Homeಮುಖಪುಟಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಅಂಖಿ ದಾಸ್ ವಿರುದ್ಧ ಎಫ್‌ಐಆರ್!

ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ತಿವಾರಿ ಆರೋಪಿಸಿದ್ದಾರೆ.

- Advertisement -
- Advertisement -

ಆಗಸ್ಟ್ 17 ರಂದು ಪತ್ರಕರ್ತ ಅವೇಶ್ ತಿವಾರಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ರಾಯ್‌ಪುರ ಪೊಲೀಸರು ಫೇಸ್‌ಬುಕ್‌ ನ ಸಾರ್ವಜನಿಕ ನೀತಿ ನಿರ್ದೇಶಕರಾದ ಅಂಖಿ ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಛತ್ತೀಸ್‌ಗಢ ಮೂಲದ ಪತ್ರಕರ್ತ ಅವೇಶ್ ತಿವಾರಿ ಅವರು ಸಲ್ಲಿಸಿರುವ ದೂರಿನಲ್ಲಿ, “ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಲವಾರು ದ್ವೇಷ ಭಾಷಣ ಪೋಸ್ಟ್‌ಗಳನ್ನು ನಿರ್ಬಂಧಿಸದಂತೆ ಅಂಖಿ ದಾಸ್ ತನ್ನ ನೌಕರರ ಮೇಲೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದು ‘ಭಾರತೀಯ ಮಾರುಕಟ್ಟೆಯಲ್ಲಿ ರಾಜಕೀಯ ಲಾಭ ಗಳಿಸಲು’ ಮಾಡಲಾದ ಅಪರಾಧ ಎಂದು ತಿವಾರಿ ಆರೋಪಿಸಿದ್ದಾರೆ.

ನಿನ್ನೆಯೇ ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಅಂಖಿ ದಾಸ್ ಅವರ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತನಗೆ ಮಾರಣಾಂತಿಕ ಬೆದರಿಕೆ ಮತ್ತು ಆನ್‌ಲೈನ್ ಕಿರುಕುಳ ನೀಡಲಾಗುತ್ತಿದೆ ಎಂದು ದಾಸ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಆವೇಶ್ ತಿವಾರಿಯವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದ ಅವರು, ಆಗಸ್ಟ್ 16 ರಂದು ತಿವಾರಿ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

ಸುದ್ದಿ ಚಾನೆಲ್ ಸ್ವರಾಜ್ ಎಕ್ಸ್‌ಪ್ರೆಸ್‌ನ ರಾಜ್ಯ ಬ್ಯೂರೋ ಮುಖ್ಯಸ್ಥರಾಗಿರುವ ಛತ್ತೀಸ್‌ಗಢ ಮೂಲದ ಪತ್ರಕರ್ತ ತಿವಾರಿ ಈ ಆರೋಪಗಳನ್ನು ನಿರಾಕರಿಸಿದ್ದಾರೆ.

ಎರಡೂ ಎಫ್‌ಐಆರ್‌ಗಳು ಅಮೆರಿಕ ವಾಲ್‌ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ಫೇಸ್‌ಬುಕ್‌ ಮತ್ತು ಬಿಜೆಪಿ ನಂಟು ವರದಿಯ ನಂತರದ ಬೆಳವಣಿಗೆಗಳಾಗಿವೆ.

ತಿವಾರಿ ದೂರಿನ ಎಫ್‌ಐಆರ್‌ನಲ್ಲಿ ಇತರ ಇಬ್ಬರು ಫೇಸ್‌ಬುಕ್ ಬಳಕೆದಾರರಾದ ಛತ್ತೀಸ್‌ಗಢ ನಿವಾಸಿ ವಿವೇಕ್ ಸಿನ್ಹಾ ಮತ್ತು ಇಂದೋರ್ ನಿವಾಸಿ ರಾಮ್ ಸಾಹು ಅವರನ್ನೂ ಹೆಸರಿಸಲಾಗಿದೆ. ಸಿನ್ಹಾ ಮತ್ತು ಸಾಹು ಸೇರಿದಂತೆ ಅಂಖಿ ದಾಸ್  “ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಉದ್ದೇಶದಿಂದ ವಿಷಯವನ್ನು ಪ್ರಕಟಿಸಲು ಮತ್ತು ಪ್ರಸಾರ ಮಾಡಲು ಫೇಸ್‌ಬುಕ್ ಅನ್ನು ಬಳಸಿದ್ದಾರೆ” ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಿ ರಾಜಾ ಸಿಂಗ್, ಅನಂತ್‌ಕುಮಾರ್ ಹೆಗ್ಡೆ ಮತ್ತು ಕಪಿಲ್ ಮಿಶ್ರಾ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಮೇಲೆ ದ್ವೇಷ ಭಾಷಣ ನಿರ್ಬಂಧವನ್ನು ಅನ್ವಯಿಸದಂತೆ ಅಂಖಿ ದಾಸ್ ಫೇಸ್‌ಬುಕ್‌ನ್ನು ನಿರ್ಬಂಧಿಸಿದ್ದಾರೆ ಎಂದು ಅಮೇರಿಕದ ಪತ್ರಿಕೆ ವರದಿ ಮಾಡಿದ ನಂತರ ಎರಡೂ ಎಫ್‌ಐಆರ್‌ಗಳು ದಾಖಲಾಗಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ನಾನು ಎಂದಿಗೂ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ: ತಿವಾರಿ

ನಾನು ಎಂದಿಗೂ ಅಂಖಿ ದಾಸ್‌ ಅವರನ್ನು ಸಂಪರ್ಕಿಸಿಲ್ಲ ಮತ್ತು ಅವರೊಂದಿಗೆ ಸಂವಹನ ನಡೆಸಿಲ್ಲ. ಅವರಿಗೆ ಬೆದರಿಕೆ ಹಾಕಿರುವುದು ಸುಳ್ಳು ಸುದ್ದಿ ಎಂದು ಪತ್ರಕರ್ತ ತಿವಾರಿ ತಿಳಿಸಿದ್ದಾರೆ. ದೂರಿನಲ್ಲಿ ನನ್ನನ್ನು ಏಕೆ ಹೆಸರಿಸಲಾಗಿದೆ ಎಂದು ನನಗೆ ತಿಳಿದಿಲ್ಲ. ನಾನು ಸಹೋದ್ಯೋಗಿಗಳಿಂದ ಇದರ ಬಗ್ಗೆ ತಿಳಿದುಕೊಂಡೆ. ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಾಸ್ತವದಲ್ಲಿ ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿದ ವರದಿಯನ್ನು ನಾನು ಸರಳವಾಗಿ ಪೋಸ್ಟ್ ಮಾಡಿದ್ದೇನೆ ಎಂದು ತಿವಾರಿ ತಿಳಿಸಿದ್ದಾರೆ.

ಅಂಖಿ ದಾಸ್ ಕುರಿತು ಮಾತನಾಡಿದ್ದಕ್ಕಾಗಿ, ಸಾಹು ಮತ್ತು ಸಿನ್ಹಾ ನನಗೆ ಮಾರಣಾಂತಿಕ ಬೆದರಿಕೆಗಳನ್ನು ಹಾಕಿದ್ದಾರೆ ಎಂದು ತಿವಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ, ಸಿಎಎ-ಎನ್‌ಆರ್‌ಸಿ ಕುರಿತು ಫೇಸ್‌ಬುಕ್ ನನ್ನ ಪೋಸ್ಟ್‌ಗಳನ್ನು ನಿರ್ಬಂಧಿಸಿದೆ ಎಂದು ತಿವಾರಿ ಹೇಳಿದ್ದಾರೆ. ಫೆಬ್ರವರಿ 2019 ರಿಂದ ಸರ್ಕಾರದ ನೀತಿಗಳನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಸೂಕ್ತ ವಿವರಣೆಯಿಲ್ಲದೆ ಫೇಸ್‌ಬುಕ್ ತೆಗೆದುಹಾಕಿದೆ ಎಂದು ಅವರು ಆರೋಪಿಸಿದರು.

25 ವರ್ಷಗಳಿಂದ ಪತ್ರಕರ್ತನಾಗಿರುವ ನಾನು ಪ್ರಶ್ನೆಗಳನ್ನು ಕೇಳುವುದು ನನ್ನ ಕರ್ತವ್ಯ. ಆದರೆ ಪುಲ್ವಾಮಾ ದಾಳಿ, ಸಿಎಎ-ಎನ್‌ಆರ್‌ಸಿ ಮತ್ತು ಛತ್ತೀಸ್‌ಗಢದ ಬುಡಕಟ್ಟು ಸಮಸ್ಯೆಗಳು ಸೇರಿದಂತೆ ನನ್ನ ಹಲವಾರು ಪೋಸ್ಟ್‌ಗಳನ್ನು ಈ ಹಿಂದೆ ಫೇಸ್‌ಬುಕ್ ನಿರ್ಬಂಧಿಸಿದೆ ಎಂದು ತಿವಾರಿ ದೂರಿದ್ದಾರೆ.

ಭಿಲೈ ಅವರ ಬುಡಕಟ್ಟು ಆಂದೋಲನದ ಕುರಿತು ವೈರಲ್ ಆಗಿದ್ದ ನನ್ನ ಲೈವ್ ವೀಡಿಯೊ ಒಂದನ್ನು ಇದ್ದಕ್ಕಿದ್ದಂತೆ ನಿರ್ಬಂಧಿಸಲಾಗಿದೆ. ಇದು ಫೇಸ್‌ಬುಕ್ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ನನಗೆ ತಿಳಿಯಿತು. ಆದರೆ ನಾನು ಏನು ತಪ್ಪು ಮಾಡಿದೆ ಎಂದು ಫೇಸ್‌ಬುಕ್ ಎಂದಿಗೂ ವಿವರಿಸಲಿಲ್ಲ ಎಂದು ತಿವಾರಿ ಆರೋಪಿಸಿದರು.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...