Homeಕರೋನಾ ತಲ್ಲಣಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

ಒಂದೊಂದು ಪ್ರದೇಶದಲ್ಲಿ 15 ಸಾವಿರದಿಂದ ಹಿಡಿದು ಲಕ್ಷದವರೆಗೆ ಸೀಲ್‌ಡೌನ್‌ಗಾಗಿ ಖರ್ಚು ಮಾಡಿರುವುದು ಬಹಿರಂಗವಾಗಿದೆ.

- Advertisement -
- Advertisement -

ಕೊರೊನಾ ಪಾಸಿಟಿವ್ ರೋಗಿಗಳಿರುವ ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸುಮಾರು 20-25 ಕೋಟಿ ರೂ. ಖರ್ಚು ಮಾಡಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.

ಸೀಲ್ ಮಾಡಲು ಮಾಡಿದ ಖರ್ಚಿನ ಬಗ್ಗೆ ವಿವರವಾದ ವರದಿಯನ್ನು ಬಿಬಿಎಂಪಿ ತನ್ನ ಅಧಿಕಾರಿಗಳಿಂದ ಆಯುಕ್ತರು ಕೋರಿದ್ದಾರೆ. ಅನೇಕ ಕಂಟೈನ್ಮೆಂಟ್‌ಗಳಲ್ಲಿ ಸೀಲ್ ಮಾಡಲು 15,000 ರೂಗಳಿಂದ ಹಿಡಿದು ಹಲವಾರು ಲಕ್ಷದವರೆಗೆ ಖರ್ಚು ಮಾಡಿರುವುದನ್ನು ಅವರು ಬಹಿರಂಗಪಡಿಸಿದ್ದಾರೆ.

ಕಂಟೈನ್ಮೆಂಟ್ ಪ್ರದೇಶಗಳ ನಿರ್ವಹಣೆ ಮತ್ತು ಮನೆಗಳ ಸೀಲ್‌ಡೌನ್‌ಗೆ ಭಾರಿ ವೆಚ್ಚ ಮಾಡುತ್ತಿರುವುದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಷಯ ತನ್ನ ಗಮನಕ್ಕೆ ಬಂದಿದ್ದು, ಎಂಜಿನಿಯರ್‌ಗಳಿಂದ ವಿವರವಾದ ವರದಿಯನ್ನು ಕೋರಿದ್ದೇನೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಸೋಮವಾರ ವಿವಿಧ ವಲಯಗಳ ಎಂಜಿನಿಯರ್‌ಗಳೊಂದಿಗೆ ನಡೆದ ಸಭೆಯ ನಂತರ “ಆರ್.ಆರ್. ನಗರವೊಂದರಲ್ಲೆ, ಜೂನ್ ಮತ್ತು ಆಗಸ್ಟ್ ನಡುವೆ, ಕಟ್ಟಡಗಳು ಮತ್ತು ಲೇನ್‌ಗಳ ಸೀಲ್ ಡೌನ್‌ ಹಾಕಲು ಅಧಿಕಾರಿಗಳು 1.5 ಕೋಟಿ ರೂ.ಗಳಿಂದ ಹಿಡಿದು 2 ಕೋಟಿ ರೂ. ಖರ್ಚು ಮಾಡಿದ್ದಾರೆ. ಕೆಲವು ವಲಯಗಳ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ನಿಗದಿತ ದರಗಳ (ಎಸ್‌ಆರ್‌ ದರಗಳು) ಅನುಸಾರವಾಗಿ ಮನೆಗಳನ್ನು ಸೀಲ್ ಮಾಡಲು ಶೀಟ್‌ಗಳು ಮತ್ತು ಇತರ ವಸ್ತುಗಳನ್ನು ಖರೀದಿಸಿದರು. ಅವರು ಈ ವಸ್ತುಗಳನ್ನು ಪ್ರಕರಣಗಳು ವರದಿ ಮಾಡಿದ ಕಡೆ ಅದನ್ನು ಕೊ೦ಡೊಯ್ಯುತ್ತಾರೆ. ಆದರೆ ಒಂದು ವಲಯದಲ್ಲಿ ಅಧಿಕಾರಿಗಳು 2 ಕೋಟಿ ರೂ.ಯಷ್ಟು ಖರ್ಚು ಮಾಡಿದ್ದಾರೆ, ಎಲ್ಲಾ ವಲಯಗಳಲ್ಲಿ ನಾವು ಸುಮಾರು 20 ರಿಂದ 25 ಕೋಟಿ ರೂ. ಖರ್ಚು ಮಾಡಿರಬಹುದು. ನಾನು ಅವರೆಲ್ಲರನ್ನೂ ವಿವರವಾದ ವರದಿಗಾಗಿ ಕೇಳಿದ್ದೇನೆ” ಎಂದು ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಬಿಬಿಎಂಪಿಯಿಂದ ಯಾವುದೇ ಅಂದಾಜು ಅಥವಾ ಪೂರ್ವ ಅನುಮೋದನೆಯಿಲ್ಲದ ಸೀಲ್‌ಡೌನ್‌ಗಳಿಗೆ ಸಂಬಂಧಿಸಿದ ಯಾವುದೇ ಮಸೂದೆಗಳನ್ನು ಅನುಮೋದಿಸದಂತೆ ಮಂಜುನಾಥ್ ಪ್ರಸಾದ್ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

“ಅಂದಾಜುಗಳ ಆಧಾರದ ಮೇಲೆ ಸರಿಯಾದ ಕಾರ್ಯತತ್ಪರತೆ ಮತ್ತು ಪೂರ್ವ ಅನುಮೋದನೆಯೊಂದಿಗೆ ಸಲ್ಲಿಸಿದ ಬಿಲ್ಲುಗಳನ್ನು ಮಾತ್ರ ಕ್ಲಿಯರ್ ಮಾಡುತ್ತೇವೆ. ಇಲ್ಲದಿದ್ದರೆ ಅದನ್ನು ತಡೆಹಿಡಿದು ವಿಚಾರಣೆ ನಡೆಸಲಾಗುವುದು” ಎಂದು ಅವರು ಹೇಳಿದರು.


ಓದಿ: ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...