Homeಕರೋನಾ ತಲ್ಲಣಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ ಕೇರ್ಸ್ ಮಾಹಿತಿ ನೀಡುವುದರಿಂದ ಸಂಪನ್ಮೂಲಗಳು ದಿಕ್ಕುತಪ್ಪುತ್ತದೆ: ಪಿಎಂಒ

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ 'ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ' ಎಂದಿದೆ.

- Advertisement -
- Advertisement -

ಪಿಎಂ ಕೇರ್ಸ್ ನಿಧಿಯ ಬಳಕೆ ಬಗ್ಗೆ ಮಾಹಿತಿ ಕೇಳಿ ಹಲವಾರು ಅರ್ಜಿಗಳು ದಾಖಲಾಗಿರುವ ಸಂದರ್ಭದಲ್ಲಿ,  ಅಂತಹ ಮಾಹಿತಿ ಒದಗಿಸುವುದು “ಕಚೇರಿಯ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ” ಕಾರಣವಾಗುತ್ತದೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಹೇಳಿದೆ. ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮತ್ತು ಹೈಕೋರ್ಟ್‌, ಕೇಂದ್ರ ಮಾಹಿತಿ ಆಯೋಗದ ತೀರ್ಪುಗಳ ಹೊರತಾಗಿಯೂ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ದೇಣಿಗೆ ಸಂಗ್ರಹಕ್ಕಾಗಿ ಸ್ಥಾಪಿಸಲ್ಪಟ್ಟ ಪಿಎಂ ಕೇರ್ಸ್‌ ಕುರಿತು ಮಾಹಿತಿ ಕೇಳಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಸಾವಿರಾರು ಕೋಟಿ ರೂ ಹಣ ಸಂಗ್ರಹವಾಗಿದ್ದರೂ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಮಾಹಿತಿ ಹಕ್ಕು ಕಾಯ್ದೆ, 2005 ರ ಸೆಕ್ಷನ್ 2 (ಎಚ್) ಅಡಿಯಲ್ಲಿ ಈ ನಿಧಿ ಸಾರ್ವಜನಿಕ ಪ್ರಾಧಿಕಾರವಲ್ಲ ಎಂದು ಮೇ ತಿಂಗಳಿನಲ್ಲಿಯೇ ಪಿಎಂಒ ಹೇಳಿದೆ. ಆದ್ದರಿಂದ ಅರ್ಜಿಯಲ್ಲಿ ಕೋರಿದ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದೆ.

ಈ ಬಾರಿ, ಪ್ರಸಿದ್ಧ ಆರ್‌ಟಿಐ ಕಾರ್ಯಕರ್ತ ಲೋಕೇಶ್ ಬಾತ್ರಾ ಪಿಎಂ ಕೇರ್ಸ್ ಫಂಡ್ ಮತ್ತು ಪಿಎಂ ನ್ಯಾಷನಲ್ ರಿಲೀಫ್ ಫಂಡ್‌ಗೆ ಸಂಬಂಧಿಸಿದಂತೆ ಸಲ್ಲಿಸಲಾದ ಆರ್‌ಟಿಐ ಅರ್ಜಿಗಳ ಕುರಿತ ಮಾಹಿತಿ  ನೀಡುವಂತೆ ಪ್ರಧಾನಮಂತ್ರಿ ಕಛೇರಿಗೆ ಮನವಿ ಸಲ್ಲಿಸಿದ್ದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ರ ಅನ್ವಯ, ಈ ವಿಭಾಗವು “ಮಾಹಿತಿ ನೀಡುವಿಕೆಯ ನಿರಾಕರಣೆ ಮಾಡುವುದಿಲ್ಲ. ಆದರೆ ಅವರು ಬಯಸಿದ ರೂಪದಲ್ಲಿ ಒದಗಿಸುವುದನ್ನು ನಿರಾಕರಿಸುತ್ತದೆ” ಎಂದು ನ್ಯಾಯಾಲಯಗಳು ಮತ್ತು ಆಯೋಗವು ಪದೇ ಪದೇ ಹೇಳುತ್ತಿದೆ ಎಂದು ಪಿಎಂಒ ಹೇಳಿದೆ.

2020ರ ಏಪ್ರಿಲ್ ನಿಂದ ಇಲ್ಲಿಯವರೆಗೆ ಪಿಎಂಒ ಸ್ವೀಕರಿಸಿದ ಒಟ್ಟು ಆರ್‌ಟಿಐ ಅರ್ಜಿಗಳು ಮತ್ತು ವಿಲೇವಾರಿ ಮಾಡಿದ ಆರ್‌ಟಿಐ ಅರ್ಜಿಗಳ ವಿವರಗಳನ್ನು ಕೋರಿ ಬಾತ್ರಾ ಮೇ 26 ರಂದು,ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಬಾತ್ರಾ ಜುಲೈ 16 ರಂದು ಉಪ ಕಾರ್ಯದರ್ಶಿ ಮತ್ತು ಮೇಲ್ಮನವಿ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ. 52 ದಿನಗಳು ಕಳೆದರೂ, ಅವರ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ ಎನ್ನಲಾಗಿದೆ. ಅಂತಿಮವಾಗಿ, ಆಗಸ್ಟ್ 14 ರಂದು, ಬಾತ್ರಾ ಅವರ ಪ್ರಶ್ನೆಗೆ ಪಿಎಂಒ ಪ್ರತಿಕ್ರಿಯಿಸಿದೆ. ಆರ್‌ಟಿಐ ಅರ್ಜಿಗಳು ಮತ್ತು ಪಿಎಂಒನಲ್ಲಿ ಸಾಮಾನ್ಯವಾಗಿ ಸ್ವೀಕರಿಸಿದ ಮೇಲ್ಮನವಿಗಳು ಮತ್ತು ವಿಲೇವಾರಿ ಮಾಡಿದ ತಿಂಗಳ ವಿವರಗಳನ್ನು ನೀಡುವ ಮೂಲಕ ಇದು ಅವರ ಅರ್ಜಿಗೆ ಭಾಗಶಃ ಉತ್ತರವನ್ನು ಮಾತ್ರ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಎಂ-ಕೇರ್ಸ್ ಫಂಡ್ ಮತ್ತು ಪಿಎಂಎನ್‌ಆರ್‌ಎಫ್‌ಗೆ ಸಂಬಂಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ, ಪಿಎಂಒ ‘ಕಾಯಿದೆಯ ಸೆಕ್ಷನ್ 7 (9) ರ ಅಡಿಯಲ್ಲಿ ನಿರ್ಬಂಧಗಳಿರುವುದರಿಂದ ನೀವು ಕೇಳಿದ ಮಾಹಿತಿಯನ್ನು ನೀಡಲಾಗುವುದಿಲ್ಲ’ ಎಂದಿದೆ.

ಆದಾಗ್ಯೂ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9) ಮಾಹಿತಿ ನಿರಾಕರಿಸುವಂತಿಲ್ಲ ಎಂದು ಹೇಳುವ ಕೇಂದ್ರ ಮಾಹಿತಿ ಆಯೋಗ ಮತ್ತು ಹೈಕೋರ್ಟ್‌ಗಳ ಹಲವಾರು ಆದೇಶಗಳಿವೆ ಎಂದು ಬಾತ್ರಾ ವಾದಿಸಿದರು.

ಈ ಪ್ರಕರಣಗಳಲ್ಲಿ, ಆರ್‌ಟಿಐ ಕಾಯ್ದೆಯ ಸೆಕ್ಷನ್ 7 (9), ಪಿಎಂಒ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ, ಮಾಹಿತಿಯನ್ನು ನಿರಾಕರಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿ, ಇಂತಹ ವಿಷಯದಲ್ಲಿ ನ್ಯಾಯಾಂಗವು ಅತ್ಯಂತ ಸ್ಪಷ್ಟವಾದ ತೀರ್ಪುಗಳನ್ನು ನೀಡಿದೆ.

ವಾಸ್ತವವಾಗಿ ಮಾಹಿತಿಯ ಪೂರೈಕೆಯು ಸಾರ್ವಜನಿಕ ಪ್ರಾಧಿಕಾರದ ಸಂಪನ್ಮೂಲಗಳ ಅಸಮರ್ಪಕ ತಿರುವಿಗೆ ಕಾರಣವಾಗುತ್ತದೆ ಎಂಬ ಕಾರಣದಿಂದ ಮಾಹಿತಿಯನ್ನು ನಿರಾಕರಿಸಲು ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಕೃಪೆ: ದಿ ವೈರ್


ಇದನ್ನೂ ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...