Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...