Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...