Homeಅಂತರಾಷ್ಟ್ರೀಯಕೊರೊನಾ ಸೇವೆ: ಭಾರತೀಯ ಮೂಲದ ವೈದ್ಯ ರವಿ ಸೋಲಂಕಿಗೆ ಇಂಗ್ಲೆಂಡ್ ಕಂಪನಿ ಪ್ರಶಸ್ತಿ

ಕೊರೊನಾ ಸೇವೆ: ಭಾರತೀಯ ಮೂಲದ ವೈದ್ಯ ರವಿ ಸೋಲಂಕಿಗೆ ಇಂಗ್ಲೆಂಡ್ ಕಂಪನಿ ಪ್ರಶಸ್ತಿ

- Advertisement -
- Advertisement -

ಇಂಗ್ಲೆಂಡ್‌ನಾದ್ಯಂತ ಕೊರೊನಾವನ್ನು ನಿಭಾಯಿಸುವಲ್ಲಿನ ಅಸಾಧಾರಣ ಸಾಧನೆಗಳಿಗಾಗಿ ರಾಯಲ್ ಅಕಾಡೆಮಿ ಆಫ್ ಎಂಜಿನಿಯರಿಂಗ್ ನೀಡುವ, ಸಾಂಕ್ರಾಮಿಕ ಸೇವೆಗಾಗಿ ವಿಶೇಷ ಪ್ರಶಸ್ತಿಗಳ 19 ಜನ ವಿಜೇತರಲ್ಲಿ ಭಾರತೀಯ ಮೂಲದ ವೈದ್ಯ ರವಿ ಸೋಲಂಕಿ ಕೂಡ ಸೇರಿದ್ದಾರೆ.

ಹೊಸ ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಚಾರಿಟಿಯು, ಸುರಕ್ಷಿತ ಮತ್ತು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ವೆಬ್‌ಸೈಟ್ ನಿರ್ಮಿಸಲು ಸಹಾಯ ಮಾಡುವ ಸ್ವಯಂಸೇವಕ ಕೆಲಸಕ್ಕಾಗಿ, ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳ ಬಗ್ಗೆ ಕೆಲಸ ಮಾಡುವ ವೈದ್ಯ ರವಿ ಸೋಲಂಕಿ ಮತ್ತು ಎಂಜಿನಿಯರ್ ರೇಮಂಡ್ ಸೀಮ್ಸ್ ಅವರಿಗೆ ಈ ಪ್ರಶಸ್ತಿ ನೀಡಿದೆ. ಈ ಕೆಲಸಕ್ಕಾಗಿ ಹೆಚ್ಚು ಸಮಯ ದುಡಿದು, ಉನ್ನತ ಸೇವೆ ಸಲ್ಲಿಸಿದ್ದಕ್ಕಾಗಿ ಇವರಿಬ್ಬರನ್ನು ಶ್ಲಾಘಿಸಲಾಯಿತು.

“ರವಿ ಮತ್ತು ರೇಮಂಡ್ ಅವರ ರೌಂಡ್-ದಿ-ಕ್ಲಾಕ್ ಕೊಡುಗೆಗಳು ಹೊಸ ಚಾರಿಟಿಯನ್ನು ಸಾರ್ವಜನಿಕ ಮನಸ್ಥಿತಿಗೆ ತಕ್ಕಂತೆ, ದೇಣಿಗೆಗಳನ್ನು ತ್ವರಿತವಾಗಿ ಸಂಗ್ರಹಿಸಲು ಅವಕಾಶ ಮಾಡಿಕೊಟ್ಟವು. ಇದರಿಂದಾಗಿ ಇಂಗ್ಲೆಂಡ್‌ನಲ್ಲಿ ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಎನ್ಎಚ್ಎಸ್ ಕಾರ್ಮಿಕರು ಅಗತ್ಯವಾದ ಬೆಂಬಲವನ್ನು ಪಡೆಯಬಹುದು” ಎಂದು ಉಲ್ಲೇಖಿಸಲಾಗಿದೆ.

“ಅವರ ತಾಂತ್ರಿಕ ತಿಳಿವಳಿಕೆ ಮೂರು ತಿಂಗಳಲ್ಲಿ 90,000 ಎನ್‌ಎಚ್‌ಎಸ್ ಕಾರ್ಮಿಕರನ್ನು ಬೆಂಬಲಿಸಲು ಹೀರೋಸ್‌ಗೆ ಅವಕಾಶ ಮಾಡಿಕೊಟ್ಟಿದೆ. ಡಿಜಿಟಲ್ ಪ್ಲಾಟ್‌ಫಾರ್ಮ್ ವಿಸ್ತರಿಸಲು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸುವ ಬೆಂಬಲವನ್ನು ಮುಂದುವರೆಸಲು ತಂಡದ ಕಾರ್ಯಗಳು ನಡೆಯುತ್ತಿವೆ” ಎಂದು ಅದು ಹೇಳಿದೆ.

ಎರಡು ದಿನಗಳಿಗಿಂತ ಕಡಿಮೆ ಅವಧಿಯಲ್ಲಿ, ಇದರ ಮೂಲಕ 5,43,000 ಕ್ಕೂ ಹೆಚ್ಚು ವಸ್ತುಗಳನ್ನು, ಸುಸ್ಥಿರ ಪಿಪಿಇಯಿಂದ ಮಕ್ಕಳ ಆರೈಕೆ ಮತ್ತು ಸಮಾಲೋಚನೆ ಸೇವೆಗಳವರೆಗೆ ಅಗತ್ಯ ಸೌಲಭ್ಯಗಳನ್ನು ಎನ್‌ಎಚ್‌ಎಸ್ ಕಾರ್ಮಿಕರಿಗೆ ಒದಗಿಸಲಾಗಿದೆ.

ಈ ವರ್ಷದ ಕೊನೆಯಲ್ಲಿ ಎಲ್ಲಾ 19 ವಿಜೇತರಿಗೆ ಪದಕಗಳನ್ನು ನೀಡಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೊರೊನಾ ಸಾಂಕ್ರಾಮಿಕವು ನಮ್ಮ ಕಾಲದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು. ಇದರಿಂದ ಸಮಾಜವು ಅನೇಕ ಸವಾಲುಗಳನ್ನು ಎದುರಿಸಿದೆ. ಎಂಜಿನಿಯರಿಂಗ್ ಪರಿಣತಿ ಮತ್ತು ನಾವೀನ್ಯತೆಯು ಜೀವಗಳನ್ನು ಉಳಿಸಲು ಮತ್ತು ಜೀವನೋಪಾಯವನ್ನು ರಕ್ಷಿಸುವ ಜಾಗತಿಕ ಹೋರಾಟದ ಕೇಂದ್ರವಾಗಿದೆ ಎಂದು ರಾಯಲ್ ಅಕಾಡೆಮಿ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಪ್ರೊಫೆಸರ್ ಸರ್ ಜಿಮ್ ಮೆಕ್ಡೊನಾಲ್ಡ್ ಹೇಳಿದ್ದಾರೆ.

ತಮ್ಮ ತರಬೇತಿ ಮತ್ತು ಕೌಶಲ್ಯಗಳನ್ನು ಬಳಸಿಕೊಂಡು ಹಲವಾರು ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಕಂಡುಹಿಡಿಯಲು ಮತ್ತು ಅದರ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುವ ಎಂಜಿನಿಯರ್‌ಗಳ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...