Homeಅಂತರಾಷ್ಟ್ರೀಯಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಇಂಡಿಯಾ ಬಗ್ಗೆ ವಿಚಾರಣೆ ನಡೆಸಿ: ಮಾರ್ಕ್ ಜುಕರ್‌ಬರ್ಗ್‌ಗೆ ಕೆ.ಸಿ.ವೇಣುಗೋಪಾಲ್ ಪತ್ರ

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಕಂಪನಿಯ ಪ್ರಧಾನ ಕಚೇರಿಯಿಂದ ಫೇಸ್‌ಬುಕ್ ಇಂಡಿಯಾ ನಾಯಕತ್ವದ ತಂಡದ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಫೇಸ್‌ಬುಕ್ ಮತ್ತು ಬಿಜೆಪಿ ಸಂಬಂಧದ ಕುರಿತು ಅಮೇರಿಕಾದ ವಾಲ್‌ಸ್ಟ್ರೀಟ್‌ ಜರ್ನಲ್ ನಲ್ಲಿ ಪ್ರಕಟವಾದ ವರದಿಯ ನಂತರ ಭಾರತದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇವುಗಳನ್ನು ಉಲ್ಲೇಖಿಸಿ, ವೇಣುಗೊಪಾಲ್ ಈ ಪತ್ರ ಬರೆದಿದ್ದಾರೆ.

ಫೇಸ್‌ಬುಕ್‌ನ ಪ್ರಧಾನ ಕಛೇರಿಯಿಂದ ಇದರ ಕುರಿತು ಉನ್ನತ ಮಟ್ಟದಲ್ಲಿ ವಿಚಾರಣೆ ನಡೆಯಬೇಕು ಎಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...