Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...