Homeಮುಖಪುಟಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಬಡಜನರಿಗೆ ವಕೀಲೆಯಾಗಿದ್ದಕ್ಕೆ ಜೈಲಿಗೆ ಹೋದ ಐಐಟಿ ಪದವೀಧರೆ ಸುಧಾ ಭಾರದ್ವಾಜ್!

ಸುಧಾ ಭಾರದ್ವಾಜ್‌ರವರಿಗೆ ಬಾಂಬೆ ಹೈಕೋರ್ಟ್ ಡೀಫಾಲ್ಟ್ ಜಾಮೀನು ನೀಡಿದೆ. ಸುಪ್ರೀಂ ಅದನ್ನು ಎತ್ತಿ ಹಿಡಿದಿದೆ. ಇಂದು ಅವರು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

- Advertisement -
- Advertisement -

6ನೇ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಭಾವಚಿತ್ರ ಪ್ರದರ್ಶನದಲ್ಲಿ ಜಗತ್ತಿನಾದ್ಯಂತ ಕಾನೂನು ಹಾಗೂ ನೀತಿ ನಿರೂಪಣೆಯ ಕ್ಷೇತ್ರದಲ್ಲಿ ತಮ್ಮ ಅಮೂಲ್ಯ ಕೊಡುಗೆಗಳನ್ನು ನೀಡಿದ ಮಹಿಳೆಯರಿಗೆ ಗೌರವವನ್ನು ಸಲ್ಲಿಸಲಾಯಿತು. ಆ ಎಲ್ಲ ಮಹಿಳಾ ಪ್ರತಿನಿಧಿಗಳನ್ನು ಆಯ್ಕೆ ಮಾಡಿದವರು ಹಾರ್ವರ್ಡ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ. ಈ ಎಲ್ಲಾ ಮಹಿಳಾ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಗಟ್ಟಿಯಾದ ಧ್ವನಿಯನ್ನು ಮೊಳಗಿಸಿದವರು. ಅದು ಹೈಕೋರ್ಟಿನ ಬೆಂಚಿನಲ್ಲಿ ಕುಳಿತಾಗಿರಬಹುದು, ಕ್ಲಾಕ್‌ರೂಮಿನಲ್ಲಿ ವಿದ್ಯಾರ್ಥಿಗಳ ಎದುರು ನಿಂತಾಗಿರಬಹುದು ಅಥವಾ ರಸ್ತೆಗಳಲ್ಲಿ ಪ್ರತಿಭಟಿಸುವುದಾಗಿರಬಹುದು ಅಥವಾ ಜೈಲಿನಲ್ಲಿ ಕುಳಿತದ್ದಿರಬಹುದು.

ಅಡ್ವೋಕೇಟ್ ಸುಧಾ ಭಾರದ್ವಾಜ್‌ 2019ರ ಅಂತರಾಷ್ಟ್ರೀಯ ಹಾರ್ವರ್ಡ್ ಕಾನೂನು ಮಹಿಳಾ ದಿನಾಚರಣೆಯ ಗೌರವಾನ್ವಿತರಲ್ಲಿ ಒಬ್ಬರು. ಪುಣೆಯ ಜೈಲು ಕೋಣೆಯಲ್ಲಿ ಕುಳಿತಿರುವ ಅವರ ಚಿತ್ರ ಪ್ರದರ್ಶನಗೊಂಡಿತು. ಒಂದೇ ಸಮಯದಲ್ಲಿ ಈ ಎರಡು ಬಗೆಯ ವಿರೋಧಾಭಾಸಗಳು ಹೇಗೆ ಸಾಧ್ಯ?

ಇದನ್ನೂ ಓದಿ: ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಅತ್ಯಂತ ಪ್ರಸಿದ್ದ ತಂದೆತಾಯಿಯ ಮಗಳಾಗಿ ಅಮೆರಿಕದಲ್ಲಿ ಹುಟ್ಟಿದ ಸುಧಾ ತನ್ನ ವಿದ್ಯಾರ್ಥಿ ಜೀವನದ ಬಹುತೇಕ ಭಾಗವನ್ನು ಅಮೇರಿಕನ್ ಪ್ರಜೆಯಾಗಿ ಕಳೆದರು. ನಂತರ ಐಐಟಿ ಕಾನ್‌ಪುರದಲ್ಲಿ ಗಣಿತಶಾಸ್ತ್ರದಲ್ಲಿ ಪದವಿ ಗಳಿಸಿದರು. ಮುಂದಿನ 30 ವರ್ಷ ಛತ್ತಿಸಗಡ ಮುಕ್ತಿ ಮೋರ್ಚಾದ (CMM)ದಲ್ಲಿ ಟ್ರೇಡ್ ಯೂನಿಯನ್‌ನ ಭಾಗವಾಗಿ ನಿರಂತರ ಹೋರಾಟದಲ್ಲಿ ಕಳೆದರು. ಅದರ ನಂತರ ವಕೀಲಿ ವೃತ್ತಿ ಆರಂಭಿಸಿದರು. ಅದಕ್ಷ ವಕೀಲರುಗಳಿಂದ ಹಿನ್ನಡೆ ಅನುಭವಿಸುತ್ತಿದ್ದವರಿಗೆ ಸುಧಾ ಅವರ ದಕ್ಷತೆ, ಪ್ರಾಮಾಣಿಕತೆಯಲ್ಲಿ ಪ್ರಭಾವಶಾಲಿ ವಿರೋಧಿಗಳನ್ನು ಎದುರಿಸುವ ಹೊಸ ಭರವಸೆ ಕಂಡಿತು.

ಸುಧಾ ಅವರು ‘ಜನಹಿತ’ ಸ್ಥಾಪಿಸಿ ಅದರಿಂದ ಕಾರ್ಮಿಕರು, ಗಣಿ ಹಾಗೂ ಭೂಕಬಳಿಕೆಯ ವಿರುದ್ದ ಹೋರಾಡುತ್ತಿದ್ದ ಹಳ್ಳಿಗರು, ಅರಣ್ಯದಲ್ಲಿ ಹಕ್ಕುಗಳಿಗಾಗಿ ಹೋರಾಡುತ್ತಿರುವ ಆದಿವಾಸಿಗಳು ಪರವಾಗಿ ಮತ್ತು ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ಮುಂತಾದ ಕಡೆ ತೊಡಗಿಸಿಕೊಂಡರು. ಇಲ್ಲಿಯವರೆಗೆ ‘ಜನಹಿತ’ ಅನೇಕ ಪ್ರಭಾವಶಾಲಿ ಉದ್ಯಮಿಗಳ ವಿರುದ್ಧ ಕೇಸುಗಳನ್ನು ಹಾಕಿದೆ. ಅದರಲ್ಲಿ ಪ್ರಮುಖವಾಗಿ ಜಿಂದಾಲ್, ವೇದಾಂತ, ಬಾಲ್ಕೋ, ಲಫಾರ್ಚ್ ಹಾಲ್ಸಮ್, ಡಿ.ಬಿ ಪವರ್, ವಂದನಾ ವಿದ್ಯುತ್, SECL, , ಭಿಲಾಯ್ ಸ್ಟೀಲ್ ಪ್ಲಾಂಟ್, ಮಾನೆಟ್ ಸ್ಟೀಟ್, ಅದಾನಿ, ಹಿಂಡಾಲ್ಕೋ, ಗ್ರಾನೆಮ್, ಅಲ್ಟಾçಟೆಕ್ ಮತ್ತಿತರಿದ್ದಾರೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (PUCL)ನ ಅಂದಿನ ಅಧ್ಯಕ್ಷ ಬಿನಾಯಕ್ ಸೇನ್ ಅವರ ಬಂಧನದ ನಂತರ ಆ ಗುಂಪನ್ನು ಪುನರ್‌ರಚಿಸುವಲ್ಲಿ ಹಾಗೂ ಒಗ್ಗೂಡಿಸುವಲ್ಲಿ ಸುಧಾ ಅವರ ಕೊಡುಗೆ ಅಪಾರ. ನಂತರ ಸುಧಾ ಭಾರದ್ವಾಜ್ ಆ ಸಂಘಟನೆಗೆ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಆದರು. ಹಾಗೂ ಅಲ್ಪಸಂಖ್ಯಾತರು ಮತ್ತು ಮಾನವ ಕಳ್ಳ ಸಾಗಾಣಿಕೆಯಂತಹ ವಿಷಯಗಳಲ್ಲಿ ಕೆಲಸ ಮಾಡಿದರು. ಬಸ್ತರ್ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಬಲಿಪಶುಗಳಾದವರಿಗೆ ಸಹಾಯಹಸ್ತ ಚಾಚಿದರು. ಜೊತೆಗೆ ಆಡಳಿತದ ದೌರ್ಜನ್ಯ ಹಾಗೂ ದರ್ಪದ ವಿರುದ್ಧ ಧೈರ್ಯದಿಂದ ಎದುರುನಿಂತ ಕಾರ್ಯಕರ್ತರು ಹಾಗೂ ಪತ್ರಕರ್ತರಿಗೆ ಆಸರೆ ಒದಗಿಸಿದರು. ಇತ್ತೀಚೆಗೆ ‘ಇಂಡಿಯನ್ ಅಸೋಸಿಯೇಷನ್ ಆಫ್ ಪೀಪಲ್ಸ್ ಲಾರ‍್ಸ್ (IAPL)ಗೆ ಉಪಾಧ್ಯಕ್ಷೆಯಾಗಿ ಆಯ್ಕೆ ಆದರು.

ಸುಧಾ ದಲಿತರು ಹಾಗೂ ಮಾನವಹಕ್ಕು ವಕೀಲರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ಚಳವಳಿ ಪ್ರಾರಂಭಿಸಿದ್ದರು ಹಾಗೂ ಆ ವಿಷಯಗಳಲ್ಲಿ ಸತ್ಯಶೋಧಕ ಸಮಿತಿಯನ್ನು ರಚಿಸಿದ್ದರು.

ಸುಧಾ ಅವರನ್ನು ಅವರ ಫರೀದಾಬಾದ್‌ನ ಮನೆಯಿಂದ ಬಂಧಿಸಲಾಯಿತು. ಅಲ್ಲಿ ಅವರು ತಮ್ಮ ಮಗಳು ‘ಮಾಯ್‌ಶಾ’ ಜೊತೆ ಇರುತ್ತಿದ್ದರು. ಈ ಸಮಯದಲ್ಲಿ ಅವರು ದೆಹಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯಲ್ಲಿ ಅತಿಥಿ ಪ್ರಾಧ್ಯಾಪಕಿಯಾಗಿ, ಬುಡಕಟ್ಟು ಜನರ ಹಕ್ಕುಗಳು, ಭೂಕಬಳಿಕೆ, 5 ಮತ್ತು 6ನೇ ಶೆಡ್ಯೂಲುಗಳ ಮೇಲೆ ಸೆಮಿನಾರ್ ನೀಡುತ್ತಿದ್ದರು. ಈ ವರ್ಷ ಅವರು ‘ಪ್ರಪಂಚದ ಜಾಗತೀಕರಣದಲ್ಲಿ ಕಾನೂನು ಹಾಗೂ ನ್ಯಾಯ’ ಎಂಬ ವಿಷಯದ ಮೇಲೆ ಪಾಠ ಮಾಡಬೇಕಿತ್ತು. ದುರದೃಷ್ಟವಶಾತ್ ಅವರು ಜೈಲಿಗೆ ಹೋಗಿದ್ದರಿಂದ ಅದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಅಲ್ಲಿಯ ವಿದ್ಯಾರ್ಥಿಗಳು ವಿಷಾದ ವ್ಯಕ್ತಪಡಿಸುತ್ತಾರೆ.

ಸುಧಾ ಅವರ ಮಗಳು ಮಾಯ್‌ಶಾ ತಮ್ಮ ತಾಯಿಯ ದಣಿವರಿಯದ ಚೈತನ್ಯ ಹಾಗೂ ಅವರ ಕೆಲಸದ ಬಗೆಗಿನ ನಿಷ್ಠೆ ಬಗ್ಗೆ ‘ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವುದು, ಕಾರ್ಮಿಕರ ಮತ್ತು ರೈತರ ಮೇಲಾಗುವ ದಬ್ಬಾಳಿಕೆ ಹಾಗೂ ದೌರ್ಜನ್ಯಗಳ ವಿರುದ್ಧ ಹೋರಾಡುವುದು, ತಮ್ಮ ಇಡೀ ಜೀವನವನ್ನು ಇದಕ್ಕಾಗಿ ಮುಡಿಪಾಗಿಡುವುದನ್ನು ನಕ್ಸಲಿಸಂ ಎನ್ನುವುದಾದರೆ ನನಗನ್ನಿಸುವ ಮಟ್ಟಿಗೆ ನಕ್ಸಲರು ಒಳ್ಳೆಯವರು ಎಂದಾಯಿತು’ ಎಂದು ಹೇಳುತ್ತಾರೆ.

ಗುನೀತ್ ಅಹುಜಾ ಎಂಬ ದೆಹಲಿಯ ವಕೀಲರು ಸುಧಾ ಅವರ ಬಗ್ಗೆ ಬಹಿರಂಗ ಪತ್ರ ಬರೆಯುತ್ತಾ ‘ನಾನು ಮೊದಲ ಬಾರಿ ಸುಧಾ ಅವರನ್ನು ಭೆಟ್ಟಿ ಮಾಡಿದಾಗ 47ರ ಸ್ವಾತಂತ್ಯ್ರದ ಅನ್ವೇಷಣೆ ಹಾಗೂ 48ರ ಬಸ್ತರ್‌ದಲ್ಲಿನ ಸ್ವಾತಂತ್ರ‍್ಯದ ಅನ್ವೇಷಣೆ ಮತ್ತು ಅದರ ಸ್ಫರ್ಧಾತ್ಮಕ ನಿರೂಪಣೆಗಳ ಬಗ್ಗೆ ಮಾತಾಡಿದ್ದೆ. ಅವರು ನೀಡಿದ ಉತ್ತರ ನನ್ನ ಮೇಲೆ ಬಹಳ ದೊಡ್ಡ ಪ್ರಭಾವವನ್ನು ಬೀರಿದೆ’ ಎಂದು ಹೇಳುತ್ತಾರೆ.

ಸುಧಾ ಅವರು ತಾವು ಹೋರಾಡುವ ಪ್ರತಿಯೊಬ್ಬರಿಗೂ ಜೊತೆ ಸಾಗುವ ದಾರಿಹೋಕರಂತೆ. ಅವರು ಆ ದಾರಿ ನಮಗೆಲ್ಲರಿಗೂ ಸೇರಿದ್ದು ಎಂದು ನಂಬುತ್ತಾರೆ. ರಾಜ್ಯ ಆಡಳಿತ ಎಂಬುದು ಒಂದು ಕಾರಿದ್ದಂತೆ, ಅದಕ್ಕೆ ದಾರಿಯಲ್ಲಿ ಹೋಗುವ ಜನರನ್ನು ಕಂಡರೆ ಅಸಡ್ಡೆ ಹಾಗೂ ಅದು ರಸ್ತೆ ತನಗೆ ಸೇರಿದ್ದು ಎಂದುಕೊಳ್ಳುತ್ತದೆ. ಅದು ತನ್ನ ಆಪ್ತರ ಕೆಲಸಗಳಲ್ಲಿ ತನ್ನನ್ನು ಗುರುತಿಸಿಕೊಳ್ಳಬಯಸುತ್ತದೆ. ಆಡಳಿತಕ್ಕೆ ಸುಧಾ ಅವರ ಜಾಗ ಜೈಲು ಆದರೆ ನಮಗೆಲ್ಲ ಅವರೊಬ್ಬ ಮಾನವ ಹಕ್ಕುಗಳ ಪ್ರತಿಪಾದಕಿ.

ಕೃಪೆ: ಮುಂಬೈ ರೈಸಸ್ ಟು ಸೇವ್ ಡೆಮಾಕ್ರಸಿ
ಅನುವಾದ: ರಾಜಲಕ್ಷ್ಮಿಅಂಕಲಗಿ


ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸುದಾ ಭಾರದ್ವಾಜ್ ಮತ್ತು ಸಹವರ್ತಿ ಹೋರಾಟಗಾರರನ್ನು ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...