಿಯಲ್ಲಿ ಕೋರಿದ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದೆ.

ಈ ಬಾರಿ, ಪ್ರಸಿದ್ಧ ಆರ್‌ಟಿಐ ಕಾರ್ಯಕರ್ತ ಲೋಕೇಶ್ ಬಾತ್ರಾ ಪಿಎಂ ಕೇರ್ಸ್ ಫಂಡ್ ಮತ್ತು ಪಿಎಂ ನ್ಯಾಷನಲ್ ರಿಲೀಫ್ ಫಂಡ್‌ಗೆ ಸಂಬಂಧಿಸಿದಂತೆ ಸಲ್ಲಿಸಲಾದ ಆರ್‌ಟಿಐ ಅರ್ಜಿಗಳ ಕುರಿತ ಮಾಹಿತಿ  ನೀಡುವಂತೆ ಪ್ರಧಾನಮಂತ್ರಿ ಕಛೇರಿಗೆ ಮನವಿ ಸಲ್ಲಿಸಿದ್ದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ರ ಅನ್ವಯ, ಈ ವಿಭಾಗವು “ಮಾಹಿತಿ ನೀಡುವಿಕೆಯ ನಿರಾಕರಣೆ ಮಾಡುವುದಿಲ್ಲ. ಆದರೆ ಅವರು ಬಯಸಿದ ರೂಪದಲ್ಲಿ ಒದಗಿಸುವುದನ್ನು ನಿರಾಕರಿಸುತ್ತದೆ” ಎಂದು ನ್ಯಾಯಾಲಯಗಳು ಮತ್ತು ಆಯೋಗವು ಪದೇ ಪದೇ ಹೇಳುತ್ತಿದೆ ಎಂದು ಪಿಎಂಒ ಹೇಳಿದೆ.

2020ರ ಏಪ್ರಿಲ್ ನಿಂದ ಇಲ್ಲಿಯವರೆಗೆ ಪಿಎಂಒ ಸ್ವೀಕರಿಸಿದ ಒಟ್ಟು ಆರ್‌ಟಿಐ ಅರ್ಜಿಗಳು ಮತ್ತು ವಿಲೇವಾರಿ ಮಾಡಿದ ಆರ್‌ಟಿಐ ಅರ್ಜಿಗಳ ವಿವರಗಳನ್ನು ಕೋರಿ ಬಾತ್ರಾ ಮೇ 26 ರಂದು,ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಬಾತ್ರಾ ಜುಲೈ 16 ರಂದು ಉಪ ಕಾರ್ಯದರ್ಶಿ ಮತ್ತು ಮೇಲ್ಮನವಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ. 52 ದಿನಗಳು ಕಳೆದರೂ, ಅವರ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ ಎನ್ನಲಾಗಿದೆ. ಅಂತಿಮವಾಗಿ, ಆಗಸ್ಟ್ 14 ರಂದು, ಬಾತ್ರಾ ಅವರ ಪ್ರಶ್ನೆಗೆ ಪಿಎಂಒ ಪ್ರತಿಕ್ರಿಯಿಸಿದೆ. ಆರ್‌ಟಿಐ ಅರ್ಜಿಗಳು ಮತ್ತು ಪಿಎಂಒನಲ್ಲಿ ಸಾಮಾನ್ಯವಾಗಿ ಸ್ವೀಕರಿಸಿದ ಮೇಲ್ಮನವಿಗಳು ಮತ್ತು ವಿಲೇವಾರಿ ಮಾಡಿದ ತಿಂಗಳ ವಿವರಗಳನ್ನು ನೀಡುವ ಮೂಲಕ ಇದು ಅವರ ಅರ್ಜಿಗೆ ಭಾಗಶಃ ಉತ್ತರವನ್ನು ಮಾತ್ರ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ ‘ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ’ ಎಂದಿದೆ.

ಆದಾಗ್ಯೂ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮಾಹಿತಿ ನಿರಾಕರಿಸುವಂತಿಲ್ಲ ಎಂದು ಹೇಳುವ ಕೇಂದ್ರ ಮಾಹಿತಿ ಆಯೋಗ ಮತ್ತು ಹೈಕೋರ್ಟ್‌ಗಳ ಹಲವಾರು ಆದೇಶಗಳಿವೆ ಎಂದು ಬಾತ್ರಾ ವಾದಿಸಿದರು.

ಈ ಪ್ರಕರಣಗಳಲ್ಲಿ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9), ಪಿಎಂಒ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ, ಮಾಹಿತಿಯನ್ನು ನಿರಾಕರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿ, ಇಂತಹ ವಿಷಯದಲ್ಲಿ ನ್ಯಾಯಾಂಗವು ಅತ್ಯಂತ ಸ್ಪಷ್ಟವಾದ ತೀರ್ಪುಗಳನ್ನು ನೀಡಿದೆ.

ವಾಸ್ತವವಾಗಿ ಮಾಹಿತಿಯ ಪೂರೈಕೆಯು ಸಾರ್ವಜನಿಕ ಪ್ರಾಧಿಕಾರದ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ ಕಾರಣವಾಗುತ್ತದೆ ಎಂಬ ಕಾರಣದಿಂದ ಮಾಹಿತಿಯನ್ನು ನಿರಾಕರಿಸಲು ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...