Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...