Homeಕರೋನಾ ತಲ್ಲಣಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ 20-25 ಕೋಟಿ ರೂ. ಖರ್ಚು ಮಾಡಿದ ಬಿಬಿಎಂಪಿ!

ಒಂದೊಂದು ಪ್ರದೇಶದಲ್ಲಿ 15 ಸಾವಿರದಿಂದ ಹಿಡಿದು ಲಕ್ಷದವರೆಗೆ ಸೀಲ್‌ಡೌನ್‌ಗಾಗಿ ಖರ್ಚು ಮಾಡಿರುವುದು ಬಹಿರಂಗವಾಗಿದೆ.

- Advertisement -
- Advertisement -

ಕೊರೊನಾ ಪಾಸಿಟಿವ್ ರೋಗಿಗಳಿರುವ ಕಂಟೈನ್ಮೆಂಟ್ ಪ್ರದೇಶಗಳ ಸೀಲ್‌ಡೌನ್‌ಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸುಮಾರು 20-25 ಕೋಟಿ ರೂ. ಖರ್ಚು ಮಾಡಿದೆ ಎಂದು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ.

ಸೀಲ್ ಮಾಡಲು ಮಾಡಿದ ಖರ್ಚಿನ ಬಗ್ಗೆ ವಿವರವಾದ ವರದಿಯನ್ನು ಬಿಬಿಎಂಪಿ ತನ್ನ ಅಧಿಕಾರಿಗಳಿಂದ ಆಯುಕ್ತರು ಕೋರಿದ್ದಾರೆ. ಅನೇಕ ಕಂಟೈನ್ಮೆಂಟ್‌ಗಳಲ್ಲಿ ಸೀಲ್ ಮಾಡಲು 15,000 ರೂಗಳಿಂದ ಹಿಡಿದು ಹಲವಾರು ಲಕ್ಷದವರೆಗೆ ಖರ್ಚು ಮಾಡಿರುವುದನ್ನು ಅವರು ಬಹಿರಂಗಪಡಿಸಿದ್ದಾರೆ.

ಕಂಟೈನ್ಮೆಂಟ್ ಪ್ರದೇಶಗಳ ನಿರ್ವಹಣೆ ಮತ್ತು ಮನೆಗಳ ಸೀಲ್‌ಡೌನ್‌ಗೆ ಭಾರಿ ವೆಚ್ಚ ಮಾಡುತ್ತಿರುವುದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಷಯ ತನ್ನ ಗಮನಕ್ಕೆ ಬಂದಿದ್ದು, ಎಂಜಿನಿಯರ್‌ಗಳಿಂದ ವಿವರವಾದ ವರದಿಯನ್ನು ಕೋರಿದ್ದೇನೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಸೋಮವಾರ ವಿವಿಧ ವಲಯಗಳ ಎಂಜಿನಿಯರ್‌ಗಳೊಂದಿಗೆ ನಡೆದ ಸಭೆಯ ನಂತರ “ಆರ್.ಆರ್. ನಗರವೊಂದರಲ್ಲೆ, ಜೂನ್ ಮತ್ತು ಆಗಸ್ಟ್ ನಡುವೆ, ಕಟ್ಟಡಗಳು ಮತ್ತು ಲೇನ್‌ಗಳ ಸೀಲ್ ಡೌನ್‌ ಹಾಕಲು ಅಧಿಕಾರಿಗಳು 1.5 ಕೋಟಿ ರೂ.ಗಳಿಂದ ಹಿಡಿದು 2 ಕೋಟಿ ರೂ. ಖರ್ಚು ಮಾಡಿದ್ದಾರೆ. ಕೆಲವು ವಲಯಗಳ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ನಿಗದಿತ ದರಗಳ (ಎಸ್‌ಆರ್‌ ದರಗಳು) ಅನುಸಾರವಾಗಿ ಮನೆಗಳನ್ನು ಸೀಲ್ ಮಾಡಲು ಶೀಟ್‌ಗಳು ಮತ್ತು ಇತರ ವಸ್ತುಗಳನ್ನು ಖರೀದಿಸಿದರು. ಅವರು ಈ ವಸ್ತುಗಳನ್ನು ಪ್ರಕರಣಗಳು ವರದಿ ಮಾಡಿದ ಕಡೆ ಅದನ್ನು ಕೊ೦ಡೊಯ್ಯುತ್ತಾರೆ. ಆದರೆ ಒಂದು ವಲಯದಲ್ಲಿ ಅಧಿಕಾರಿಗಳು 2 ಕೋಟಿ ರೂ.ಯಷ್ಟು ಖರ್ಚು ಮಾಡಿದ್ದಾರೆ, ಎಲ್ಲಾ ವಲಯಗಳಲ್ಲಿ ನಾವು ಸುಮಾರು 20 ರಿಂದ 25 ಕೋಟಿ ರೂ. ಖರ್ಚು ಮಾಡಿರಬಹುದು. ನಾನು ಅವರೆಲ್ಲರನ್ನೂ ವಿವರವಾದ ವರದಿಗಾಗಿ ಕೇಳಿದ್ದೇನೆ” ಎಂದು ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

ಬಿಬಿಎಂಪಿಯಿಂದ ಯಾವುದೇ ಅಂದಾಜು ಅಥವಾ ಪೂರ್ವ ಅನುಮೋದನೆಯಿಲ್ಲದ ಸೀಲ್‌ಡೌನ್‌ಗಳಿಗೆ ಸಂಬಂಧಿಸಿದ ಯಾವುದೇ ಮಸೂದೆಗಳನ್ನು ಅನುಮೋದಿಸದಂತೆ ಮಂಜುನಾಥ್ ಪ್ರಸಾದ್ ಜಂಟಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

“ಅಂದಾಜುಗಳ ಆಧಾರದ ಮೇಲೆ ಸರಿಯಾದ ಕಾರ್ಯತತ್ಪರತೆ ಮತ್ತು ಪೂರ್ವ ಅನುಮೋದನೆಯೊಂದಿಗೆ ಸಲ್ಲಿಸಿದ ಬಿಲ್ಲುಗಳನ್ನು ಮಾತ್ರ ಕ್ಲಿಯರ್ ಮಾಡುತ್ತೇವೆ. ಇಲ್ಲದಿದ್ದರೆ ಅದನ್ನು ತಡೆಹಿಡಿದು ವಿಚಾರಣೆ ನಡೆಸಲಾಗುವುದು” ಎಂದು ಅವರು ಹೇಳಿದರು.


ಓದಿ: ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...