Homeಮುಖಪುಟಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ...

ಉತ್ತರ ಪ್ರದೇಶ: ಬ್ರಾಹ್ಮಣರ ಬಗ್ಗೆ ಸದನಕ್ಕೆ ಪ್ರಶ್ನೆ ಕೇಳಿ ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಜೆಪಿ ಶಾಸಕ

ದ್ವಿವೇದಿ ತಮ್ಮ ಪ್ರಶ್ನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಎಷ್ಟು ಬ್ರಾಹ್ಮಣರನ್ನು ಕೊಲ್ಲಲಾಗಿದೆ ಮತ್ತು ಈ ಅವಧಿಯಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಎಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಶಿಕ್ಷೆಗೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಯಬೇಕೆಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಸುಲ್ತಾನಪುರದ ಬಿಜೆಪಿ ಶಾಸಕ ದೇವ್ಮಣಿ ದ್ವಿವೇದಿ ಕಳೆದ ಮೂರು ವರ್ಷಗಳಲ್ಲಿ ಕೊಲ್ಲಲ್ಪಟ್ಟ ಬ್ರಾಹ್ಮಣರ ಸಂಖ್ಯೆಗೆ ಸಂಬಂಧಿಸಿ, ಮುಂಬರುವ ವಿಧಾನಸಭಾ ಅಧಿವೇಶನಕ್ಕೆ ಪ್ರಶ್ನೆ ಹಾಕುವ ಮೂಲಕ ತಮ್ಮದೇ ಪಕ್ಷವನ್ನು, ಸರ್ಕಾರವ್ನನ್ಉ ಮುಜುಗರಕ್ಕೀಡು ಮಾಡಿದ್ದಾರೆ.

ಶಾಸಕರು ತಮ್ಮ ‘ಅಲ್ಪಸೂಚಿತ’ (ಅಲ್ಪಾವಧಿಯ) ಪ್ರಶ್ನೆಯನ್ನು ವಿಧಾನಸಭಾ ಸಚಿವಾಲಯಕ್ಕೆ ಭಾನುವಾರ ಸಲ್ಲಿಸಿದರು. ಅಸೆಂಬ್ಲಿ ಅಧಿವೇಶನವು ಆಗಸ್ಟ್ 20 ರಂದು ಪ್ರಾರಂಭವಾಗಲಿದೆ ಎನ್ನಲಾಗಿತ್ತು ಆದರೆ ಕಾರಣಾತರಗಳಿಂದ ಆಗಸ್ಟ್ 21 ಕ್ಕೆ ಮುಂದೂಡಲ್ಪಟ್ಟಿತ್ತು.

ದ್ವಿವೇದಿ ತಮ್ಮ ಪ್ರಶ್ನೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಎಷ್ಟು ಬ್ರಾಹ್ಮಣರನ್ನು ಕೊಲ್ಲಲಾಗಿದೆ ಮತ್ತು ಈ ಅವಧಿಯಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಎಷ್ಟು ಪ್ರಕರಣದಲ್ಲಿ ಆರೋಪಿಗಳನ್ನು ಶಿಕ್ಷೆಗೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಯಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಬ್ರಾಹ್ಮಣರಿಗೆ ಭದ್ರತೆ ಒದಗಿಸುವ ಯೋಜನೆಯನ್ನು ರೂಪಿಸಿದೆಯೆ? ಹಾಗೂ ಬ್ರಾಹ್ಮಣರಿಗೆ ಆದ್ಯತೆಯ ಆಧಾರದ ಮೇಲೆ ಶಸ್ತ್ರಾಸ್ತ್ರ ಪರವಾನಗಿಗಳನ್ನು ನೀಡುತ್ತದೆಯೇ ಎಂದು ತಿಳಿಯಲು ಶಾಸಕರು ಒತ್ತಾಯಿಸಿದ್ದಾರೆ.

ಶಸ್ತ್ರಾಸ್ತ್ರ ಪರವಾನಗಿಗಾಗಿ ಅರ್ಜಿ ಸಲ್ಲಿಸಿದ ಬ್ರಾಹ್ಮಣರ ಸಂಖ್ಯೆ ಮತ್ತು ಅವರಲ್ಲಿ ಎಷ್ಟು ಜನರಿಗೆ  ಪರವಾನಗಿ ನೀಡಲಾಗಿದೆ ಎಂಬ ಬಗ್ಗೆಯೂ ಅವರು ಸರ್ಕಾರವನ್ನು ಕೇಳಿದ್ದಾರೆ.

ಶಾಸಕಾಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರು ಈ ರೀತಿ ಜಾತಿ ಆಧಾರಿತವಗಿ ಪ್ರಶ್ನೆಯನ್ನು ಕೇಳಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಸಲ್ಲಿಸಲಾದ ಶಾಸಕರ ಪ್ರಶ್ನೆಯಿಂದಾಗಿ ರಾಜ್ಯ ಸರ್ಕಾರದ ಮೇಲೆ ಪ್ರತಿಪಕ್ಷಗಳು ದಾಳಿ ನಡೆಸಿದ್ದಾರೆ.


ಓದಿ: ಯೋಗಿಯ ರಾಮರಾಜ್ಯ ದಲಿತರ ಪಾಲಿಗೆ ಸ್ಮಶಾನವಾಗಿದೆ : ಚಂದ್ರಶೇಖರ್‌ ರಾವಣ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...